Homeಮುಖಪುಟರೈತರಿಗೆ 'ಜಾತಿ' ಉಲ್ಲೇಖಿಸಿ ಸಮನ್ಸ್‌ ಪ್ರಕರಣ: 'ED' ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ನಾಯಕನ ವಿರುದ್ಧ ಭೂಕಬಳಿಕೆ ಆರೋಪವನ್ನು ಹೊರಿಸಿದ್ದ ಇಬ್ಬರು ಬಡ ದಲಿತ ರೈತರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ’ ಸಮನ್ಸ್‌ ಪ್ರಕರಣ ಬಯಲಾಗಿತ್ತು. ಪ್ರಕರಣವು ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೆ ಸಮನ್ಸ್‌ನಲ್ಲಿ ‘ಇಡಿ’ ಅಧಿಕಾರಿಗಳು ರೈತರ ಜಾತಿಯನ್ನು ಉಲ್ಲೇಖಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷದ ಅಧ್ಯಕ್ಷ, ಸಂಸದ ತೊಲ್ ತಿರುಮಾವಳವನ್ ಮತ್ತು ಪುದಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಕುರಿತು ಖಂಡನೆಯನ್ನು ವ್ಯಕ್ತಪಡಿಸಿದ್ದು, ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ನೀಡಿದ ಸಮನ್ಸ್‌ನಲ್ಲಿ ‘ಹಿಂದೂ ಪಲ್ಲರ್‌ಸ್’ ಎಂದು ಜಾತಿ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದು ಆಘಾತಕಾರಿ ಬೆಳವಣಿಗೆಯಾಗಿದೆ. ಜಾರಿ ನಿರ್ದೇಶನಾಲಯದ ಈ ಅತಿರೇಕದ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಪುತಿಯಾ ತಮಿಳಗಂ ಮುಖ್ಯಸ್ಥ ಕೆ ಕೃಷ್ಣಸಾಮಿ ಈ ಬಗ್ಗೆ ಮಾತನಾಡಿದ್ದು, ಪತ್ರವನ್ನು ಕಳುಹಿಸುವಾಗ, ಸ್ವೀಕರಿಸುವವರ ಹೆಸರು, ತಂದೆಯ ಹೆಸರು, ಡೋರ್ ನಂಬರ್, ಬೀದಿ, ಗ್ರಾಮದ ಹೆಸರು, ಜಿಲ್ಲೆ ಮತ್ತು ಇತರ ವಿವರಗಳನ್ನು ಮಾತ್ರ ನಮೂದಿಸಲಾಗುತ್ತದೆ. ಆದರೆ ‘ಇಡಿ’ ಇಬ್ಬರು ರೈತರ ಜಾತಿ ಹೆಸರುಗಳನ್ನು ಉಲ್ಲೇಖಿಸಿದೆ  ‘ಪಲ್ಲರ್’ ಎಂಬ ಹೆಸರನ್ನು ದೇವಂದ್ರ ಕುಳ್ಳ ವೆಳ್ಳಾಲರ್ ಎಂದು ಬದಲಿಸಿ ಸುಮಾರು ಎರಡು ವರ್ಷಗಳಾಗಿವೆ. ಇದು ‘ಇಡಿ’ ಗಮನಕ್ಕೆ ಬಂದಿಲ್ಲವೇ?  ಜಾತಿಯ ಹೆಸರನ್ನು ಉಲ್ಲೇಖಿಸುವುದು ಅಪರಾಧ ಮಾತ್ರವಲ್ಲ, ಇದರಲ್ಲಿ ಯಾವುದೋ ದುರುದ್ದೇಶ ಇದ್ದಂತೆ ಕಾಣುತ್ತದೆ. ಇಡಿಯ ಉನ್ನತ ಅಧಿಕಾರಿಗಳು ಸಮನ್ಸ್‌ಗೆ ವಿವರಣೆಯನ್ನು ನೀಡಬೇಕು. ರೈತರ ಜಾತಿ ಗುರುತನ್ನು ಉಲ್ಲೇಖಿಸಿ ಪತ್ರವನ್ನು ಕಳುಹಿಸಿದ ‘ಇಡಿ’  ಅಧಿಕಾರಿಗಳ ವಿರುದ್ಧ ಎಸ್ಸಿ- ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕೃಷ್ಣಸಾಮಿ ಅವರು ಆಗ್ರಹಿಸಿದ್ದಾರೆ.

70ರ ಹರೆಯದ ಇಬ್ಬರು ಹಿರಿಯ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್  ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಸ್ವೀಕರಿಸಿದ್ದಾರೆ. 6.5 ಎಕರೆ ಕೃಷಿ ಭೂಮಿ ಹೊಂದಿರುವ ಇಬ್ಬರು ಬಡ ಕಟುಂಬದ ಸಹೋದರರನ್ನು ‘ಇಡಿ’ ವಿಚಾರಣೆಗೆ ಕರೆದಿದೆ. ಇದರ ಬೆನ್ನಲ್ಲಿ ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದಕ್ಕೆ ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ‘ಇಡಿ’ ಹಿಂಬಾಲಿಸಿವೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದಾರೆ.

ಕಣ್ಣಿಯಾನ್ ಮತ್ತು ಕೃಷ್ಣನ್ ಅವರು ಸೇಲಂ ಜಿಲ್ಲೆಯ ಅತ್ತೂರು ಬಳಿಯ ರಾಮನಾಯ್ಕನ್‌ಪಾಳ್ಯಂನಲ್ಲಿ 6.5 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ ಮತ್ತು ಅವರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ಗುಣಶೇಖರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಮತ್ತು 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಕೃಷ್ಣನ್ ಮತ್ತು ಗುಣಶೇಖರ್ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದ ಸಿವಿಲ್ ಪ್ರಕರಣವು ಅತ್ತೂರು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಈ ಕುರಿತು ತಿರುಮಾವಳವನ್ ಪ್ರತಿಕ್ರಿಯಿಸಿದ್ದು, ಗುಣಶೇಖರ್ ಅವರ ಸೂಚನೆಯ ಮೇರೆಗೆ ಇಡಿ ಕಾರ್ಯನಿರ್ವಹಿಸುತ್ತಿದೆ ಎಂದು ತೋರುತ್ತದೆ. ಇಡಿ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡನನ್ನು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಪೊಲೀಸರು ದಲಿತ ರೈತರಾದ ಕೃಷ್ಣನ್ ಮತ್ತು ಕನ್ನೈಯನ್ ಅವರಿಗೆ ರಕ್ಷಣೆಯನ್ನು ನೀಡಬೇಕು. ತಮ್ಮ ಸ್ವಂತ ಭೂಮಿಯಲ್ಲಿ ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರಿಗೆ ಅನುಮತಿಸಬೇಕು. ಪಕ್ಷದ ಹೆಸರನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಉದ್ದೇಶದಿಂದ ಬಡ ರೈತರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವ ಗುಣಶೇಖರ್ ಅವರನ್ನು ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...