Homeಮುಖಪುಟಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: PIL ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: PIL ವಿಚಾರಣೆಗೆ ಸುಪ್ರೀಂ ಒಪ್ಪಿಗೆ

- Advertisement -
- Advertisement -

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ ನೀಡಿದ ವಿಡಿಯೋಗಳು ವೈರಲ್ ಆಗಿ ವ್ಯಾಪಕ ಖಂಡನೆಗೊಳಗಾಗಿದ್ದವು. ಈ ವಿಚಾರದಲ್ಲಿ ಕ್ರಿಮಿನಲ್ ಕ್ರಮಕ್ಕೆ ಒತ್ತಾಯಿಸಿ ದಾಖಲಾಗಿರುವ PIL ಅನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್‌ರವರು ಈ ವಿಚಾರವನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಬೇಕು ಎಂದು ಸಿಜೆಐರವರಿಗೆ ಮನವಿ ಮಾಡಿದರು. “ಸತ್ಯಮೇವ ಜಯತೆ ಎಂಬ ಘೋಷಣೆಯು ಶಾಸ್ತ್ರಮೇವ ಜಯತೆ ಎಂದು ಬದಲಾಗಿರುವ ಕಾಲಘಟ್ಟದಲ್ಲಿ ನಾವು ಬದುಕುತ್ತಿದ್ದೇವೆ” ಎಂದು ಸಿಬಲ್ ಉಲ್ಲೇಖಸಿದ್ದಾರೆ.

ನಾವು ಇದನ್ನು ಪರಿಗಣಿಸುತ್ತೇವೆ. ಈ ಕುರಿತು ತನಿಖೆ ನಡೆಯುತ್ತಿರುಬೇಕಲ್ಲವೇ ಎಂದು ಸಿಜೆಐ ಪ್ರಶ್ನಿಸಿದಾಗ, “ಎಫ್‌ಐಆರ್ ದಾಖಲಾಗಿದೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ, ಇದು ಉತ್ತರಾಖಂಡ ರಾಜ್ಯವಾದ್ದರಿಂದ ನಿಮ್ಮ ಮಧ್ಯಪ್ರವೇಶವಿಲ್ಲದಿದ್ದರೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಸಿಬಲ್ ಉತ್ತರಿಸಿದ್ದಾರೆ.

ಪಾಟ್ನಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಅಂಜನಾ ಪ್ರಕಾಶ್ ಹಾಗೂ ಪತ್ರಕರ್ತರಾದ ಕುರ್ಬಾನ್ ಅಲಿಯವರು ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ವಿರುದ್ಧದ ದ್ವೇಷ ಭಾಷಣ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಪಿಐಎಲ್‌ ಸಲ್ಲಿಸಿದ್ದಾರೆ.

ಧರ್ಮ ಸಂಸದ್ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಹಿಂದೂಗಳು ಶಸ್ತ್ರಗಳನ್ನು ಕೈಗಿತ್ತೆಗೊಂಡು ಮುಸ್ಲಿಮರ ವಿರುದ್ಧ ಯುದ್ದ ಮಾಡಬೇಕು ಎಂದು ಅವರು ಕರೆ ನೀಡಿದ್ದರು.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ. ದೇಶದ ಮುಸ್ಲಿಮರನ್ನು “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಕರೆ ನೀಡಿದ್ದರು.


ಇದನ್ನೂ ಓದಿ: ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...