Homeಚಳವಳಿಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ - ಪ್ರಭುತ್ವದ ದಬ್ಬಾಳಿಕೆ ನೋಡಿ!

ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

ಪ್ರಭುತ್ವವು ಈ ಹೋರಾಟವನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಆದರೆ ಪ್ರಭುತ್ವವು ಇದನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ. ಹೋರಾಟ ಮಾಡಲು ರಾಷ್ಟ್ರ ರಾಜಧಾನಿಯತ್ತ ಮುನ್ನುಗ್ಗುತ್ತಿರುವ ರೈತರನ್ನು ಚದುರಿಸಲು ಅವರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ಬಳಸುತ್ತಿದೆ.

ರೈತರು ಹೊರಟಿದ್ದ ಟ್ರ್ಯಾಕ್ಟರ್‌ಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಿ ದಾಳಿ ಮಾಡಲಾಗಿದೆ. ರೈತರನ್ನು ನೇರಾನೇರ ಎದುರುಗೊಳ್ಳಲು ಮುಖವಿಲ್ಲದ ಪ್ರಭುತ್ವ ಈಗ ಹಿಂಸೆಯಿಂದ ಹೋರಾಟವನ್ನು ಮಣಿಸಲು ಮುಂದಾಗಿದೆ ಎಂಬ ಟೀಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

ಕಾಂಗ್ರೆಸ್ ಮುಖಂಡ ರೋಹನ್ ಗುಪ್ತಾ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಬಿಜೆಪಿ ಸರ್ಕಾರ ರೈತರ ಕಣ್ಣೀರನ್ನು ಒರೆಸುವ ಬದಲು ಅವರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ನಿಜಕ್ಕೂ ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ನಿರೂಪಕ ಮತ್ತು ವರದಿಗಾರರಾದ ಸಾಹಿಲ್ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಇದು ಯಾವುದೋ ಗಡಿಯಲ್ಲಲ್ಲ. ಜೈಪುರ-ದೆಹಲಿಯ ಹೆದ್ದಾರಿಯಲ್ಲಿ. ರೈತರ ಮೇಲೆ ಅಶ್ರುವಾಯು ದಾಳಿ. ಈ ರೈತರು ಹರಿಯಾಣ, ರಾಜಸ್ತಾನ ಮತ್ತು ಮಹಾರಾಷ್ಟ್ರದಿಂದ ದೆಹಲಿಯ ಕಡೆ ಮೆರವಣಿಗೆ ಹೊರಟಿದ್ದರು. ದೆಹಲಿಯಿಂದ 60 ಕಿ.ಮೀ ದೂರದಲ್ಲಿ ಈ ಘಟನೆ ನಡೆಯುತ್ತಿದೆ. ಶೆಲ್‌ಗಳು ರೈತರ ಟ್ರ್ಯಾಕ್ಟರ್‌ಗಳ ಮೇಲೆ ಬೀಳುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋ ನೋಡಿದರೆ ಗಡಿಯಲ್ಲಿ ಯುದ್ಧ ನಡೆಯುತ್ತಿರುವಂತೆ ತೋರುತ್ತದೆ. ಆದರೆ ಇದು, “ರೈತರು ನಮ್ಮ ದೇಶದ ಬೆನ್ನೆಲುಬು ಎಂದು ಹೇಳುತ್ತಿರುವ ಸರ್ಕಾರ ರೈತರ ಬೆನ್ನೆಲುಬನ್ನು ಮುರಿಯಲು ಬಳಸುತ್ತಿರುವ ಕುತಂತ್ರ.” ಪ್ರಸ್ತುತ ನಮ್ಮನ್ನಾಳುವ ಸರ್ಕಾರಗಳು ಭಯೋತ್ಪಾದಕರ ರೀತಿಯಲ್ಲಿ ವರ್ತಿಸುತ್ತಿರುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ.

ಇದನ್ನೂ ಓದಿ: ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಪ್ರತಿಭಟನಾನಿರತ ರೈತರೊಡನೆ ಕೇಂದ್ರ ಸರ್ಕಾರವು ಇದುವರೆಗೆ ಆರು ಸುತ್ತಿನ ಮಾತುಕತೆಗಳನ್ನು ನಡೆಸಿದೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ಡಿಸಂಬರ್ 30 ರಂದು ನಡೆದ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಅಂದಿನ ಮಾತುಕತೆಯೂ ಅಪೂರ್ಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಇಂದು (ಜನವರಿ 4) ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಲಿದೆ.

ಆದರೆ ಇದರ ಮಧ್ಯೆ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ಇಲ್ಲಿ ಮಾತುಕತೆಗೆ ಕರೆದು, ಅಲ್ಲಿ ಅವರ ಮೇಲೆ ದಾಳಿ ಮಾಡುತ್ತಿದೆ. ಇದನ್ನು ಖಂಡಿಸಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...