Homeಮುಖಪುಟ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

- Advertisement -
- Advertisement -

ಇಶಾ ಫೌಂಡೇಶನ್ ತನ್ನ ’ಕಾವೇರಿ ಕಾಲಿಂಗ್’ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಬಿಂಬಿಸಿ ಜನರಿಂದ ಹಣವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಿಳಿಯಲು ತನಿಖೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಕಾವೇರಿ ಕಾಲಿಂಗ್ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಪ್ರತಿಷ್ಠಾನದ ಒಂದು ವಿಭಾಗವಾದ ಇಶಾ ಔಟ್‌ರೀಚ್, ಈ ಕಾರ್ಯಕ್ರಮವು ತನ್ನದೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದು, ಇದನ್ನು ಕರ್ನಾಟಕ ಸರ್ಕಾರದ ಯೋಜನೆಯೆಂದು ನಿರೂಪಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಮೂಲದ ವಕೀಲರೊಬ್ಬರು, “ಇಮೇಲ್‌ನಲ್ಲಿ ತನ್ನ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿ ಇರುವುದರಿಂದ, ’ಕಾವೇರಿ ಕಾಲಿಂಗ್’ ಯೋಜನೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದರೆ, ಅದು ’ಕಂಟೆಂಪ್ಟ್ ಆಫ್ ಕೋರ್ಟ್’ ಆಗುತ್ತದೆ” ಎಂದು ಡಿಸ್ಕವರಿ ಟಿವಿ ಚಾನೆಲ್‌ಗೆ ಎಚ್ಚರಿಕೆ ನೀಡಿದ್ದರು. ನಂತರ ಅರ್ಜಿದಾರರನ್ನು ತೆಗೆದುಹಾಕುವ ಮೂಲಕ ನ್ಯಾಯಾಲಯವು ಈ ವಿಷಯವನ್ನು ಸು-ಮೋಟು ರೀತಿಯಲ್ಲಿ ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಂದೆ ತೀರ್ಪು ಬಾಕಿ ಉಳಿದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಇದು ಕರ್ನಾಟಕ ಸರ್ಕಾರದ ಉಪಕ್ರಮವಲ್ಲ ಎಂದು ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ಇಶಾ ಔಟ್‌ರೀಚ್ ಅನ್ನು ಪ್ರತಿನಿಧಿಸುವ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದರು. ಬಾರ್ & ಬೆಂಚ್ ಉಲ್ಲೇಖಿಸಿದಂತೆ ಸ್ಪಷ್ಟೀಕರಣವನ್ನು ಈ ಕೆಳಗೆ ನೀಡಲಾಗಿದೆ. ಓದಿ;

“ಕಾವೇರಿ ಕಾಲಿಂಗ್ ಯೋಜನೆಯು ಇಶಾ ಔಟ್‌ರೀಚ್‌ನ ಒಂದು ಕಾರ್ಯಕ್ರಮವಾಗಿದೆ. ಇದು ಕರ್ನಾಟಕ ಸರ್ಕಾರದ ಯೋಜನೆಯಲ್ಲ. ಕಾವೇರಿ ಕಾಲಿಂಗ್ ಯೋಜನೆಯ ಭಾಗವಾಗಿ ನೆಟ್ಟಿರುವ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ನೆಡಲಾಗುತ್ತದೆ, ಸರ್ಕಾರಿ ಜಮೀನುಗಳಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

ಆದರೆ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್.ಎಸ್.ಮಗದುಮ್ ಅವರ ವಿಭಾಗೀಯ ಪೀಠವು, “ನ್ಯಾಯಾಲಯವು ಈ ಸ್ಪಷ್ಟೀಕರಣದ ಬಗ್ಗೆ ತೃಪ್ತಿ ಹೊಂದಿಲ್ಲ, ಏಕೆಂದರೆ ಇದು ವೆಬ್‌ಸೈಟಿನಲ್ಲಿ ನೇರವಾಗಿ ಗೋಚರಿಸಬೇಕು. ಅದನ್ನು ವೆಬ್‌ಸೈಟ್‌ನಲ್ಲಿ ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ನೋಡಿ. ಇದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರಬೇಕು” ಎಂದು ವಿಭಾಗೀಯ ಪೀಠ ಸೂಚಿಸಿದೆ.

ಖಾಸಗಿ ಯೋಜನೆಯೊಂದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡದೆ ಕರ್ನಾಟಕ ಸರ್ಕಾರ ಇಶಾ ಫೌಂಡೇಶನ್‌ಗೆ ಸರ್ಕಾರಿ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಅವಕಾಶ ನೀಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದಕ್ಕೆ ಇಶಾ ಔಟ್‌ರೀಚ್ ವಕೀಲರು ಪ್ರತಿಕ್ರಿಯಿಸಿದ ಪ್ರಕಾರ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ಮಾತ್ರ ನೆಡಲಾಗುತ್ತಿದೆ, ಆದರೆ ಸರ್ಕಾರಿ ಜಮೀನುಗಳಲ್ಲಿ ಅಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕಾರ್ಯವನ್ನು “ಗೊಂದಲದ ಕ್ರಮ” ಎಂದು ವಿವರಿಸಿದ ಅರ್ಜಿಯಲ್ಲಿ, ಪ್ರತಿಷ್ಠಾನವು 10,626 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಇದು ಸರ್ಕಾರದ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಲು ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರ ಹಾಜರಾದ ವಕೀಲರು ತಿಳಿಸಿದ್ದಾರೆ. ಕಾವೇರಿ ಕಾಲಿಂಗ್ ಯೋಜನೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ದಾಖಲಿಸಲು ಸರ್ಕಾರದ ವಕೀಲರು ಸಮಯವನ್ನು ಕೋರಿದರು. ಮುಂದಿನ ವಿಚಾರಣೆಯನ್ನು ಮಾರ್ಚ್ 8 ಕ್ಕೆ ನಿಗದಿಪಡಿಸಲಾಗಿದೆ.

ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಸರ್ಕಾರದ ಹೇಳಿಕೆಯಲ್ಲಿನ ಅಸಂಗತತೆಯನ್ನು ಗಮನಿಸಿತ್ತು ಮತ್ತು ಸರ್ಕಾರದ ಹೆಚ್ಚುವರಿ ವಕೀಲರಿಗೆ ರಾಜ್ಯ ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದೆಯೆ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಫೌಂಡೇಶನ್ ಕಾವೇರಿ ಜನ್ಮಸ್ಥಳವಾದ ತಲಕಾವೇರಿಯಿಂದ ತಿರುವಾರೂರಿನವರೆಗೆ ಕಾವೇರಿ ನದಿ ತೀರದ 639 ಕಿಲೋಮೀಟರ್ ವಿಸ್ತೀರ್ಣದಲ್ಲಿ 253 ಕೋಟಿ ಸಸಿಗಳನ್ನು ನೆಡಲು ಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಸಸಿಗೆ 42 ರೂಗಳನ್ನು ಸಾರ್ವಜನಿಕರಿಂದ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ, ಫೌಂಡೇಶನ್ 10,626 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಿದೆ. ಇದನ್ನು ಅರ್ಜಿಯಲ್ಲಿ “ದೊಡ್ಡ ಹಗರಣ” ಎಂದು ವಿವರಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.


ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...