Homeಮುಖಪುಟ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

- Advertisement -
- Advertisement -

ಇಶಾ ಫೌಂಡೇಶನ್ ತನ್ನ ’ಕಾವೇರಿ ಕಾಲಿಂಗ್’ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಬಿಂಬಿಸಿ ಜನರಿಂದ ಹಣವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಿಳಿಯಲು ತನಿಖೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಕಾವೇರಿ ಕಾಲಿಂಗ್ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಪ್ರತಿಷ್ಠಾನದ ಒಂದು ವಿಭಾಗವಾದ ಇಶಾ ಔಟ್‌ರೀಚ್, ಈ ಕಾರ್ಯಕ್ರಮವು ತನ್ನದೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದು, ಇದನ್ನು ಕರ್ನಾಟಕ ಸರ್ಕಾರದ ಯೋಜನೆಯೆಂದು ನಿರೂಪಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಮೂಲದ ವಕೀಲರೊಬ್ಬರು, “ಇಮೇಲ್‌ನಲ್ಲಿ ತನ್ನ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿ ಇರುವುದರಿಂದ, ’ಕಾವೇರಿ ಕಾಲಿಂಗ್’ ಯೋಜನೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದರೆ, ಅದು ’ಕಂಟೆಂಪ್ಟ್ ಆಫ್ ಕೋರ್ಟ್’ ಆಗುತ್ತದೆ” ಎಂದು ಡಿಸ್ಕವರಿ ಟಿವಿ ಚಾನೆಲ್‌ಗೆ ಎಚ್ಚರಿಕೆ ನೀಡಿದ್ದರು. ನಂತರ ಅರ್ಜಿದಾರರನ್ನು ತೆಗೆದುಹಾಕುವ ಮೂಲಕ ನ್ಯಾಯಾಲಯವು ಈ ವಿಷಯವನ್ನು ಸು-ಮೋಟು ರೀತಿಯಲ್ಲಿ ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಂದೆ ತೀರ್ಪು ಬಾಕಿ ಉಳಿದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಇದು ಕರ್ನಾಟಕ ಸರ್ಕಾರದ ಉಪಕ್ರಮವಲ್ಲ ಎಂದು ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ಇಶಾ ಔಟ್‌ರೀಚ್ ಅನ್ನು ಪ್ರತಿನಿಧಿಸುವ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದರು. ಬಾರ್ & ಬೆಂಚ್ ಉಲ್ಲೇಖಿಸಿದಂತೆ ಸ್ಪಷ್ಟೀಕರಣವನ್ನು ಈ ಕೆಳಗೆ ನೀಡಲಾಗಿದೆ. ಓದಿ;

“ಕಾವೇರಿ ಕಾಲಿಂಗ್ ಯೋಜನೆಯು ಇಶಾ ಔಟ್‌ರೀಚ್‌ನ ಒಂದು ಕಾರ್ಯಕ್ರಮವಾಗಿದೆ. ಇದು ಕರ್ನಾಟಕ ಸರ್ಕಾರದ ಯೋಜನೆಯಲ್ಲ. ಕಾವೇರಿ ಕಾಲಿಂಗ್ ಯೋಜನೆಯ ಭಾಗವಾಗಿ ನೆಟ್ಟಿರುವ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ನೆಡಲಾಗುತ್ತದೆ, ಸರ್ಕಾರಿ ಜಮೀನುಗಳಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

ಆದರೆ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್.ಎಸ್.ಮಗದುಮ್ ಅವರ ವಿಭಾಗೀಯ ಪೀಠವು, “ನ್ಯಾಯಾಲಯವು ಈ ಸ್ಪಷ್ಟೀಕರಣದ ಬಗ್ಗೆ ತೃಪ್ತಿ ಹೊಂದಿಲ್ಲ, ಏಕೆಂದರೆ ಇದು ವೆಬ್‌ಸೈಟಿನಲ್ಲಿ ನೇರವಾಗಿ ಗೋಚರಿಸಬೇಕು. ಅದನ್ನು ವೆಬ್‌ಸೈಟ್‌ನಲ್ಲಿ ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ನೋಡಿ. ಇದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರಬೇಕು” ಎಂದು ವಿಭಾಗೀಯ ಪೀಠ ಸೂಚಿಸಿದೆ.

ಖಾಸಗಿ ಯೋಜನೆಯೊಂದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡದೆ ಕರ್ನಾಟಕ ಸರ್ಕಾರ ಇಶಾ ಫೌಂಡೇಶನ್‌ಗೆ ಸರ್ಕಾರಿ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಅವಕಾಶ ನೀಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದಕ್ಕೆ ಇಶಾ ಔಟ್‌ರೀಚ್ ವಕೀಲರು ಪ್ರತಿಕ್ರಿಯಿಸಿದ ಪ್ರಕಾರ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ಮಾತ್ರ ನೆಡಲಾಗುತ್ತಿದೆ, ಆದರೆ ಸರ್ಕಾರಿ ಜಮೀನುಗಳಲ್ಲಿ ಅಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕಾರ್ಯವನ್ನು “ಗೊಂದಲದ ಕ್ರಮ” ಎಂದು ವಿವರಿಸಿದ ಅರ್ಜಿಯಲ್ಲಿ, ಪ್ರತಿಷ್ಠಾನವು 10,626 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಇದು ಸರ್ಕಾರದ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಲು ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರ ಹಾಜರಾದ ವಕೀಲರು ತಿಳಿಸಿದ್ದಾರೆ. ಕಾವೇರಿ ಕಾಲಿಂಗ್ ಯೋಜನೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ದಾಖಲಿಸಲು ಸರ್ಕಾರದ ವಕೀಲರು ಸಮಯವನ್ನು ಕೋರಿದರು. ಮುಂದಿನ ವಿಚಾರಣೆಯನ್ನು ಮಾರ್ಚ್ 8 ಕ್ಕೆ ನಿಗದಿಪಡಿಸಲಾಗಿದೆ.

ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಸರ್ಕಾರದ ಹೇಳಿಕೆಯಲ್ಲಿನ ಅಸಂಗತತೆಯನ್ನು ಗಮನಿಸಿತ್ತು ಮತ್ತು ಸರ್ಕಾರದ ಹೆಚ್ಚುವರಿ ವಕೀಲರಿಗೆ ರಾಜ್ಯ ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದೆಯೆ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಫೌಂಡೇಶನ್ ಕಾವೇರಿ ಜನ್ಮಸ್ಥಳವಾದ ತಲಕಾವೇರಿಯಿಂದ ತಿರುವಾರೂರಿನವರೆಗೆ ಕಾವೇರಿ ನದಿ ತೀರದ 639 ಕಿಲೋಮೀಟರ್ ವಿಸ್ತೀರ್ಣದಲ್ಲಿ 253 ಕೋಟಿ ಸಸಿಗಳನ್ನು ನೆಡಲು ಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಸಸಿಗೆ 42 ರೂಗಳನ್ನು ಸಾರ್ವಜನಿಕರಿಂದ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ, ಫೌಂಡೇಶನ್ 10,626 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಿದೆ. ಇದನ್ನು ಅರ್ಜಿಯಲ್ಲಿ “ದೊಡ್ಡ ಹಗರಣ” ಎಂದು ವಿವರಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.


ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...