Homeಮುಖಪುಟರೈತರಿಗೆ 'ಜಾತಿ' ಉಲ್ಲೇಖಿಸಿ ಸಮನ್ಸ್‌ ಪ್ರಕರಣ: 'ED' ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ನಾಯಕನ ವಿರುದ್ಧ ಭೂಕಬಳಿಕೆ ಆರೋಪವನ್ನು ಹೊರಿಸಿದ್ದ ಇಬ್ಬರು ಬಡ ದಲಿತ ರೈತರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ’ ಸಮನ್ಸ್‌ ಪ್ರಕರಣ ಬಯಲಾಗಿತ್ತು. ಪ್ರಕರಣವು ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೆ ಸಮನ್ಸ್‌ನಲ್ಲಿ ‘ಇಡಿ’ ಅಧಿಕಾರಿಗಳು ರೈತರ ಜಾತಿಯನ್ನು ಉಲ್ಲೇಖಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷದ ಅಧ್ಯಕ್ಷ, ಸಂಸದ ತೊಲ್ ತಿರುಮಾವಳವನ್ ಮತ್ತು ಪುದಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಕುರಿತು ಖಂಡನೆಯನ್ನು ವ್ಯಕ್ತಪಡಿಸಿದ್ದು, ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ನೀಡಿದ ಸಮನ್ಸ್‌ನಲ್ಲಿ ‘ಹಿಂದೂ ಪಲ್ಲರ್‌ಸ್’ ಎಂದು ಜಾತಿ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದು ಆಘಾತಕಾರಿ ಬೆಳವಣಿಗೆಯಾಗಿದೆ. ಜಾರಿ ನಿರ್ದೇಶನಾಲಯದ ಈ ಅತಿರೇಕದ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಪುತಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಬಗ್ಗೆ ಮಾತನಾಡಿದ್ದು, ಪತ್ರವನ್ನು ಕಳುಹಿಸುವಾಗ, ಸ್ವೀಕರಿಸುವವರ ಹೆಸರು, ತಂದೆಯ ಹೆಸರು, ಡೋರ್ ನಂಬರ್, ಬೀದಿ, ಗ್ರಾಮದ ಹೆಸರು, ಜಿಲ್ಲೆ ಮತ್ತು ಇತರ ವಿವರಗಳನ್ನು ಮಾತ್ರ ನಮೂದಿಸಲಾಗುತ್ತದೆ. ಆದರೆ ‘ಇಡಿ’ ಇಬ್ಬರು ರೈತರ ಜಾತಿ ಹೆಸರುಗಳನ್ನು ಉಲ್ಲೇಖಿಸಿದೆ  ‘ಪಲ್ಲರ್’ ಎಂಬ ಹೆಸರನ್ನು ದೇವಂದ್ರ ಕುಳ್ಳ ವೆಳ್ಳಾಲರ್ ಎಂದು ಬದಲಿಸಿ ಸುಮಾರು ಎರಡು ವರ್ಷಗಳಾಗಿವೆ. ಇದು ‘ಇಡಿ’ ಗಮನಕ್ಕೆ ಬಂದಿಲ್ಲವೇ?  ಜಾತಿಯ ಹೆಸರನ್ನು ಉಲ್ಲೇಖಿಸುವುದು ಅಪರಾಧ ಮಾತ್ರವಲ್ಲ, ಇದರಲ್ಲಿ ಯಾವುದೋ ದುರುದ್ದೇಶ ಇದ್ದಂತೆ ಕಾಣುತ್ತದೆ. ಇಡಿಯ ಉನ್ನತ ಅಧಿಕಾರಿಗಳು ಸಮನ್ಸ್‌ಗೆ ವಿವರಣೆಯನ್ನು ನೀಡಬೇಕು. ರೈತರ ಜಾತಿ ಗುರುತನ್ನು ಉಲ್ಲೇಖಿಸಿ ಪತ್ರವನ್ನು ಕಳುಹಿಸಿದ ‘ಇಡಿ’  ಅಧಿಕಾರಿಗಳ ವಿರುದ್ಧ ಎಸ್ಸಿ- ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕೃಷ್ಣಸಾಮಿ ಅವರು ಆಗ್ರಹಿಸಿದ್ದಾರೆ.

70ರ ಹರೆಯದ ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್  ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಸ್ವೀಕರಿಸಿದ್ದಾರೆ. 6.5 ಎಕರೆ ಕೃಷಿ ಭೂಮಿ ಹೊಂದಿರುವ ಇಬ್ಬರು ಬಡ ಕಟುಂಬದ ಸಹೋದರರನ್ನು ‘ಇಡಿ’ ವಿಚಾರಣೆಗೆ ಕರೆದಿದೆ. ಇದರ ಬೆನ್ನಲ್ಲಿ ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದಕ್ಕೆ ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ‘ಇಡಿ’ ಹಿಂಬಾಲಿಸಿವೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದಾರೆ.

ಕಣ್ಣಿಯಾನ್ ಮತ್ತು ಕೃಷ್ಣನ್ ಅವರು ಸೇಲಂ ಜಿಲ್ಲೆಯ ಅತ್ತೂರು ಬಳಿಯ ರಾಮನಾಯ್ಕನ್‌ಪಾಳ್ಯಂನಲ್ಲಿ 6.5 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ ಮತ್ತು ಅವರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ಗುಣಶೇಖರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಮತ್ತು 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಕೃಷ್ಣನ್ ಮತ್ತು ಗುಣಶೇಖರ್ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದ ಸಿವಿಲ್ ಪ್ರಕರಣವು ಅತ್ತೂರು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಈ ಕುರಿತು ತಿರುಮಾವಳವನ್ ಪ್ರತಿಕ್ರಿಯಿಸಿದ್ದು, ಗುಣಶೇಖರ್ ಅವರ ಸೂಚನೆಯ ಮೇರೆಗೆ ಇಡಿ ಕಾರ್ಯನಿರ್ವಹಿಸುತ್ತಿದೆ ಎಂದು ತೋರುತ್ತದೆ. ಇಡಿ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡನನ್ನು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಪೊಲೀಸರು ದಲಿತ ರೈತರಾದ ಕೃಷ್ಣನ್ ಮತ್ತು ಕನ್ನೈಯನ್ ಅವರಿಗೆ ರಕ್ಷಣೆಯನ್ನು ನೀಡಬೇಕು. ತಮ್ಮ ಸ್ವಂತ ಭೂಮಿಯಲ್ಲಿ ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರಿಗೆ ಅನುಮತಿಸಬೇಕು. ಪಕ್ಷದ ಹೆಸರನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಉದ್ದೇಶದಿಂದ ಬಡ ರೈತರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವ ಗುಣಶೇಖರ್ ಅವರನ್ನು ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...