Homeಚಳವಳಿಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ - ಪ್ರಭುತ್ವದ ದಬ್ಬಾಳಿಕೆ ನೋಡಿ!

ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

ಪ್ರಭುತ್ವವು ಈ ಹೋರಾಟವನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಆದರೆ ಪ್ರಭುತ್ವವು ಇದನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ. ಹೋರಾಟ ಮಾಡಲು ರಾಷ್ಟ್ರ ರಾಜಧಾನಿಯತ್ತ ಮುನ್ನುಗ್ಗುತ್ತಿರುವ ರೈತರನ್ನು ಚದುರಿಸಲು ಅವರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ಬಳಸುತ್ತಿದೆ.

ರೈತರು ಹೊರಟಿದ್ದ ಟ್ರ್ಯಾಕ್ಟರ್‌ಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಿ ದಾಳಿ ಮಾಡಲಾಗಿದೆ. ರೈತರನ್ನು ನೇರಾನೇರ ಎದುರುಗೊಳ್ಳಲು ಮುಖವಿಲ್ಲದ ಪ್ರಭುತ್ವ ಈಗ ಹಿಂಸೆಯಿಂದ ಹೋರಾಟವನ್ನು ಮಣಿಸಲು ಮುಂದಾಗಿದೆ ಎಂಬ ಟೀಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

ಕಾಂಗ್ರೆಸ್ ಮುಖಂಡ ರೋಹನ್ ಗುಪ್ತಾ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಬಿಜೆಪಿ ಸರ್ಕಾರ ರೈತರ ಕಣ್ಣೀರನ್ನು ಒರೆಸುವ ಬದಲು ಅವರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ನಿಜಕ್ಕೂ ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ನಿರೂಪಕ ಮತ್ತು ವರದಿಗಾರರಾದ ಸಾಹಿಲ್ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಇದು ಯಾವುದೋ ಗಡಿಯಲ್ಲಲ್ಲ. ಜೈಪುರ-ದೆಹಲಿಯ ಹೆದ್ದಾರಿಯಲ್ಲಿ. ರೈತರ ಮೇಲೆ ಅಶ್ರುವಾಯು ದಾಳಿ. ಈ ರೈತರು ಹರಿಯಾಣ, ರಾಜಸ್ತಾನ ಮತ್ತು ಮಹಾರಾಷ್ಟ್ರದಿಂದ ದೆಹಲಿಯ ಕಡೆ ಮೆರವಣಿಗೆ ಹೊರಟಿದ್ದರು. ದೆಹಲಿಯಿಂದ 60 ಕಿ.ಮೀ ದೂರದಲ್ಲಿ ಈ ಘಟನೆ ನಡೆಯುತ್ತಿದೆ. ಶೆಲ್‌ಗಳು ರೈತರ ಟ್ರ್ಯಾಕ್ಟರ್‌ಗಳ ಮೇಲೆ ಬೀಳುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋ ನೋಡಿದರೆ ಗಡಿಯಲ್ಲಿ ಯುದ್ಧ ನಡೆಯುತ್ತಿರುವಂತೆ ತೋರುತ್ತದೆ. ಆದರೆ ಇದು, “ರೈತರು ನಮ್ಮ ದೇಶದ ಬೆನ್ನೆಲುಬು ಎಂದು ಹೇಳುತ್ತಿರುವ ಸರ್ಕಾರ ರೈತರ ಬೆನ್ನೆಲುಬನ್ನು ಮುರಿಯಲು ಬಳಸುತ್ತಿರುವ ಕುತಂತ್ರ.” ಪ್ರಸ್ತುತ ನಮ್ಮನ್ನಾಳುವ ಸರ್ಕಾರಗಳು ಭಯೋತ್ಪಾದಕರ ರೀತಿಯಲ್ಲಿ ವರ್ತಿಸುತ್ತಿರುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ.

ಇದನ್ನೂ ಓದಿ: ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಪ್ರತಿಭಟನಾನಿರತ ರೈತರೊಡನೆ ಕೇಂದ್ರ ಸರ್ಕಾರವು ಇದುವರೆಗೆ ಆರು ಸುತ್ತಿನ ಮಾತುಕತೆಗಳನ್ನು ನಡೆಸಿದೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ಡಿಸಂಬರ್ 30 ರಂದು ನಡೆದ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಅಂದಿನ ಮಾತುಕತೆಯೂ ಅಪೂರ್ಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಇಂದು (ಜನವರಿ 4) ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಲಿದೆ.

ಆದರೆ ಇದರ ಮಧ್ಯೆ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ಇಲ್ಲಿ ಮಾತುಕತೆಗೆ ಕರೆದು, ಅಲ್ಲಿ ಅವರ ಮೇಲೆ ದಾಳಿ ಮಾಡುತ್ತಿದೆ. ಇದನ್ನು ಖಂಡಿಸಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...