Homeಮುಖಪುಟಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಳಿಕ ರಾಜಸ್ಥಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬಂದ್‌ಗೆ ಕರೆ

ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಳಿಕ ರಾಜಸ್ಥಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬಂದ್‌ಗೆ ಕರೆ

- Advertisement -
- Advertisement -

ಬಲಪಂಥೀಯ ಸಂಘಟನೆಯಾದ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆ ಬೆನ್ನಲ್ಲೇ ರಾಜಸ್ಥಾನದ ವಿವಿಧೆಡೆ ಪ್ರತಿಭಟನೆ ಭುಗಿಲೆದ್ದಿದ್ದು, ಇಂದು ರಾಜಸ್ಥಾನ ಬಂದ್‌ಗೆ ಕರ್ಣಿ ಸೇನೆ ಕರೆ ನೀಡಿದೆ.

ರಾಜಸ್ಥಾನದಲ್ಲಿ ರಜಪೂತ ನಾಯಕನ ಹತ್ಯೆಯು ಬಳಿಕ ಪ್ರತಿಭಟನೆ ಭುಗಿಲೆದ್ದಿದೆ. ಸುಖದೇವ್ ಸಿಂಗ್ ಗೊಗಮೆಡಿ ಬೆಂಬಲಿಗರು ಜೈಪುರದ ಆಸ್ಪತ್ರೆಯ ಹೊರಭಾಗದಲ್ಲಿ ರಸ್ತೆ ತಡೆದು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪ್ರತಿಭಟಿಸಿದ್ದಾರೆ. ಚುರು, ಉದಯಪುರ, ಅಲ್ವಾರ್ ಮತ್ತು ಜೋಧ್‌ಪುರ ಜಿಲ್ಲೆಗಳಲ್ಲಿಯೂ ಪ್ರತಿಭಟನೆಗಳು ಭುಗಿಲೆದ್ದಿವೆ.

ಆರೋಪಿಗಳ ಅಡಗು ತಾಣಗಳ ಮೇಲೆ ದಾಳಿ ನಡೆಸಿ ಶೀಘ್ರವಾಗಿ ಬಂಧಿಸಲಾಗುವುದು. ಯಾರೂ ಅಹಿತಕರ ಘಟನೆಗೆ ಆಸ್ಪದ ಕೊಡಬಾರದು. ಎಲ್ಲರೂ ಶಾಂತಿ ಕಾಪಾಡುವಂತೆ ರಾಜಸ್ಥಾನದ ಪೊಲೀಸ್ ಮುಖ್ಯಸ್ಥ ಉಮೇಶ್ ಮಿಶ್ರಾ ಮನವಿ ಮಾಡಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಕಂಡ ಬಳಿಕ ಇದೀಗ ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಸುಖದೇವ್ ಸಿಂಗ್ ಗೊಗಮೆಡಿ ಈ ಮೊದಲು ಮಾತನಾಡಿರುವ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದಿನ ಸಿಎಂ ಅಶೋಕ್ ಗೆಹ್ಲೂಟ್ ಅವರು ತಮ್ಮ ಭದ್ರತೆಯನ್ನು ಕಡಿತಗೊಳಿಸಿದ್ದಾರೆ ಎಂದು ವಿಡಿಯೊದಲ್ಲಿ ಗೊಗಮೆಡಿ ಹೇಳಿಕೊಂಡಿದ್ದರು.

ಮಾಜಿ ಸಿಎಂ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್, ರಾಜ್ಯವರ್ಧನ್ ರಾಥೋಡ್ ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಹತ್ಯೆಯನ್ನು ಖಂಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ರಾಜಸ್ಥಾನ ಜಂಗಲ್ ರಾಜ್‌ಗೆ ಮರಳಿದೆ ಎಂದು ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಸುಖದೇವ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಶೂಟೌಟ್‌ನ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಲಾಗಿದೆ. ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ರೋಹಿತ್ ಗೋಡಾರಾ ಕಪುರಿಸರ್ ಗೊಗಮೆಡಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದಾನೆ.

ಸುಖದೇವ್ ಸಿಂಗ್ ಗೊಗಮೆಡಿ ಅವರು ಲೋಕೇಂದ್ರ ಸಿಂಗ್ ಕಲ್ವಿಯವರ ರಜಪೂತ್ ಕರ್ಣಿ ಸೇನೆಯ ಭಾಗವಾಗಿದ್ದರು. ಈ ಸಂಘಟನೆ ಸಂಜಯ್ ಲೀಲಾ ಬನ್ಸಾಲಿಯವರ ‘ಪದ್ಮಾವತ್’ ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿತ್ತು. ನಂತರ ಆಂತರಿಕ ಗಲಾಟೆಯಿಂದ ಗೊಗಮೆಡಿ ತಮ್ಮದೇ ಪ್ರತ್ಯೇಕ ಕರ್ಣಿ ಸೇನೆಯನ್ನು ಕಟ್ಟಿದ್ದರು.

ದೀಪಿಕಾ ಪಡುಕೋಣೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡ ‘ಪದ್ಮಾವತ್’ ಸಿನಿಮಾ ವಿರೋಧಿಸಿ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣದ ನಂತರ ರಾಜಸ್ಥಾನದಲ್ಲಿ ಪ್ರತಿಭಟನೆ ನಡೆಸುವ ಗೊಗಮೆಡಿ ಬೆಳಕಿಗೆ ಬಂದಿದ್ದರು.

ಇದನ್ನು ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...