Homeಮುಖಪುಟಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿ: ಮುಂಬೈ ಹೈಕೋರ್ಟ್

ಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿ: ಮುಂಬೈ ಹೈಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದಕ್ಕಾಗಿ ಒಬ್ಬ ವ್ಯಕ್ತಿಗೆ ಒಂದೂವರೆ ವರ್ಷಗಳ ಜೈಲು ಶಿಕ್ಷೆಯನ್ನು ಮುಂಬೈನ ವಿಶೇಷ ನ್ಯಾಯಾಲಯವು ವಿಧಿಸಿದೆ. ಹೆಣ್ಣನ್ನು ‘ಐಟಂ’ ಎಂದು ಕರೆಯುವುದು ಅವಹೇಳನಕಾರಿಯಾಗಿದ್ದು, ಆಕೆಯನ್ನು ಲೈಂಗಿಕ ದೃಷ್ಟಿಯಲ್ಲಿ ಚಿತ್ರಿಸುತ್ತದೆ ಎಂದು ಎಚ್ಚರಿಸಿದೆ.

ಅಕ್ಟೋಬರ್ 20ರಂದು ನೀಡಲಾದ ಆದೇಶದಲ್ಲಿ, ನ್ಯಾಯಾಲಯವು ಆರೋಪಿಗೆ ಕರುಣೆ ತೋರಿಸಲು ಕೋರ್ಟ್ ನಿರಾಕರಿಸಿತು. ಇಂತಹ ಅನೈತಿಕ ನಡವಳಿಕೆ‌ ತಪ್ಪಿಸಿ ಮಹಿಳೆಯರನ್ನು ರಕ್ಷಿಸಲು “ರೋಡ್‌ ರೋಮಿಯೊ”ಗಳಿಗೆ ಪಾಠ ಕಲಿಸುವ ಅಗತ್ಯವಿದೆ ಎಂದು ಕೋರ್ಟ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎ ಜೆ ಅನ್ಸಾರಿ, 2015ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಯುವತಿಯನ್ನು ‘ಐಟಂ’ ಎಂದ ಅಪರಾಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ಸಂತ್ರಸ್ತೆಯ ಕೂದಲನ್ನು ಹಿಡಿದು ಎಳೆದು ಆಕೆಯನ್ನು ‘ಐಟಂ’ ಎಂದು ಕರೆದಿದ್ದಾನೆ. ನನ್ನ ಅಭಿಪ್ರಾಯದಲ್ಲಿ ಇದು ಸಂತ್ರಸ್ತೆಯ ಮೇಲಿನ ದೌರ್ಜನ್ಯವನ್ನು ಸಾಬೀತುಪಡಿಸುತ್ತದೆ” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಆರೋಪಿಯ ವರ್ತನೆಯು “ಸಂಪೂರ್ಣವಾಗಿ ಅನುಚಿತವಾಗಿದೆ” ಎಂದು ನ್ಯಾಯಾಲಯವು ಗಮನಿಸಿದೆ.

ಆರೋಪಿಯು ಸಂತ್ರಸ್ತೆಯನ್ನು ಉದ್ದೇಶಿಸಿ ‘ಐಟಂ’ ಎಂಬ ಪದವನ್ನು ಬಳಸಿದ್ದಾನೆ. ಇದು ಸಾಮಾನ್ಯವಾಗಿ ಹೆಣ್ಣನ್ನು ಅವಹೇಳನಕಾರಿ ಶೈಲಿಯಲ್ಲಿ ಸಂಬೋಧಿಸಲು ಬಳಸುವ ಪದವಾಗಿದೆ. ಜೊತೆಗೆ ಲೈಂಗಿಕ ದೃಷ್ಟಿಕೋನದ್ದಾಗಿದೆ. ಇದು ಆಕೆಯ ನಮ್ರತೆಯನ್ನು ಕೆರಳಿಸುವ ಉದ್ದೇಶವನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

“ಯಾವುದೇ ಹೆಣ್ಣನ್ನು ಸಂಬೋಧಿಸಲು ‘ಐಟಂ’ ಎಂಬ ಪದವನ್ನು ಬಳಸುವುದು ನಿಸ್ಸಂಶಯವಾಗಿ ಅವಮಾನಕರವಾಗಿದೆ” ಎಂದು ಕೋರ್ಟ್ ಎಚ್ಚರಿಸಿದೆ.

ಅಪ್ರಾಪ್ತ ಬಾಲಕಿಗೆ ಬೀದಿಯಲ್ಲಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿನಾಯಿತಿ ತೋರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಏಕೆಂದರೆ ರಸ್ತೆಬದಿಯ ರೋಮಿಯೋಗಳಿಗೆ ಪಾಠವನ್ನು ಕಲಿಸಬೇಕಾಗಿದೆ. ಇಂಥವರ ಅನೈತಿಕ ನಡವಳಿಕೆಯನ್ನು ತಪ್ಪಿಸಿ ಮಹಿಳೆಯರನ್ನು ರಕ್ಷಿಸಬೇಕಾಗಿದೆ” ಎಂದಿದೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಜುಲೈ 14, 2015ರಂದು ಸಂತ್ರಸ್ತೆ ಶಾಲೆಯಿಂದ ಹಿಂತಿರುಗುತ್ತಿದ್ದಾಗ, ಆರೋಪಿಯು ಆಕೆಯನ್ನು ‘ಐಟಂ’ ಎಂದು ಕರೆದಿದ್ದನು.

ತನಗೆ ಕಿರುಕುಳ ನೀಡಬೇಡಿ ಎಂದು ಬಾಲಕಿ ಕೋರಿದಾಗಲೂ, ಅವನು ಬಾಲಕಿಯನ್ನು ನಿಂದಿಸಲು ಪ್ರಾರಂಭಿಸಿದ್ದನು. ಜೊತೆಗೆ ಆಕೆಯ ತಲೆಗೂದಲನ್ನು ಎಳೆದಿದ್ದನು. ನಂತರ ಪೊಲೀಸ್ ಸಹಾಯವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಸಂತ್ರಸ್ತ ಬಾಲಕಿ ಸಹಾಯ ಕೋರಿದ್ದಳು.

ಪೊಲೀಸರು ಸ್ಥಳಕ್ಕೆ ಧಾವಿಸಿದರೂ ಆರೋಪಿ ಪರಾರಿಯಾಗಿದ್ದನು. ಬಾಲಕಿ ಮನೆಗೆ ತೆರಳಿ ತನ್ನ ತಂದೆಗೆ ವಿಷಯ ತಿಳಿಸಿದ್ದು, ಮುಂಬೈನ ಸಕಿನಾಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...