Homeಮುಖಪುಟತುಮಕೂರು: ಕರೆದದ್ದು ಸಂಘ-ಸಂಸ್ಥೆಗಳ ಸಭೆ - ನಡೆಸಿದ್ದು ಬಿಜೆಪಿ ಮುಖಂಡರ ಸಭೆ!

ತುಮಕೂರು: ಕರೆದದ್ದು ಸಂಘ-ಸಂಸ್ಥೆಗಳ ಸಭೆ – ನಡೆಸಿದ್ದು ಬಿಜೆಪಿ ಮುಖಂಡರ ಸಭೆ!

- Advertisement -
- Advertisement -

ಕೋವಿಡ್ ಹರಡದಂತೆ ತಡೆಯಲು ಸಂಘ-ಸಂಸ್ಥೆಗಳ ಸಹಕಾರ ಕೋರಿ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ಬಿಜೆಪಿ ಮುಖಂಡರು ಇದ್ದರೆ ಹೊರತು ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಕೊರತೆ ಎದ್ದುಕಾಣುತ್ತಿತ್ತು.

ಯಾವ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಹಕಾರವನ್ನು ಕೋರಬೇಕಿತ್ತೋ ಅದನ್ನು ಬಿಟ್ಟು ಉಳಿದಿದ್ದನ್ನು ಜಿಲ್ಲಾಡಳಿತ ಮಾಡಿತ್ತು. ಕೋವಿಡ್ ಸಂದರ್ಭದಲ್ಲಿ ಬಡವರಿಗೆ ನೆರವಾದವರು, ಕ್ವಾರಂಟೈನ್ ಮತ್ತು ಐಸೋಲೇಶನ್ ನಲ್ಲಿಟ್ಟಿದ್ದವರಿಗೆ ಆಹಾರ ನೀಡಿ ಅವರ ನೋವನ್ನು ಆಪ್ತವಾಗಿ ಆಲಿಸಿದವರಿಗೆ ಮಾತ್ರ ಸಭೆಗೆ ಆಹ್ವಾನವಿರಲಿಲ್ಲ. ಹಾಗಾಗಿ ಇದು ಸಂಘಸಂಸ್ಥೆಗಳ ಸಭೆಯಾಗದೇ, ಬಿಜೆಪಿ ಪದಾಧಿಕಾರಿಗಳ ಸಭೆಯಾಗಿದ್ದು ವಿಶೇಷವಾಗಿತ್ತು..

ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ, ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್, ಡಿಸಿ, ಪೊಲೀಸ್ ವರಿಷ್ಠ, ಎಸಿ, ತಹಶೀಲ್ದಾರ್, ನಗರಸಭೆ ಆಯುಕ್ತ ಭೂಬಾಲನ್, ಜಾಮೀಯ ಮಸೀದಿ ಮುತುವಲ್ಲಿ ಮಾತ್ರ ಭಾಗವಹಿಸಿದ್ದರು. ಕೊರೋನ ವಿರುದ್ದದ ಹೋರಾಟ ಯಶಸ್ವಿಯಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂಬ ರೀತಿ ಚರ್ಚೆ ನಡೆಯುತ್ತಿತ್ತು. ಮಧ್ಯಪ್ರವೇಶಿಸಿದ ಸಾಮಾಜಿಕ ಕಾರ್ಯಕರ್ತರು ಸಾಕಷ್ಟು ಸಮಸ್ಯೆ ಇದೆ. ಸಂಘ ಸಂಸ್ಥೆಗಳ ಸಭೆ ಅಂದ್ರೆ ಇದೇನಾ ಎಂದು ಜಿಲ್ಲಾದಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಸಭೆಯ ದಾಟಿಯೇ ಬದಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವ್ಯವಸ್ಥೆ ಇರುವುದು ಕಂಡುಬಂದರೆ ಸಸ್ಪೆಂಡ್ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಉಪವಿಭಾಗಾಧಿಕಾರಿ ಮಾತ್ರ ತಹಶೀಲ್ದಾರ್ ಪರ ವಕಾಲತ್ತು ವಹಿಸಿ ಮಾತನಾಡಲು ತೊಡಗಿದರು. ಆಗ ಸಾಮಾಜಿಕ ಕಾರ್ಯಕರ್ತರೊಬ್ಬರು ಮೊಬೈಲ್ ಮೂಲಕ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಯನ್ನು ಸಂಪರ್ಕಿಸಿ ಸತ್ಯ ಹೇಳುವಂತೆ ಡಿಸಿಗೆ ಮೊಬೈಲ್ ಕೊಟ್ಟಿದ್ದಾರೆ. ಆಗ ಕ್ವಾರಂಟೈನ್ ಮತ್ತು ಐಸೋಲೇಷನ್ ನಲ್ಲಿರುವವರು ಅನುಭವಿಸುತ್ತಿರುವ ಕಷ್ಟಗಳ ದರ್ಶನ ಜಿಲ್ಲಾಧಿಕಾರಿಗಳಿಗೆ ಆಗಿದೆ.

ಈ ಪ್ರಕರಣದಿಂದ ಸತ್ಯ ಗೋಚರಿಸುವಂತೆ ಮಾಡಿದೆ. ಅಲ್ಲದೆ ಕೆಳಹಂತದ ಅಧಿಕಾರಿಗಳು ಮಾಹಿತಿ ಮುಚ್ಚಿಡುವುದು ಇದರಿಂದ ತಿಳಿಯುತ್ತದೆ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ನಡುವೆ ಸಮನ್ವಯದ ಕೊರತೆ ಇದೆ. ಕ್ವಾರಂಟೈನ್ ನಲ್ಲಿರುವವರನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ಸಾಮಾನ್ಯ ರೋಗಿಗಳಿಗೆ ಶ್ರೀದೇವಿ ನರ್ಸಿಂಗ್ ಹೋಂನಲ್ಲಿ ಡಬಲ್ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.

ಕೊರೊನ ವಾರಿಯರ್ ಗಳಾಗಿ ದುಡಿಯುತ್ತಿರುವ ಎಲ್ಲರ ಮಾಹಿತಿ ಎಲ್ಲರಿಗೂ ದೊರೆಯುವಂತಾಗಬೇಕು. ಪೌರ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಸುರಕ್ಷಾ ಸಲಕರಣೆಗಳನ್ನು ನೀಡಬೇಕು ಎಂದು ಒಕ್ಕೂಟ ಆಗ್ರಹಿಸಿದೆ.


ಇದನ್ನೂ ಓದಿ: ಈ ಕೋರಾನಾ ಟೈಮಲ್ಲಿ ಒಳ್ಳೆ ಕೆಲಸ ಮಾಡ್ತಿರೋ ಒಬ್ಬ ಮುಸ್ಲಿಮನೂ ಈ ಮೀಡಿಯಾದವರಿಗೆ ಸಿಗೋದಿಲ್ವ ಸರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...