Homeಚಳವಳಿಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ - ಪ್ರಭುತ್ವದ ದಬ್ಬಾಳಿಕೆ ನೋಡಿ!

ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

ಪ್ರಭುತ್ವವು ಈ ಹೋರಾಟವನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಆದರೆ ಪ್ರಭುತ್ವವು ಇದನ್ನು ತಡೆಯುವ ಸಲುವಾಗಿ ಎಲ್ಲಾ ಹಿಂಬಾಗಿಲ ಕುತಂತ್ರಗಳನ್ನೂ ಬಳಸಿ ವಿಫಲವಾದ ನಂತರ, ಈಗ ಭಯೋತ್ಪಾದಕರ ಮೇಲೆ ದಾಳಿ ಮಾಡುವಂತೆ ರೈತರ ಮೇಲೆ ದಾಳಿ ಮಾಡುತ್ತಿದೆ. ಹೋರಾಟ ಮಾಡಲು ರಾಷ್ಟ್ರ ರಾಜಧಾನಿಯತ್ತ ಮುನ್ನುಗ್ಗುತ್ತಿರುವ ರೈತರನ್ನು ಚದುರಿಸಲು ಅವರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ಬಳಸುತ್ತಿದೆ.

ರೈತರು ಹೊರಟಿದ್ದ ಟ್ರ್ಯಾಕ್ಟರ್‌ಗಳ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಿ ದಾಳಿ ಮಾಡಲಾಗಿದೆ. ರೈತರನ್ನು ನೇರಾನೇರ ಎದುರುಗೊಳ್ಳಲು ಮುಖವಿಲ್ಲದ ಪ್ರಭುತ್ವ ಈಗ ಹಿಂಸೆಯಿಂದ ಹೋರಾಟವನ್ನು ಮಣಿಸಲು ಮುಂದಾಗಿದೆ ಎಂಬ ಟೀಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

ಕಾಂಗ್ರೆಸ್ ಮುಖಂಡ ರೋಹನ್ ಗುಪ್ತಾ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಬಿಜೆಪಿ ಸರ್ಕಾರ ರೈತರ ಕಣ್ಣೀರನ್ನು ಒರೆಸುವ ಬದಲು ಅವರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ನಿಜಕ್ಕೂ ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ನಿರೂಪಕ ಮತ್ತು ವರದಿಗಾರರಾದ ಸಾಹಿಲ್ ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಇದು ಯಾವುದೋ ಗಡಿಯಲ್ಲಲ್ಲ. ಜೈಪುರ-ದೆಹಲಿಯ ಹೆದ್ದಾರಿಯಲ್ಲಿ. ರೈತರ ಮೇಲೆ ಅಶ್ರುವಾಯು ದಾಳಿ. ಈ ರೈತರು ಹರಿಯಾಣ, ರಾಜಸ್ತಾನ ಮತ್ತು ಮಹಾರಾಷ್ಟ್ರದಿಂದ ದೆಹಲಿಯ ಕಡೆ ಮೆರವಣಿಗೆ ಹೊರಟಿದ್ದರು. ದೆಹಲಿಯಿಂದ 60 ಕಿ.ಮೀ ದೂರದಲ್ಲಿ ಈ ಘಟನೆ ನಡೆಯುತ್ತಿದೆ. ಶೆಲ್‌ಗಳು ರೈತರ ಟ್ರ್ಯಾಕ್ಟರ್‌ಗಳ ಮೇಲೆ ಬೀಳುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋ ನೋಡಿದರೆ ಗಡಿಯಲ್ಲಿ ಯುದ್ಧ ನಡೆಯುತ್ತಿರುವಂತೆ ತೋರುತ್ತದೆ. ಆದರೆ ಇದು, “ರೈತರು ನಮ್ಮ ದೇಶದ ಬೆನ್ನೆಲುಬು ಎಂದು ಹೇಳುತ್ತಿರುವ ಸರ್ಕಾರ ರೈತರ ಬೆನ್ನೆಲುಬನ್ನು ಮುರಿಯಲು ಬಳಸುತ್ತಿರುವ ಕುತಂತ್ರ.” ಪ್ರಸ್ತುತ ನಮ್ಮನ್ನಾಳುವ ಸರ್ಕಾರಗಳು ಭಯೋತ್ಪಾದಕರ ರೀತಿಯಲ್ಲಿ ವರ್ತಿಸುತ್ತಿರುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ.

ಇದನ್ನೂ ಓದಿ: ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಪ್ರತಿಭಟನಾನಿರತ ರೈತರೊಡನೆ ಕೇಂದ್ರ ಸರ್ಕಾರವು ಇದುವರೆಗೆ ಆರು ಸುತ್ತಿನ ಮಾತುಕತೆಗಳನ್ನು ನಡೆಸಿದೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ಡಿಸಂಬರ್ 30 ರಂದು ನಡೆದ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಅಂದಿನ ಮಾತುಕತೆಯೂ ಅಪೂರ್ಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಇಂದು (ಜನವರಿ 4) ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಲಿದೆ.

ಆದರೆ ಇದರ ಮಧ್ಯೆ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಅಶ್ರುವಾಯು ದಾಳಿ ಮಾಡುತ್ತಿದೆ. ಇಲ್ಲಿ ಮಾತುಕತೆಗೆ ಕರೆದು, ಅಲ್ಲಿ ಅವರ ಮೇಲೆ ದಾಳಿ ಮಾಡುತ್ತಿದೆ. ಇದನ್ನು ಖಂಡಿಸಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...