Homeಮುಖಪುಟ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

- Advertisement -
- Advertisement -

ಇಶಾ ಫೌಂಡೇಶನ್ ತನ್ನ ’ಕಾವೇರಿ ಕಾಲಿಂಗ್’ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಬಿಂಬಿಸಿ ಜನರಿಂದ ಹಣವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತಿಳಿಯಲು ತನಿಖೆ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಕಾವೇರಿ ಕಾಲಿಂಗ್ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಪ್ರತಿಷ್ಠಾನದ ಒಂದು ವಿಭಾಗವಾದ ಇಶಾ ಔಟ್‌ರೀಚ್, ಈ ಕಾರ್ಯಕ್ರಮವು ತನ್ನದೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದು, ಇದನ್ನು ಕರ್ನಾಟಕ ಸರ್ಕಾರದ ಯೋಜನೆಯೆಂದು ನಿರೂಪಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಮೂಲದ ವಕೀಲರೊಬ್ಬರು, “ಇಮೇಲ್‌ನಲ್ಲಿ ತನ್ನ ಅರ್ಜಿ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿ ಇರುವುದರಿಂದ, ’ಕಾವೇರಿ ಕಾಲಿಂಗ್’ ಯೋಜನೆಯ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದರೆ, ಅದು ’ಕಂಟೆಂಪ್ಟ್ ಆಫ್ ಕೋರ್ಟ್’ ಆಗುತ್ತದೆ” ಎಂದು ಡಿಸ್ಕವರಿ ಟಿವಿ ಚಾನೆಲ್‌ಗೆ ಎಚ್ಚರಿಕೆ ನೀಡಿದ್ದರು. ನಂತರ ಅರ್ಜಿದಾರರನ್ನು ತೆಗೆದುಹಾಕುವ ಮೂಲಕ ನ್ಯಾಯಾಲಯವು ಈ ವಿಷಯವನ್ನು ಸು-ಮೋಟು ರೀತಿಯಲ್ಲಿ ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಂದೆ ತೀರ್ಪು ಬಾಕಿ ಉಳಿದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಇದು ಕರ್ನಾಟಕ ಸರ್ಕಾರದ ಉಪಕ್ರಮವಲ್ಲ ಎಂದು ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ಇಶಾ ಔಟ್‌ರೀಚ್ ಅನ್ನು ಪ್ರತಿನಿಧಿಸುವ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದರು. ಬಾರ್ & ಬೆಂಚ್ ಉಲ್ಲೇಖಿಸಿದಂತೆ ಸ್ಪಷ್ಟೀಕರಣವನ್ನು ಈ ಕೆಳಗೆ ನೀಡಲಾಗಿದೆ. ಓದಿ;

“ಕಾವೇರಿ ಕಾಲಿಂಗ್ ಯೋಜನೆಯು ಇಶಾ ಔಟ್‌ರೀಚ್‌ನ ಒಂದು ಕಾರ್ಯಕ್ರಮವಾಗಿದೆ. ಇದು ಕರ್ನಾಟಕ ಸರ್ಕಾರದ ಯೋಜನೆಯಲ್ಲ. ಕಾವೇರಿ ಕಾಲಿಂಗ್ ಯೋಜನೆಯ ಭಾಗವಾಗಿ ನೆಟ್ಟಿರುವ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ನೆಡಲಾಗುತ್ತದೆ, ಸರ್ಕಾರಿ ಜಮೀನುಗಳಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.

ಆದರೆ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್.ಎಸ್.ಮಗದುಮ್ ಅವರ ವಿಭಾಗೀಯ ಪೀಠವು, “ನ್ಯಾಯಾಲಯವು ಈ ಸ್ಪಷ್ಟೀಕರಣದ ಬಗ್ಗೆ ತೃಪ್ತಿ ಹೊಂದಿಲ್ಲ, ಏಕೆಂದರೆ ಇದು ವೆಬ್‌ಸೈಟಿನಲ್ಲಿ ನೇರವಾಗಿ ಗೋಚರಿಸಬೇಕು. ಅದನ್ನು ವೆಬ್‌ಸೈಟ್‌ನಲ್ಲಿ ಹೇಗೆ ಪ್ರಕಟಿಸಲಾಗಿದೆ ಎಂಬುದನ್ನು ನೋಡಿ. ಇದು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರಬೇಕು” ಎಂದು ವಿಭಾಗೀಯ ಪೀಠ ಸೂಚಿಸಿದೆ.

