Homeಮುಖಪುಟ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

- Advertisement -
- Advertisement -

ಇಶಾ ಫೌಂಡೇಶನ್ ತನ್ನ ’ಕಾವೇರಿ ಕಾಲಿಂಗ್’ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಬಿಂಬಿಸಿ ಜನರಿಂದ ಹಣವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಿಳಿಯಲು ತನಿಖೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಕಾವೇರಿ ಕಾಲಿಂಗ್ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಪ್ರತಿಷ್ಠಾನದ ಒಂದು ವಿಭಾಗವಾದ ಇಶಾ ಔಟ್‌ರೀಚ್, ಈ ಕಾರ್ಯಕ್ರಮವು ತನ್ನದೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದು, ಇದನ್ನು ಕರ್ನಾಟಕ ಸರ್ಕಾರದ ಯೋಜನೆಯೆಂದು ನಿರೂಪಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಮೂಲದ ವಕೀಲರೊಬ್ಬರು, “ಇಮೇಲ್‌ನಲ್ಲಿ ತನ್ನ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿ ಇರುವುದರಿಂದ, ’ಕಾವೇರಿ ಕಾಲಿಂಗ್’ ಯೋಜನೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದರೆ, ಅದು ’ಕಂಟೆಂಪ್ಟ್ ಆಫ್ ಕೋರ್ಟ್’ ಆಗುತ್ತದೆ” ಎಂದು ಡಿಸ್ಕವರಿ ಟಿವಿ ಚಾನೆಲ್‌ಗೆ ಎಚ್ಚರಿಕೆ ನೀಡಿದ್ದರು. ನಂತರ ಅರ್ಜಿದಾರರನ್ನು ತೆಗೆದುಹಾಕುವ ಮೂಲಕ ನ್ಯಾಯಾಲಯವು ಈ ವಿಷಯವನ್ನು ಸು-ಮೋಟು ರೀತಿಯಲ್ಲಿ ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಂದೆ ತೀರ್ಪು ಬಾಕಿ ಉಳಿದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಇದು ಕರ್ನಾಟಕ ಸರ್ಕಾರದ ಉಪಕ್ರಮವಲ್ಲ ಎಂದು ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ಇಶಾ ಔಟ್‌ರೀಚ್ ಅನ್ನು ಪ್ರತಿನಿಧಿಸುವ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದರು. ಬಾರ್ & ಬೆಂಚ್ ಉಲ್ಲೇಖಿಸಿದಂತೆ ಸ್ಪಷ್ಟೀಕರಣವನ್ನು ಈ ಕೆಳಗೆ ನೀಡಲಾಗಿದೆ. ಓದಿ;

“ಕಾವೇರಿ ಕಾಲಿಂಗ್ ಯೋಜನೆಯು ಇಶಾ ಔಟ್‌ರೀಚ್‌ನ ಒಂದು ಕಾರ್ಯಕ್ರಮವಾಗಿದೆ. ಇದು ಕರ್ನಾಟಕ ಸರ್ಕಾರದ ಯೋಜನೆಯಲ್ಲ. ಕಾವೇರಿ ಕಾಲಿಂಗ್ ಯೋಜನೆಯ ಭಾಗವಾಗಿ ನೆಟ್ಟಿರುವ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ನೆಡಲಾಗುತ್ತದೆ, ಸರ್ಕಾರಿ ಜಮೀನುಗಳಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

ಆದರೆ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್.ಎಸ್.ಮಗದುಮ್ ಅವರ ವಿಭಾಗೀಯ ಪೀಠವು, “ನ್ಯಾಯಾಲಯವು ಈ ಸ್ಪಷ್ಟೀಕರಣದ ಬಗ್ಗೆ ತೃಪ್ತಿ ಹೊಂದಿಲ್ಲ, ಏಕೆಂದರೆ ಇದು ವೆಬ್‌ಸೈಟಿನಲ್ಲಿ ನೇರವಾಗಿ ಗೋಚರಿಸಬೇಕು. ಅದನ್ನು ವೆಬ್‌ಸೈಟ್‌ನಲ್ಲಿ ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ನೋಡಿ. ಇದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರಬೇಕು” ಎಂದು ವಿಭಾಗೀಯ ಪೀಠ ಸೂಚಿಸಿದೆ.

ಖಾಸಗಿ ಯೋಜನೆಯೊಂದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡದೆ ಕರ್ನಾಟಕ ಸರ್ಕಾರ ಇಶಾ ಫೌಂಡೇಶನ್‌ಗೆ ಸರ್ಕಾರಿ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಅವಕಾಶ ನೀಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದಕ್ಕೆ ಇಶಾ ಔಟ್‌ರೀಚ್ ವಕೀಲರು ಪ್ರತಿಕ್ರಿಯಿಸಿದ ಪ್ರಕಾರ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ಮಾತ್ರ ನೆಡಲಾಗುತ್ತಿದೆ, ಆದರೆ ಸರ್ಕಾರಿ ಜಮೀನುಗಳಲ್ಲಿ ಅಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕಾರ್ಯವನ್ನು “ಗೊಂದಲದ ಕ್ರಮ” ಎಂದು ವಿವರಿಸಿದ ಅರ್ಜಿಯಲ್ಲಿ, ಪ್ರತಿಷ್ಠಾನವು 10,626 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಇದು ಸರ್ಕಾರದ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಲು ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರ ಹಾಜರಾದ ವಕೀಲರು ತಿಳಿಸಿದ್ದಾರೆ. ಕಾವೇರಿ ಕಾಲಿಂಗ್ ಯೋಜನೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ದಾಖಲಿಸಲು ಸರ್ಕಾರದ ವಕೀಲರು ಸಮಯವನ್ನು ಕೋರಿದರು. ಮುಂದಿನ ವಿಚಾರಣೆಯನ್ನು ಮಾರ್ಚ್ 8 ಕ್ಕೆ ನಿಗದಿಪಡಿಸಲಾಗಿದೆ.

ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಸರ್ಕಾರದ ಹೇಳಿಕೆಯಲ್ಲಿನ ಅಸಂಗತತೆಯನ್ನು ಗಮನಿಸಿತ್ತು ಮತ್ತು ಸರ್ಕಾರದ ಹೆಚ್ಚುವರಿ ವಕೀಲರಿಗೆ ರಾಜ್ಯ ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದೆಯೆ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಫೌಂಡೇಶನ್ ಕಾವೇರಿ ಜನ್ಮಸ್ಥಳವಾದ ತಲಕಾವೇರಿಯಿಂದ ತಿರುವಾರೂರಿನವರೆಗೆ ಕಾವೇರಿ ನದಿ ತೀರದ 639 ಕಿಲೋಮೀಟರ್ ವಿಸ್ತೀರ್ಣದಲ್ಲಿ 253 ಕೋಟಿ ಸಸಿಗಳನ್ನು ನೆಡಲು ಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಸಸಿಗೆ 42 ರೂಗಳನ್ನು ಸಾರ್ವಜನಿಕರಿಂದ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ, ಫೌಂಡೇಶನ್ 10,626 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಿದೆ. ಇದನ್ನು ಅರ್ಜಿಯಲ್ಲಿ “ದೊಡ್ಡ ಹಗರಣ” ಎಂದು ವಿವರಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.


ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....