Homeಚಳವಳಿಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ - ಪ್ರಭುತ್ವದ ದಬ್ಬಾಳಿಕೆ ನೋಡಿ!

ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

ಪ್ರಭುತ್ವವು ಈ ಹೋರಾಟವನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಆದರೆ ಪ್ರಭುತ್ವವು ಇದನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ. ಹೋರಾಟ ಮಾಡಲು ರಾಷ್ಟ್ರ ರಾಜಧಾನಿಯತ್ತ ಮುನ್ನುಗ್ಗುತ್ತಿರುವ ರೈತರನ್ನು ಚದುರಿಸಲು ಅವರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ಬಳಸುತ್ತಿದೆ.

ರೈತರು ಹೊರಟಿದ್ದ ಟ್ರ್ಯಾಕ್ಟರ್‌ಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಿ ದಾಳಿ ಮಾಡಲಾಗಿದೆ. ರೈತರನ್ನು ನೇರಾನೇರ ಎದುರುಗೊಳ್ಳಲು ಮುಖವಿಲ್ಲದ ಪ್ರಭುತ್ವ ಈಗ ಹಿಂಸೆಯಿಂದ ಹೋರಾಟವನ್ನು ಮಣಿಸಲು ಮುಂದಾಗಿದೆ ಎಂಬ ಟೀಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

ಕಾಂಗ್ರೆಸ್ ಮುಖಂಡ ರೋಹನ್ ಗುಪ್ತಾ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಬಿಜೆಪಿ ಸರ್ಕಾರ ರೈತರ ಕಣ್ಣೀರನ್ನು ಒರೆಸುವ ಬದಲು ಅವರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ನಿಜಕ್ಕೂ ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ನಿರೂಪಕ ಮತ್ತು ವರದಿಗಾರರಾದ ಸಾಹಿಲ್ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಇದು ಯಾವುದೋ ಗಡಿಯಲ್ಲಲ್ಲ. ಜೈಪುರ-ದೆಹಲಿಯ ಹೆದ್ದಾರಿಯಲ್ಲಿ. ರೈತರ ಮೇಲೆ ಅಶ್ರುವಾಯು ದಾಳಿ. ಈ ರೈತರು ಹರಿಯಾಣ, ರಾಜಸ್ತಾನ ಮತ್ತು ಮಹಾರಾಷ್ಟ್ರದಿಂದ ದೆಹಲಿಯ ಕಡೆ ಮೆರವಣಿಗೆ ಹೊರಟಿದ್ದರು. ದೆಹಲಿಯಿಂದ 60 ಕಿ.ಮೀ ದೂರದಲ್ಲಿ ಈ ಘಟನೆ ನಡೆಯುತ್ತಿದೆ. ಶೆಲ್‌ಗಳು ರೈತರ ಟ್ರ್ಯಾಕ್ಟರ್‌ಗಳ ಮೇಲೆ ಬೀಳುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋ ನೋಡಿದರೆ ಗಡಿಯಲ್ಲಿ ಯುದ್ಧ ನಡೆಯುತ್ತಿರುವಂತೆ ತೋರುತ್ತದೆ. ಆದರೆ ಇದು, “ರೈತರು ನಮ್ಮ ದೇಶದ ಬೆನ್ನೆಲುಬು ಎಂದು ಹೇಳುತ್ತಿರುವ ಸರ್ಕಾರ ರೈತರ ಬೆನ್ನೆಲುಬನ್ನು ಮುರಿಯಲು ಬಳಸುತ್ತಿರುವ ಕುತಂತ್ರ.” ಪ್ರಸ್ತುತ ನಮ್ಮನ್ನಾಳುವ ಸರ್ಕಾರಗಳು ಭಯೋತ್ಪಾದಕರ ರೀತಿಯಲ್ಲಿ ವರ್ತಿಸುತ್ತಿರುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ.

ಇದನ್ನೂ ಓದಿ: ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಪ್ರತಿಭಟನಾನಿರತ ರೈತರೊಡನೆ ಕೇಂದ್ರ ಸರ್ಕಾರವು ಇದುವರೆಗೆ ಆರು ಸುತ್ತಿನ ಮಾತುಕತೆಗಳನ್ನು ನಡೆಸಿದೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ಡಿಸಂಬರ್ 30 ರಂದು ನಡೆದ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಅಂದಿನ ಮಾತುಕತೆಯೂ ಅಪೂರ್ಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಇಂದು (ಜನವರಿ 4) ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಲಿದೆ.

ಆದರೆ ಇದರ ಮಧ್ಯೆ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ಇಲ್ಲಿ ಮಾತುಕತೆಗೆ ಕರೆದು, ಅಲ್ಲಿ ಅವರ ಮೇಲೆ ದಾಳಿ ಮಾಡುತ್ತಿದೆ. ಇದನ್ನು ಖಂಡಿಸಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...