ಖಾಸಗಿ ಯೋಜನೆಯೊಂದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡದೆ ಕರ್ನಾಟಕ ಸರ್ಕಾರ ಇಶಾ ಫೌಂಡೇಶನ್‌ಗೆ ಸರ್ಕಾರಿ ಜಮೀನುಗಳಲ್ಲಿ ಸಸಿಗಳನ್ನು ನೆಡಲು ಅವಕಾಶ ನೀಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಇದಕ್ಕೆ ಇಶಾ ಔಟ್‌ರೀಚ್ ವಕೀಲರು ಪ್ರತಿಕ್ರಿಯಿಸಿದ ಪ್ರಕಾರ ಸಸಿಗಳನ್ನು ರೈತರಿಗೆ ಸೇರಿದ ಜಮೀನುಗಳಲ್ಲಿ ಮಾತ್ರ ನೆಡಲಾಗುತ್ತಿದೆ, ಆದರೆ ಸರ್ಕಾರಿ ಜಮೀನುಗಳಲ್ಲಿ ಅಲ್ಲ ಎಂದು ವಾದಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವ ಕಾರ್ಯವನ್ನು “ಗೊಂದಲದ ಕ್ರಮ” ಎಂದು ವಿವರಿಸಿದ ಅರ್ಜಿಯಲ್ಲಿ, ಪ್ರತಿಷ್ಠಾನವು 10,626 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಇದು ಸರ್ಕಾರದ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಲು ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರ ಹಾಜರಾದ ವಕೀಲರು ತಿಳಿಸಿದ್ದಾರೆ. ಕಾವೇರಿ ಕಾಲಿಂಗ್ ಯೋಜನೆಗೆ ಸಂಬಂಧಿಸಿದಂತೆ ತನ್ನ ನಿಲುವನ್ನು ದಾಖಲಿಸಲು ಸರ್ಕಾರದ ವಕೀಲರು ಸಮಯವನ್ನು ಕೋರಿದರು. ಮುಂದಿನ ವಿಚಾರಣೆಯನ್ನು ಮಾರ್ಚ್ 8 ಕ್ಕೆ ನಿಗದಿಪಡಿಸಲಾಗಿದೆ.

ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಸರ್ಕಾರದ ಹೇಳಿಕೆಯಲ್ಲಿನ ಅಸಂಗತತೆಯನ್ನು ಗಮನಿಸಿತ್ತು ಮತ್ತು ಸರ್ಕಾರದ ಹೆಚ್ಚುವರಿ ವಕೀಲರಿಗೆ ರಾಜ್ಯ ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದೆಯೆ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಫೌಂಡೇಶನ್ ಕಾವೇರಿ ಜನ್ಮಸ್ಥಳವಾದ ತಲಕಾವೇರಿಯಿಂದ ತಿರುವಾರೂರಿನವರೆಗೆ ಕಾವೇರಿ ನದಿ ತೀರದ 639 ಕಿಲೋಮೀಟರ್ ವಿಸ್ತೀರ್ಣದಲ್ಲಿ 253 ಕೋಟಿ ಸಸಿಗಳನ್ನು ನೆಡಲು ಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಸಸಿಗೆ 42 ರೂಗಳನ್ನು ಸಾರ್ವಜನಿಕರಿಂದ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ, ಫೌಂಡೇಶನ್ 10,626 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಿದೆ. ಇದನ್ನು ಅರ್ಜಿಯಲ್ಲಿ “ದೊಡ್ಡ ಹಗರಣ” ಎಂದು ವಿವರಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.


ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...