Homeಮುಖಪುಟ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

- Advertisement -
- Advertisement -

ಇಶಾ ಫೌಂಡೇಶನ್ ತನ್ನ ’ಕಾವೇರಿ ಕಾಲಿಂಗ್’ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಬಿಂಬಿಸಿ ಜನರಿಂದ ಹಣವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಿಳಿಯಲು ತನಿಖೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಕಾವೇರಿ ಕಾಲಿಂಗ್ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಪ್ರತಿಷ್ಠಾನದ ಒಂದು ವಿಭಾಗವಾದ ಇಶಾ ಔಟ್‌ರೀಚ್, ಈ ಕಾರ್ಯಕ್ರಮವು ತನ್ನದೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದು, ಇದನ್ನು ಕರ್ನಾಟಕ ಸರ್ಕಾರದ ಯೋಜನೆಯೆಂದು ನಿರೂಪಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಮೂಲದ ವಕೀಲರೊಬ್ಬರು, “ಇಮೇಲ್‌ನಲ್ಲಿ ತನ್ನ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿ ಇರುವುದರಿಂದ, ’ಕಾವೇರಿ ಕಾಲಿಂಗ್’ ಯೋಜನೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದರೆ, ಅದು ’ಕಂಟೆಂಪ್ಟ್ ಆಫ್ ಕೋರ್ಟ್’ ಆಗುತ್ತದೆ” ಎಂದು ಡಿಸ್ಕವರಿ ಟಿವಿ ಚಾನೆಲ್‌ಗೆ ಎಚ್ಚರಿಕೆ ನೀಡಿದ್ದರು. ನಂತರ ಅರ್ಜಿದಾರರನ್ನು ತೆಗೆದುಹಾಕುವ ಮೂಲಕ ನ್ಯಾಯಾಲಯವು ಈ ವಿಷಯವನ್ನು ಸು-ಮೋಟು ರೀತಿಯಲ್ಲಿ ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಂದೆ ತೀರ್ಪು ಬಾಕಿ ಉಳಿದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಇದು ಕರ್ನಾಟಕ ಸರ್ಕಾರದ ಉಪಕ್ರಮವಲ್ಲ ಎಂದು ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ಇಶಾ ಔಟ್‌ರೀಚ್ ಅನ್ನು ಪ್ರತಿನಿಧಿಸುವ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದರು. ಬಾರ್ & ಬೆಂಚ್ ಉಲ್ಲೇಖಿಸಿದಂತೆ ಸ್ಪಷ್ಟೀಕರಣವನ್ನು ಈ ಕೆಳಗೆ ನೀಡಲಾಗಿದೆ. ಓದಿ;

“ಕಾವೇರಿ ಕಾಲಿಂಗ್ ಯೋಜನೆಯು ಇಶಾ ಔಟ್‌ರೀಚ್‌ನ ಒಂದು ಕಾರ್ಯಕ್ರಮವಾಗಿದೆ. ಇದು ಕರ್ನಾಟಕ ಸರ್ಕಾರದ ಯೋಜನೆಯಲ್ಲ. ಕಾವೇರಿ ಕಾಲಿಂಗ್ ಯೋಜನೆಯ ಭಾಗವಾಗಿ ನೆಟ್ಟಿರುವ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ನೆಡಲಾಗುತ್ತದೆ, ಸರ್ಕಾರಿ ಜಮೀನುಗಳಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

ಆದರೆ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್.ಎಸ್.ಮಗದುಮ್ ಅವರ ವಿಭಾಗೀಯ ಪೀಠವು, “ನ್ಯಾಯಾಲಯವು ಈ ಸ್ಪಷ್ಟೀಕರಣದ ಬಗ್ಗೆ ತೃಪ್ತಿ ಹೊಂದಿಲ್ಲ, ಏಕೆಂದರೆ ಇದು ವೆಬ್‌ಸೈಟಿನಲ್ಲಿ ನೇರವಾಗಿ ಗೋಚರಿಸಬೇಕು. ಅದನ್ನು ವೆಬ್‌ಸೈಟ್‌ನಲ್ಲಿ ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ನೋಡಿ. ಇದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರಬೇಕು” ಎಂದು ವಿಭಾಗೀಯ ಪೀಠ ಸೂಚಿಸಿದೆ.

ಖಾಸಗಿ ಯೋಜನೆಯೊಂದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡದೆ ಕರ್ನಾಟಕ ಸರ್ಕಾರ ಇಶಾ ಫೌಂಡೇಶನ್‌ಗೆ ಸರ್ಕಾರಿ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಅವಕಾಶ ನೀಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದಕ್ಕೆ ಇಶಾ ಔಟ್‌ರೀಚ್ ವಕೀಲರು ಪ್ರತಿಕ್ರಿಯಿಸಿದ ಪ್ರಕಾರ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ಮಾತ್ರ ನೆಡಲಾಗುತ್ತಿದೆ, ಆದರೆ ಸರ್ಕಾರಿ ಜಮೀನುಗಳಲ್ಲಿ ಅಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕಾರ್ಯವನ್ನು “ಗೊಂದಲದ ಕ್ರಮ” ಎಂದು ವಿವರಿಸಿದ ಅರ್ಜಿಯಲ್ಲಿ, ಪ್ರತಿಷ್ಠಾನವು 10,626 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಇದು ಸರ್ಕಾರದ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಲು ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರ ಹಾಜರಾದ ವಕೀಲರು ತಿಳಿಸಿದ್ದಾರೆ. ಕಾವೇರಿ ಕಾಲಿಂಗ್ ಯೋಜನೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ದಾಖಲಿಸಲು ಸರ್ಕಾರದ ವಕೀಲರು ಸಮಯವನ್ನು ಕೋರಿದರು. ಮುಂದಿನ ವಿಚಾರಣೆಯನ್ನು ಮಾರ್ಚ್ 8 ಕ್ಕೆ ನಿಗದಿಪಡಿಸಲಾಗಿದೆ.

ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಸರ್ಕಾರದ ಹೇಳಿಕೆಯಲ್ಲಿನ ಅಸಂಗತತೆಯನ್ನು ಗಮನಿಸಿತ್ತು ಮತ್ತು ಸರ್ಕಾರದ ಹೆಚ್ಚುವರಿ ವಕೀಲರಿಗೆ ರಾಜ್ಯ ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದೆಯೆ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಫೌಂಡೇಶನ್ ಕಾವೇರಿ ಜನ್ಮಸ್ಥಳವಾದ ತಲಕಾವೇರಿಯಿಂದ ತಿರುವಾರೂರಿನವರೆಗೆ ಕಾವೇರಿ ನದಿ ತೀರದ 639 ಕಿಲೋಮೀಟರ್ ವಿಸ್ತೀರ್ಣದಲ್ಲಿ 253 ಕೋಟಿ ಸಸಿಗಳನ್ನು ನೆಡಲು ಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಸಸಿಗೆ 42 ರೂಗಳನ್ನು ಸಾರ್ವಜನಿಕರಿಂದ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ, ಫೌಂಡೇಶನ್ 10,626 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಿದೆ. ಇದನ್ನು ಅರ್ಜಿಯಲ್ಲಿ “ದೊಡ್ಡ ಹಗರಣ” ಎಂದು ವಿವರಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.


ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...