Homeಮುಖಪುಟ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

- Advertisement -
- Advertisement -

ಇಶಾ ಫೌಂಡೇಶನ್ ತನ್ನ ’ಕಾವೇರಿ ಕಾಲಿಂಗ್’ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಬಿಂಬಿಸಿ ಜನರಿಂದ ಹಣವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಿಳಿಯಲು ತನಿಖೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಕಾವೇರಿ ಕಾಲಿಂಗ್ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಪ್ರತಿಷ್ಠಾನದ ಒಂದು ವಿಭಾಗವಾದ ಇಶಾ ಔಟ್‌ರೀಚ್, ಈ ಕಾರ್ಯಕ್ರಮವು ತನ್ನದೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದು, ಇದನ್ನು ಕರ್ನಾಟಕ ಸರ್ಕಾರದ ಯೋಜನೆಯೆಂದು ನಿರೂಪಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಮೂಲದ ವಕೀಲರೊಬ್ಬರು, “ಇಮೇಲ್‌ನಲ್ಲಿ ತನ್ನ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿ ಇರುವುದರಿಂದ, ’ಕಾವೇರಿ ಕಾಲಿಂಗ್’ ಯೋಜನೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದರೆ, ಅದು ’ಕಂಟೆಂಪ್ಟ್ ಆಫ್ ಕೋರ್ಟ್’ ಆಗುತ್ತದೆ” ಎಂದು ಡಿಸ್ಕವರಿ ಟಿವಿ ಚಾನೆಲ್‌ಗೆ ಎಚ್ಚರಿಕೆ ನೀಡಿದ್ದರು. ನಂತರ ಅರ್ಜಿದಾರರನ್ನು ತೆಗೆದುಹಾಕುವ ಮೂಲಕ ನ್ಯಾಯಾಲಯವು ಈ ವಿಷಯವನ್ನು ಸು-ಮೋಟು ರೀತಿಯಲ್ಲಿ ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಂದೆ ತೀರ್ಪು ಬಾಕಿ ಉಳಿದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಇದು ಕರ್ನಾಟಕ ಸರ್ಕಾರದ ಉಪಕ್ರಮವಲ್ಲ ಎಂದು ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ಇಶಾ ಔಟ್‌ರೀಚ್ ಅನ್ನು ಪ್ರತಿನಿಧಿಸುವ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದರು. ಬಾರ್ & ಬೆಂಚ್ ಉಲ್ಲೇಖಿಸಿದಂತೆ ಸ್ಪಷ್ಟೀಕರಣವನ್ನು ಈ ಕೆಳಗೆ ನೀಡಲಾಗಿದೆ. ಓದಿ;

“ಕಾವೇರಿ ಕಾಲಿಂಗ್ ಯೋಜನೆಯು ಇಶಾ ಔಟ್‌ರೀಚ್‌ನ ಒಂದು ಕಾರ್ಯಕ್ರಮವಾಗಿದೆ. ಇದು ಕರ್ನಾಟಕ ಸರ್ಕಾರದ ಯೋಜನೆಯಲ್ಲ. ಕಾವೇರಿ ಕಾಲಿಂಗ್ ಯೋಜನೆಯ ಭಾಗವಾಗಿ ನೆಟ್ಟಿರುವ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ನೆಡಲಾಗುತ್ತದೆ, ಸರ್ಕಾರಿ ಜಮೀನುಗಳಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

ಆದರೆ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್.ಎಸ್.ಮಗದುಮ್ ಅವರ ವಿಭಾಗೀಯ ಪೀಠವು, “ನ್ಯಾಯಾಲಯವು ಈ ಸ್ಪಷ್ಟೀಕರಣದ ಬಗ್ಗೆ ತೃಪ್ತಿ ಹೊಂದಿಲ್ಲ, ಏಕೆಂದರೆ ಇದು ವೆಬ್‌ಸೈಟಿನಲ್ಲಿ ನೇರವಾಗಿ ಗೋಚರಿಸಬೇಕು. ಅದನ್ನು ವೆಬ್‌ಸೈಟ್‌ನಲ್ಲಿ ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ನೋಡಿ. ಇದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರಬೇಕು” ಎಂದು ವಿಭಾಗೀಯ ಪೀಠ ಸೂಚಿಸಿದೆ.

ಖಾಸಗಿ ಯೋಜನೆಯೊಂದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡದೆ ಕರ್ನಾಟಕ ಸರ್ಕಾರ ಇಶಾ ಫೌಂಡೇಶನ್‌ಗೆ ಸರ್ಕಾರಿ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಅವಕಾಶ ನೀಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದಕ್ಕೆ ಇಶಾ ಔಟ್‌ರೀಚ್ ವಕೀಲರು ಪ್ರತಿಕ್ರಿಯಿಸಿದ ಪ್ರಕಾರ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ಮಾತ್ರ ನೆಡಲಾಗುತ್ತಿದೆ, ಆದರೆ ಸರ್ಕಾರಿ ಜಮೀನುಗಳಲ್ಲಿ ಅಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕಾರ್ಯವನ್ನು “ಗೊಂದಲದ ಕ್ರಮ” ಎಂದು ವಿವರಿಸಿದ ಅರ್ಜಿಯಲ್ಲಿ, ಪ್ರತಿಷ್ಠಾನವು 10,626 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಇದು ಸರ್ಕಾರದ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಲು ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರ ಹಾಜರಾದ ವಕೀಲರು ತಿಳಿಸಿದ್ದಾರೆ. ಕಾವೇರಿ ಕಾಲಿಂಗ್ ಯೋಜನೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ದಾಖಲಿಸಲು ಸರ್ಕಾರದ ವಕೀಲರು ಸಮಯವನ್ನು ಕೋರಿದರು. ಮುಂದಿನ ವಿಚಾರಣೆಯನ್ನು ಮಾರ್ಚ್ 8 ಕ್ಕೆ ನಿಗದಿಪಡಿಸಲಾಗಿದೆ.

ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಸರ್ಕಾರದ ಹೇಳಿಕೆಯಲ್ಲಿನ ಅಸಂಗತತೆಯನ್ನು ಗಮನಿಸಿತ್ತು ಮತ್ತು ಸರ್ಕಾರದ ಹೆಚ್ಚುವರಿ ವಕೀಲರಿಗೆ ರಾಜ್ಯ ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದೆಯೆ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಫೌಂಡೇಶನ್ ಕಾವೇರಿ ಜನ್ಮಸ್ಥಳವಾದ ತಲಕಾವೇರಿಯಿಂದ ತಿರುವಾರೂರಿನವರೆಗೆ ಕಾವೇರಿ ನದಿ ತೀರದ 639 ಕಿಲೋಮೀಟರ್ ವಿಸ್ತೀರ್ಣದಲ್ಲಿ 253 ಕೋಟಿ ಸಸಿಗಳನ್ನು ನೆಡಲು ಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಸಸಿಗೆ 42 ರೂಗಳನ್ನು ಸಾರ್ವಜನಿಕರಿಂದ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ, ಫೌಂಡೇಶನ್ 10,626 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಿದೆ. ಇದನ್ನು ಅರ್ಜಿಯಲ್ಲಿ “ದೊಡ್ಡ ಹಗರಣ” ಎಂದು ವಿವರಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.


ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...