Homeಮುಖಪುಟತುಮಕೂರು: ಕರೆದದ್ದು ಸಂಘ-ಸಂಸ್ಥೆಗಳ ಸಭೆ - ನಡೆಸಿದ್ದು ಬಿಜೆಪಿ ಮುಖಂಡರ ಸಭೆ!

ತುಮಕೂರು: ಕರೆದದ್ದು ಸಂಘ-ಸಂಸ್ಥೆಗಳ ಸಭೆ – ನಡೆಸಿದ್ದು ಬಿಜೆಪಿ ಮುಖಂಡರ ಸಭೆ!

- Advertisement -
- Advertisement -

ಕೋವಿಡ್ ಹರಡದಂತೆ ತಡೆಯಲು ಸಂಘ-ಸಂಸ್ಥೆಗಳ ಸಹಕಾರ ಕೋರಿ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ಬಿಜೆಪಿ ಮುಖಂಡರು ಇದ್ದರೆ ಹೊರತು ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಕೊರತೆ ಎದ್ದುಕಾಣುತ್ತಿತ್ತು.

ಯಾವ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಹಕಾರವನ್ನು ಕೋರಬೇಕಿತ್ತೋ ಅದನ್ನು ಬಿಟ್ಟು ಉಳಿದಿದ್ದನ್ನು ಜಿಲ್ಲಾಡಳಿತ ಮಾಡಿತ್ತು. ಕೋವಿಡ್ ಸಂದರ್ಭದಲ್ಲಿ ಬಡವರಿಗೆ ನೆರವಾದವರು, ಕ್ವಾರಂಟೈನ್ ಮತ್ತು ಐಸೋಲೇಶನ್ ನಲ್ಲಿಟ್ಟಿದ್ದವರಿಗೆ ಆಹಾರ ನೀಡಿ ಅವರ ನೋವನ್ನು ಆಪ್ತವಾಗಿ ಆಲಿಸಿದವರಿಗೆ ಮಾತ್ರ ಸಭೆಗೆ ಆಹ್ವಾನವಿರಲಿಲ್ಲ. ಹಾಗಾಗಿ ಇದು ಸಂಘಸಂಸ್ಥೆಗಳ ಸಭೆಯಾಗದೇ, ಬಿಜೆಪಿ ಪದಾಧಿಕಾರಿಗಳ ಸಭೆಯಾಗಿದ್ದು ವಿಶೇಷವಾಗಿತ್ತು..

ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ, ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್, ಡಿಸಿ, ಪೊಲೀಸ್ ವರಿಷ್ಠ, ಎಸಿ, ತಹಶೀಲ್ದಾರ್, ನಗರಸಭೆ ಆಯುಕ್ತ ಭೂಬಾಲನ್, ಜಾಮೀಯ ಮಸೀದಿ ಮುತುವಲ್ಲಿ ಮಾತ್ರ ಭಾಗವಹಿಸಿದ್ದರು. ಕೊರೋನ ವಿರುದ್ದದ ಹೋರಾಟ ಯಶಸ್ವಿಯಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂಬ ರೀತಿ ಚರ್ಚೆ ನಡೆಯುತ್ತಿತ್ತು. ಮಧ್ಯಪ್ರವೇಶಿಸಿದ ಸಾಮಾಜಿಕ ಕಾರ್ಯಕರ್ತರು ಸಾಕಷ್ಟು ಸಮಸ್ಯೆ ಇದೆ. ಸಂಘ ಸಂಸ್ಥೆಗಳ ಸಭೆ ಅಂದ್ರೆ ಇದೇನಾ ಎಂದು ಜಿಲ್ಲಾದಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಸಭೆಯ ದಾಟಿಯೇ ಬದಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವ್ಯವಸ್ಥೆ ಇರುವುದು ಕಂಡುಬಂದರೆ ಸಸ್ಪೆಂಡ್ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಉಪವಿಭಾಗಾಧಿಕಾರಿ ಮಾತ್ರ ತಹಶೀಲ್ದಾರ್ ಪರ ವಕಾಲತ್ತು ವಹಿಸಿ ಮಾತನಾಡಲು ತೊಡಗಿದರು. ಆಗ ಸಾಮಾಜಿಕ ಕಾರ್ಯಕರ್ತರೊಬ್ಬರು ಮೊಬೈಲ್ ಮೂಲಕ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಯನ್ನು ಸಂಪರ್ಕಿಸಿ ಸತ್ಯ ಹೇಳುವಂತೆ ಡಿಸಿಗೆ ಮೊಬೈಲ್ ಕೊಟ್ಟಿದ್ದಾರೆ. ಆಗ ಕ್ವಾರಂಟೈನ್ ಮತ್ತು ಐಸೋಲೇಷನ್ ನಲ್ಲಿರುವವರು ಅನುಭವಿಸುತ್ತಿರುವ ಕಷ್ಟಗಳ ದರ್ಶನ ಜಿಲ್ಲಾಧಿಕಾರಿಗಳಿಗೆ ಆಗಿದೆ.

ಈ ಪ್ರಕರಣದಿಂದ ಸತ್ಯ ಗೋಚರಿಸುವಂತೆ ಮಾಡಿದೆ. ಅಲ್ಲದೆ ಕೆಳಹಂತದ ಅಧಿಕಾರಿಗಳು ಮಾಹಿತಿ ಮುಚ್ಚಿಡುವುದು ಇದರಿಂದ ತಿಳಿಯುತ್ತದೆ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ನಡುವೆ ಸಮನ್ವಯದ ಕೊರತೆ ಇದೆ. ಕ್ವಾರಂಟೈನ್ ನಲ್ಲಿರುವವರನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ಸಾಮಾನ್ಯ ರೋಗಿಗಳಿಗೆ ಶ್ರೀದೇವಿ ನರ್ಸಿಂಗ್ ಹೋಂನಲ್ಲಿ ಡಬಲ್ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.

ಕೊರೊನ ವಾರಿಯರ್ ಗಳಾಗಿ ದುಡಿಯುತ್ತಿರುವ ಎಲ್ಲರ ಮಾಹಿತಿ ಎಲ್ಲರಿಗೂ ದೊರೆಯುವಂತಾಗಬೇಕು. ಪೌರ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಸುರಕ್ಷಾ ಸಲಕರಣೆಗಳನ್ನು ನೀಡಬೇಕು ಎಂದು ಒಕ್ಕೂಟ ಆಗ್ರಹಿಸಿದೆ.


ಇದನ್ನೂ ಓದಿ: ಈ ಕೋರಾನಾ ಟೈಮಲ್ಲಿ ಒಳ್ಳೆ ಕೆಲಸ ಮಾಡ್ತಿರೋ ಒಬ್ಬ ಮುಸ್ಲಿಮನೂ ಈ ಮೀಡಿಯಾದವರಿಗೆ ಸಿಗೋದಿಲ್ವ ಸರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...