Homeಮುಖಪುಟ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

- Advertisement -
- Advertisement -

ಇಶಾ ಫೌಂಡೇಶನ್ ತನ್ನ ’ಕಾವೇರಿ ಕಾಲಿಂಗ್’ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಬಿಂಬಿಸಿ ಜನರಿಂದ ಹಣವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಿಳಿಯಲು ತನಿಖೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಕಾವೇರಿ ಕಾಲಿಂಗ್ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಪ್ರತಿಷ್ಠಾನದ ಒಂದು ವಿಭಾಗವಾದ ಇಶಾ ಔಟ್‌ರೀಚ್, ಈ ಕಾರ್ಯಕ್ರಮವು ತನ್ನದೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದು, ಇದನ್ನು ಕರ್ನಾಟಕ ಸರ್ಕಾರದ ಯೋಜನೆಯೆಂದು ನಿರೂಪಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಮೂಲದ ವಕೀಲರೊಬ್ಬರು, “ಇಮೇಲ್‌ನಲ್ಲಿ ತನ್ನ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿ ಇರುವುದರಿಂದ, ’ಕಾವೇರಿ ಕಾಲಿಂಗ್’ ಯೋಜನೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದರೆ, ಅದು ’ಕಂಟೆಂಪ್ಟ್ ಆಫ್ ಕೋರ್ಟ್’ ಆಗುತ್ತದೆ” ಎಂದು ಡಿಸ್ಕವರಿ ಟಿವಿ ಚಾನೆಲ್‌ಗೆ ಎಚ್ಚರಿಕೆ ನೀಡಿದ್ದರು. ನಂತರ ಅರ್ಜಿದಾರರನ್ನು ತೆಗೆದುಹಾಕುವ ಮೂಲಕ ನ್ಯಾಯಾಲಯವು ಈ ವಿಷಯವನ್ನು ಸು-ಮೋಟು ರೀತಿಯಲ್ಲಿ ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಂದೆ ತೀರ್ಪು ಬಾಕಿ ಉಳಿದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಇದು ಕರ್ನಾಟಕ ಸರ್ಕಾರದ ಉಪಕ್ರಮವಲ್ಲ ಎಂದು ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ಇಶಾ ಔಟ್‌ರೀಚ್ ಅನ್ನು ಪ್ರತಿನಿಧಿಸುವ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದರು. ಬಾರ್ & ಬೆಂಚ್ ಉಲ್ಲೇಖಿಸಿದಂತೆ ಸ್ಪಷ್ಟೀಕರಣವನ್ನು ಈ ಕೆಳಗೆ ನೀಡಲಾಗಿದೆ. ಓದಿ;

“ಕಾವೇರಿ ಕಾಲಿಂಗ್ ಯೋಜನೆಯು ಇಶಾ ಔಟ್‌ರೀಚ್‌ನ ಒಂದು ಕಾರ್ಯಕ್ರಮವಾಗಿದೆ. ಇದು ಕರ್ನಾಟಕ ಸರ್ಕಾರದ ಯೋಜನೆಯಲ್ಲ. ಕಾವೇರಿ ಕಾಲಿಂಗ್ ಯೋಜನೆಯ ಭಾಗವಾಗಿ ನೆಟ್ಟಿರುವ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ನೆಡಲಾಗುತ್ತದೆ, ಸರ್ಕಾರಿ ಜಮೀನುಗಳಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

ಆದರೆ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್.ಎಸ್.ಮಗದುಮ್ ಅವರ ವಿಭಾಗೀಯ ಪೀಠವು, “ನ್ಯಾಯಾಲಯವು ಈ ಸ್ಪಷ್ಟೀಕರಣದ ಬಗ್ಗೆ ತೃಪ್ತಿ ಹೊಂದಿಲ್ಲ, ಏಕೆಂದರೆ ಇದು ವೆಬ್‌ಸೈಟಿನಲ್ಲಿ ನೇರವಾಗಿ ಗೋಚರಿಸಬೇಕು. ಅದನ್ನು ವೆಬ್‌ಸೈಟ್‌ನಲ್ಲಿ ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ನೋಡಿ. ಇದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರಬೇಕು” ಎಂದು ವಿಭಾಗೀಯ ಪೀಠ ಸೂಚಿಸಿದೆ.

ಖಾಸಗಿ ಯೋಜನೆಯೊಂದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡದೆ ಕರ್ನಾಟಕ ಸರ್ಕಾರ ಇಶಾ ಫೌಂಡೇಶನ್‌ಗೆ ಸರ್ಕಾರಿ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಅವಕಾಶ ನೀಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದಕ್ಕೆ ಇಶಾ ಔಟ್‌ರೀಚ್ ವಕೀಲರು ಪ್ರತಿಕ್ರಿಯಿಸಿದ ಪ್ರಕಾರ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ಮಾತ್ರ ನೆಡಲಾಗುತ್ತಿದೆ, ಆದರೆ ಸರ್ಕಾರಿ ಜಮೀನುಗಳಲ್ಲಿ ಅಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕಾರ್ಯವನ್ನು “ಗೊಂದಲದ ಕ್ರಮ” ಎಂದು ವಿವರಿಸಿದ ಅರ್ಜಿಯಲ್ಲಿ, ಪ್ರತಿಷ್ಠಾನವು 10,626 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಇದು ಸರ್ಕಾರದ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಲು ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರ ಹಾಜರಾದ ವಕೀಲರು ತಿಳಿಸಿದ್ದಾರೆ. ಕಾವೇರಿ ಕಾಲಿಂಗ್ ಯೋಜನೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ದಾಖಲಿಸಲು ಸರ್ಕಾರದ ವಕೀಲರು ಸಮಯವನ್ನು ಕೋರಿದರು. ಮುಂದಿನ ವಿಚಾರಣೆಯನ್ನು ಮಾರ್ಚ್ 8 ಕ್ಕೆ ನಿಗದಿಪಡಿಸಲಾಗಿದೆ.

ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಸರ್ಕಾರದ ಹೇಳಿಕೆಯಲ್ಲಿನ ಅಸಂಗತತೆಯನ್ನು ಗಮನಿಸಿತ್ತು ಮತ್ತು ಸರ್ಕಾರದ ಹೆಚ್ಚುವರಿ ವಕೀಲರಿಗೆ ರಾಜ್ಯ ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದೆಯೆ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಫೌಂಡೇಶನ್ ಕಾವೇರಿ ಜನ್ಮಸ್ಥಳವಾದ ತಲಕಾವೇರಿಯಿಂದ ತಿರುವಾರೂರಿನವರೆಗೆ ಕಾವೇರಿ ನದಿ ತೀರದ 639 ಕಿಲೋಮೀಟರ್ ವಿಸ್ತೀರ್ಣದಲ್ಲಿ 253 ಕೋಟಿ ಸಸಿಗಳನ್ನು ನೆಡಲು ಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಸಸಿಗೆ 42 ರೂಗಳನ್ನು ಸಾರ್ವಜನಿಕರಿಂದ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ, ಫೌಂಡೇಶನ್ 10,626 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಿದೆ. ಇದನ್ನು ಅರ್ಜಿಯಲ್ಲಿ “ದೊಡ್ಡ ಹಗರಣ” ಎಂದು ವಿವರಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.


ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...