Homeಮುಖಪುಟರೈತರಿಗೆ 'ಜಾತಿ' ಉಲ್ಲೇಖಿಸಿ ಸಮನ್ಸ್‌ ಪ್ರಕರಣ: 'ED' ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ನಾಯಕನ ವಿರುದ್ಧ ಭೂಕಬಳಿಕೆ ಆರೋಪವನ್ನು ಹೊರಿಸಿದ್ದ ಇಬ್ಬರು ಬಡ ದಲಿತ ರೈತರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ’ ಸಮನ್ಸ್‌ ಪ್ರಕರಣ ಬಯಲಾಗಿತ್ತು. ಪ್ರಕರಣವು ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೆ ಸಮನ್ಸ್‌ನಲ್ಲಿ ‘ಇಡಿ’ ಅಧಿಕಾರಿಗಳು ರೈತರ ಜಾತಿಯನ್ನು ಉಲ್ಲೇಖಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷದ ಅಧ್ಯಕ್ಷ, ಸಂಸದ ತೊಲ್ ತಿರುಮಾವಳವನ್ ಮತ್ತು ಪುದಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಕುರಿತು ಖಂಡನೆಯನ್ನು ವ್ಯಕ್ತಪಡಿಸಿದ್ದು, ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ನೀಡಿದ ಸಮನ್ಸ್‌ನಲ್ಲಿ ‘ಹಿಂದೂ ಪಲ್ಲರ್‌ಸ್’ ಎಂದು ಜಾತಿ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದು ಆಘಾತಕಾರಿ ಬೆಳವಣಿಗೆಯಾಗಿದೆ. ಜಾರಿ ನಿರ್ದೇಶನಾಲಯದ ಈ ಅತಿರೇಕದ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಪುತಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಬಗ್ಗೆ ಮಾತನಾಡಿದ್ದು, ಪತ್ರವನ್ನು ಕಳುಹಿಸುವಾಗ, ಸ್ವೀಕರಿಸುವವರ ಹೆಸರು, ತಂದೆಯ ಹೆಸರು, ಡೋರ್ ನಂಬರ್, ಬೀದಿ, ಗ್ರಾಮದ ಹೆಸರು, ಜಿಲ್ಲೆ ಮತ್ತು ಇತರ ವಿವರಗಳನ್ನು ಮಾತ್ರ ನಮೂದಿಸಲಾಗುತ್ತದೆ. ಆದರೆ ‘ಇಡಿ’ ಇಬ್ಬರು ರೈತರ ಜಾತಿ ಹೆಸರುಗಳನ್ನು ಉಲ್ಲೇಖಿಸಿದೆ  ‘ಪಲ್ಲರ್’ ಎಂಬ ಹೆಸರನ್ನು ದೇವಂದ್ರ ಕುಳ್ಳ ವೆಳ್ಳಾಲರ್ ಎಂದು ಬದಲಿಸಿ ಸುಮಾರು ಎರಡು ವರ್ಷಗಳಾಗಿವೆ. ಇದು ‘ಇಡಿ’ ಗಮನಕ್ಕೆ ಬಂದಿಲ್ಲವೇ?  ಜಾತಿಯ ಹೆಸರನ್ನು ಉಲ್ಲೇಖಿಸುವುದು ಅಪರಾಧ ಮಾತ್ರವಲ್ಲ, ಇದರಲ್ಲಿ ಯಾವುದೋ ದುರುದ್ದೇಶ ಇದ್ದಂತೆ ಕಾಣುತ್ತದೆ. ಇಡಿಯ ಉನ್ನತ ಅಧಿಕಾರಿಗಳು ಸಮನ್ಸ್‌ಗೆ ವಿವರಣೆಯನ್ನು ನೀಡಬೇಕು. ರೈತರ ಜಾತಿ ಗುರುತನ್ನು ಉಲ್ಲೇಖಿಸಿ ಪತ್ರವನ್ನು ಕಳುಹಿಸಿದ ‘ಇಡಿ’  ಅಧಿಕಾರಿಗಳ ವಿರುದ್ಧ ಎಸ್ಸಿ- ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕೃಷ್ಣಸಾಮಿ ಅವರು ಆಗ್ರಹಿಸಿದ್ದಾರೆ.

70ರ ಹರೆಯದ ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್  ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಸ್ವೀಕರಿಸಿದ್ದಾರೆ. 6.5 ಎಕರೆ ಕೃಷಿ ಭೂಮಿ ಹೊಂದಿರುವ ಇಬ್ಬರು ಬಡ ಕಟುಂಬದ ಸಹೋದರರನ್ನು ‘ಇಡಿ’ ವಿಚಾರಣೆಗೆ ಕರೆದಿದೆ. ಇದರ ಬೆನ್ನಲ್ಲಿ ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದಕ್ಕೆ ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ‘ಇಡಿ’ ಹಿಂಬಾಲಿಸಿವೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದಾರೆ.

ಕಣ್ಣಿಯಾನ್ ಮತ್ತು ಕೃಷ್ಣನ್ ಅವರು ಸೇಲಂ ಜಿಲ್ಲೆಯ ಅತ್ತೂರು ಬಳಿಯ ರಾಮನಾಯ್ಕನ್‌ಪಾಳ್ಯಂನಲ್ಲಿ 6.5 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ ಮತ್ತು ಅವರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ಗುಣಶೇಖರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಮತ್ತು 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಕೃಷ್ಣನ್ ಮತ್ತು ಗುಣಶೇಖರ್ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದ ಸಿವಿಲ್ ಪ್ರಕರಣವು ಅತ್ತೂರು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಈ ಕುರಿತು ತಿರುಮಾವಳವನ್ ಪ್ರತಿಕ್ರಿಯಿಸಿದ್ದು, ಗುಣಶೇಖರ್ ಅವರ ಸೂಚನೆಯ ಮೇರೆಗೆ ಇಡಿ ಕಾರ್ಯನಿರ್ವಹಿಸುತ್ತಿದೆ ಎಂದು ತೋರುತ್ತದೆ. ಇಡಿ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡನನ್ನು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಪೊಲೀಸರು ದಲಿತ ರೈತರಾದ ಕೃಷ್ಣನ್ ಮತ್ತು ಕನ್ನೈಯನ್ ಅವರಿಗೆ ರಕ್ಷಣೆಯನ್ನು ನೀಡಬೇಕು. ತಮ್ಮ ಸ್ವಂತ ಭೂಮಿಯಲ್ಲಿ ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರಿಗೆ ಅನುಮತಿಸಬೇಕು. ಪಕ್ಷದ ಹೆಸರನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಉದ್ದೇಶದಿಂದ ಬಡ ರೈತರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವ ಗುಣಶೇಖರ್ ಅವರನ್ನು ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...