Homeಮುಖಪುಟರೈತರಿಗೆ 'ಜಾತಿ' ಉಲ್ಲೇಖಿಸಿ ಸಮನ್ಸ್‌ ಪ್ರಕರಣ: 'ED' ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ನಾಯಕನ ವಿರುದ್ಧ ಭೂಕಬಳಿಕೆ ಆರೋಪವನ್ನು ಹೊರಿಸಿದ್ದ ಇಬ್ಬರು ಬಡ ದಲಿತ ರೈತರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ’ ಸಮನ್ಸ್‌ ಪ್ರಕರಣ ಬಯಲಾಗಿತ್ತು. ಪ್ರಕರಣವು ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೆ ಸಮನ್ಸ್‌ನಲ್ಲಿ ‘ಇಡಿ’ ಅಧಿಕಾರಿಗಳು ರೈತರ ಜಾತಿಯನ್ನು ಉಲ್ಲೇಖಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷದ ಅಧ್ಯಕ್ಷ, ಸಂಸದ ತೊಲ್ ತಿರುಮಾವಳವನ್ ಮತ್ತು ಪುದಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಕುರಿತು ಖಂಡನೆಯನ್ನು ವ್ಯಕ್ತಪಡಿಸಿದ್ದು, ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ನೀಡಿದ ಸಮನ್ಸ್‌ನಲ್ಲಿ ‘ಹಿಂದೂ ಪಲ್ಲರ್‌ಸ್’ ಎಂದು ಜಾತಿ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದು ಆಘಾತಕಾರಿ ಬೆಳವಣಿಗೆಯಾಗಿದೆ. ಜಾರಿ ನಿರ್ದೇಶನಾಲಯದ ಈ ಅತಿರೇಕದ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಪುತಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಬಗ್ಗೆ ಮಾತನಾಡಿದ್ದು, ಪತ್ರವನ್ನು ಕಳುಹಿಸುವಾಗ, ಸ್ವೀಕರಿಸುವವರ ಹೆಸರು, ತಂದೆಯ ಹೆಸರು, ಡೋರ್ ನಂಬರ್, ಬೀದಿ, ಗ್ರಾಮದ ಹೆಸರು, ಜಿಲ್ಲೆ ಮತ್ತು ಇತರ ವಿವರಗಳನ್ನು ಮಾತ್ರ ನಮೂದಿಸಲಾಗುತ್ತದೆ. ಆದರೆ ‘ಇಡಿ’ ಇಬ್ಬರು ರೈತರ ಜಾತಿ ಹೆಸರುಗಳನ್ನು ಉಲ್ಲೇಖಿಸಿದೆ  ‘ಪಲ್ಲರ್’ ಎಂಬ ಹೆಸರನ್ನು ದೇವಂದ್ರ ಕುಳ್ಳ ವೆಳ್ಳಾಲರ್ ಎಂದು ಬದಲಿಸಿ ಸುಮಾರು ಎರಡು ವರ್ಷಗಳಾಗಿವೆ. ಇದು ‘ಇಡಿ’ ಗಮನಕ್ಕೆ ಬಂದಿಲ್ಲವೇ?  ಜಾತಿಯ ಹೆಸರನ್ನು ಉಲ್ಲೇಖಿಸುವುದು ಅಪರಾಧ ಮಾತ್ರವಲ್ಲ, ಇದರಲ್ಲಿ ಯಾವುದೋ ದುರುದ್ದೇಶ ಇದ್ದಂತೆ ಕಾಣುತ್ತದೆ. ಇಡಿಯ ಉನ್ನತ ಅಧಿಕಾರಿಗಳು ಸಮನ್ಸ್‌ಗೆ ವಿವರಣೆಯನ್ನು ನೀಡಬೇಕು. ರೈತರ ಜಾತಿ ಗುರುತನ್ನು ಉಲ್ಲೇಖಿಸಿ ಪತ್ರವನ್ನು ಕಳುಹಿಸಿದ ‘ಇಡಿ’  ಅಧಿಕಾರಿಗಳ ವಿರುದ್ಧ ಎಸ್ಸಿ- ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕೃಷ್ಣಸಾಮಿ ಅವರು ಆಗ್ರಹಿಸಿದ್ದಾರೆ.

70ರ ಹರೆಯದ ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್  ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಸ್ವೀಕರಿಸಿದ್ದಾರೆ. 6.5 ಎಕರೆ ಕೃಷಿ ಭೂಮಿ ಹೊಂದಿರುವ ಇಬ್ಬರು ಬಡ ಕಟುಂಬದ ಸಹೋದರರನ್ನು ‘ಇಡಿ’ ವಿಚಾರಣೆಗೆ ಕರೆದಿದೆ. ಇದರ ಬೆನ್ನಲ್ಲಿ ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದಕ್ಕೆ ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ‘ಇಡಿ’ ಹಿಂಬಾಲಿಸಿವೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದಾರೆ.

ಕಣ್ಣಿಯಾನ್ ಮತ್ತು ಕೃಷ್ಣನ್ ಅವರು ಸೇಲಂ ಜಿಲ್ಲೆಯ ಅತ್ತೂರು ಬಳಿಯ ರಾಮನಾಯ್ಕನ್‌ಪಾಳ್ಯಂನಲ್ಲಿ 6.5 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ ಮತ್ತು ಅವರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ಗುಣಶೇಖರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಮತ್ತು 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಕೃಷ್ಣನ್ ಮತ್ತು ಗುಣಶೇಖರ್ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದ ಸಿವಿಲ್ ಪ್ರಕರಣವು ಅತ್ತೂರು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಈ ಕುರಿತು ತಿರುಮಾವಳವನ್ ಪ್ರತಿಕ್ರಿಯಿಸಿದ್ದು, ಗುಣಶೇಖರ್ ಅವರ ಸೂಚನೆಯ ಮೇರೆಗೆ ಇಡಿ ಕಾರ್ಯನಿರ್ವಹಿಸುತ್ತಿದೆ ಎಂದು ತೋರುತ್ತದೆ. ಇಡಿ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡನನ್ನು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಪೊಲೀಸರು ದಲಿತ ರೈತರಾದ ಕೃಷ್ಣನ್ ಮತ್ತು ಕನ್ನೈಯನ್ ಅವರಿಗೆ ರಕ್ಷಣೆಯನ್ನು ನೀಡಬೇಕು. ತಮ್ಮ ಸ್ವಂತ ಭೂಮಿಯಲ್ಲಿ ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರಿಗೆ ಅನುಮತಿಸಬೇಕು. ಪಕ್ಷದ ಹೆಸರನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಉದ್ದೇಶದಿಂದ ಬಡ ರೈತರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವ ಗುಣಶೇಖರ್ ಅವರನ್ನು ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...