Homeಮುಖಪುಟಹಿಂದೂಗಳಿಗೆ ಮಾತ್ರ ಅನುಕೂಲವಾಗುವ 'ಕಾಲ್ ಹಿಂದೂ' ಉದ್ಯೋಗ ಪೋರ್ಟಲ್ ಉದ್ಘಾಟಿಸಿದ ಮಹಾರಾಷ್ಟ್ರ ಸಚಿವ!

ಹಿಂದೂಗಳಿಗೆ ಮಾತ್ರ ಅನುಕೂಲವಾಗುವ ‘ಕಾಲ್ ಹಿಂದೂ’ ಉದ್ಯೋಗ ಪೋರ್ಟಲ್ ಉದ್ಘಾಟಿಸಿದ ಮಹಾರಾಷ್ಟ್ರ ಸಚಿವ!

- Advertisement -
- Advertisement -

ಹಿಂದೂಗಳಿಗೆ ಮಾತ್ರ ಅನುಕೂಲವಾಗುವ “ಕಾಲ್ ಹಿಂದೂ ಜಾಬ್ಸ್” ಎಂಬ ಡಿಜಿಟಲ್ ಉದ್ಯೋಗ ವೇದಿಕೆಯನ್ನು ಮಹಾರಾಷ್ಟ್ರ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರು ಉದ್ಘಾಟಿಸಿ ವಿವಾದ ಸೃಷ್ಟಿಸಿದ್ದಾರೆ. ಅದಾಗ್ಯೂ, ವೆಬ್‌ಸೈಟ್ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ವರದಿಯಾಗಿದೆ.

ಹಿಂದೂ ಜಾಗರಣ್ ಮಂಚ್ ಸದಸ್ಯ, ಯುವ ಮೋರ್ಚಾದ ಮಾಜಿ ರಾಜ್ಯ ನಾಯಕ ವಿಶಾಲ್ ದುರಾಫೆ ಅವರು ಈ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಹಿಂದೂ ಜಾಗರಣ್ ಮಂಚ್ ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್‌ ಸಂಯೋಜಿತವಾಗಿರುವ ಹಿಂದುತ್ವ ದುಷ್ಕರ್ಮಿಗಳ ಗುಂಪಾಗಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆಯನ್ನು ಹೊಂದಿರುವ ಸಚಿವ ಲೋಧಾ ಅವರು ಬುಧವಾರ ಉದ್ಯೋಗ ಪೋರ್ಟಲ್ ಅನ್ನು ಉದ್ಘಾಟಿಸಿದ್ದು, ಇದು ಯುವಕರಿಗೆ ಉದ್ಯೋಗಗಳನ್ನು ಹುಡುಕಲು ಮತ್ತು ಅವರಿಗೆ ಸ್ವಯಂ ಉದ್ಯೋಗದ ಬಗ್ಗೆ ಕಲಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

“ಇದು ಮಾರ್ಕೆಟಿಂಗ್ ಬಗ್ಗೆ ತರಬೇತಿಯನ್ನು ಸಹ ನೀಡುತ್ತದೆ. ದುರಾಫೆ ಉತ್ತಮ ಕೆಲಸ ಮಾಡಿದ್ದು, ಮಹಾರಾಷ್ಟ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗದ ಅಗತ್ಯವಿದೆ. ನಾನು ಉದ್ಯೋಗ ಖಾತೆಯನ್ನು ಹೊಂದಿರುವುದರಿಂದ ಇದನ್ನು ಉದ್ಘಾಟಿಸಿದೆ.” ಎಂದು ಸಚಿವರು ಹೇಳಿದ್ದಾರೆ.

ಸರ್ಕಾರಿ ಪ್ರತಿನಿಧಿಗಳು ಹಿಂದೂಗಳಿಗೆ ಮಾತ್ರ ಅನುಕೂಲವಾಗುವ ಉಪಕ್ರಮಗಳನ್ನು ಉತ್ತೇಜಿಸುವುದು ಸೂಕ್ತವೇ ಎಂಬ ಪ್ರಶ್ನೆಗೆ ಉತ್ತರಿಸಿದ ಲೋಧಾ, “ಯಾರಾದರೊಬ್ಬರು ಹಿಂದೂ ಸಮುದಾಯಕ್ಕೆ ಮಾತ್ರ ರಚನಾತ್ಮಕ ಕೆಲಸ ಮಾಡಲು ನಿರ್ಧರಿಸಿದರೆ ಅದರಲ್ಲಿ ಯಾವುದೇ ತಪ್ಪಿಲ್ಲ. ನಾಳೆ ಬೇರೆ ಯಾವುದೇ ಸಮುದಾಯವು ಇದೇ ರೀತಿಯ ಉಪಕ್ರಮದೊಂದಿಗೆ ಮುಂದೆ ಬಂದರೆ, ಸರ್ಕಾರವು ಅವರನ್ನು ಬೆಂಬಲಿಸುತ್ತದೆ” ಎಂದು ಅವರು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಯಾರೂ ಅಪ್ಲಿಕೇಶನ್ ಬಳಸುವುದನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ಅವರ ಸ್ವಂತ ಭಾವನೆಯಿಂದ ಅವರು ಪೋರ್ಟಲ್ ಅನ್ನು ಹಿಂದೂಗಳಿಗಾಗಿ ಹೆಸರಿಸಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಯಾರಾದರೂ ಅದನ್ನು ಬಳಸಿದರೆ, ಯಾರೂ ಅದಕ್ಕೆ ಇಲ್ಲ ಎಂದು ಹೇಳುವುದಿಲ್ಲ” ಎಂದು ಸಚಿವ ಲೋಧಾ ಹೇಳಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಹಿಂದೂಗಳಿಗೆ ಉದ್ಯೋಗಗಳು ಮತ್ತು ಸಮುದಾಯದ ಉದ್ಯಮಿಗಳಿಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲಗಳನ್ನು ಒದಗಿಸುವುದು ಪೋರ್ಟಲ್‌ನ ಉದ್ದೇಶವಾಗಿದೆ ಎಂದು ಡುರಾಫೆ ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಸ್ವ-ಉದ್ಯೋಗ, ಇ-ಕಾಮರ್ಸ್ ಮತ್ತು ವಿವಾಹದಂತಹ ಹೆಚ್ಚಿನ ವಿಭಾಗಗಳನ್ನು ಪೋರ್ಟಲ್‌ಗೆ ಪರಿಚಯಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹಿಂದೂಗಳು ಮಾತ್ರ ವೆಬ್‌ಸೈಟ್‌ನಲ್ಲಿ ಉದ್ಯೋಗಗಳನ್ನು ಹುಡುಕಲು ಮತ್ತು ನೀಡಲು ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ಡುರಾಫೆ, “ಅದು ಅಗತ್ಯವಿಲ್ಲ.” ಎಂದು ಹೇಳಿದ್ದಾರೆ.

ಒಂದು ಸಮುದಾಯಕ್ಕಾಗಿ ವಿನ್ಯಾಸಗೊಳಿಸಲಾದ ವೇದಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಲೋಧಾ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಶರದ್ಚಂದ್ರ ಪವಾರ್) ವಕ್ತಾರ ಮಹೇಶ್ ತಪಸೆ ಟೀಕಿಸಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

“ಯಾವುದೇ ಸಚಿವರು ಸಂವಿಧಾನದಂತೆ ಕೆಲಸ ಮಾಡಬೇಕು. ಅದು ಎಲ್ಲರಿಗೂ ಸಮಾನ ಅವಕಾಶವನ್ನು ಸ್ಪಷ್ಟವಾಗಿ ಹೇಳುತ್ತದೆ. ಸಚಿವರು ಕೋಮು ಉದ್ಯೋಗ ಪೋರ್ಟಲ್ ಅನ್ನು ಅನುಮೋದಿಸಿದರೆ, ಅವರು ಸಚಿವರಾಗಿ ಅವರು ವಹಿಸಬೇಕಾದ ಪಾತ್ರವನ್ನು ಅವರು ಅರ್ಥಮಾಡಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.” ಎಂದು ತಪಸೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...