Homeಮುಖಪುಟಇಂದು ದೇಶದಾದ್ಯಂತ ರೈಲು ತಡೆಗೆ ಕರೆ ನೀಡಿದ ರೈತ ಒಕ್ಕೂಟ: ರಾಜ್ಯದಲ್ಲೂ ಬೆಂಬಲ

ಇಂದು ದೇಶದಾದ್ಯಂತ ರೈಲು ತಡೆಗೆ ಕರೆ ನೀಡಿದ ರೈತ ಒಕ್ಕೂಟ: ರಾಜ್ಯದಲ್ಲೂ ಬೆಂಬಲ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕರೆ ನೀಡಲಾಗಿರುವ ರೈಲ್ ರೋಕೋ ಚಳವಳಿಯ ಹಿನ್ನೆಲೆಯಲ್ಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ 20 ಹೆಚ್ಚುವರಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ಪಡೆಗಳನ್ನು ರೈಲು ಇಲಾಖೆ ನಿಯೋಜಿಸಿದೆ.

ಇಂದು (ಫೆಬ್ರವರಿ 18) ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ದೇಶಾದ್ಯಂತ ರೈಲು ತಡೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾದ ಡಾ. ದರ್ಶನ್ ಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ಫೆಬ್ರವರಿ 10 ರಂದು ತಿಳಿಸಿದ್ದರು.

ಪ್ರತಿಭಟನೆಯ ನೇತೃತ್ವ ವಹಿಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕಳೆದ ವಾರ ರೈಲ್ವೆ ತಡೆಯನ್ನು ಘೋಷಿಸಿ, ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಗೆ ಒತ್ತಾಯಿಸಿತ್ತು.

ರೈಲ್ವೆ ಸಂರಕ್ಷಣಾ ಪಡೆ ಮಹಾನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, “ಶಾಂತಿ ಕಾಪಾಡುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ನಾವು ಜಿಲ್ಲಾಡಳಿತಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಎಲ್ಲಾ ಸ್ಥಳದಲ್ಲಿ ಒಂದೊಂದು ನಿಯಂತ್ರಣ ಕೊಠಡಿ ಇರುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ನಾವಿಬ್ಬರು ನಮಗಿಬ್ಬರು’ ಹೇಳಿಕೆಗೆ ’ಗೊ ಕೊರೊನಾ ಗೊ’ ಖ್ಯಾತಿಯ ಸಚಿವ ಅಠಾವಳೆ ಹೇಳಿದ್ದೇನು?

“ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳು ಮತ್ತು ಇತರ ಕೆಲವು ಪ್ರದೇಶಗಳು ನಮ್ಮ ಕೇಂದ್ರಬಿಂದುವಾಗಿರುತ್ತವೆ. ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ನ 20 ಪಡೆಗಳನ್ನು (ಸುಮಾರು 20,000 ಸಿಬ್ಬಂದಿ) ಈ ಪ್ರದೇಶಗಳಲ್ಲಿ ನಿಯೋಜಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

“ಪ್ರಯಾಣಿಕರಿಗೆ ಅನಾನುಕೂಲವಾಗದಂತೆ ನಾವು ಪ್ರತಿಭಟನಾಕಾರರ ಮನವೊಲಿಸಲು ಬಯಸುತ್ತೇವೆ. ನಮಗೆ ನಾಲ್ಕು ಗಂಟೆಗಳ ಅವಕಾಶ ಇದೆ ಮತ್ತು (ರೈಲ್ ರೋಕೋ) ಶಾಂತಿಯುತವಾಗಿ ನಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ರೈಲ್ವೆ ಸಂರಕ್ಷಣಾ ಪಡೆ ಮಹಾನಿರ್ದೇಶಕ ಅರುಣ್ ಕುಮಾರ್ ಹೇಳಿದ್ದಾರೆ.

ಪಂಜಾಬಿನಲ್ಲಿ ಕಳೆದ ಸೆಪ್ಟಂಬರ್ 25 ರಿಂದ ರೈಕ್ ರೋಕೋ ಚಳುವಳಿ ಆರಂಭವಾಗಿತ್ತು. ಮುಖ್ಯಮಂತ್ರಿಗಳ ಮನವಿ ಹಿನ್ನೆಲೆಯಲ್ಲಿ ರೈಲ್ ರೋಕೋ ನಿಲ್ಲಿಸಲಾಗಿತ್ತು. ಆದರೆ ಸಂಯುಕ್ತ ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿಯು ಇನ್ನು ರೈಲ್ ರೋಕೋವನ್ನು ಮುಂದುವರೆಸಿದೆ. ಈಗ ಮತ್ತೆ ಸಂಯುಕ್ತ ಕಿಸಾನ್ ಮೋರ್ಚಾ ಇಂದು (ಫೆ.18) ದೇಶಾದ್ಯಂತ ರೈಲ್ ರೋಕೋಗೆ ಕರೆ ನೀಡಿದೆ.

ರಾಜ್ಯದಲ್ಲಿಯೂ ರೈಲ್ ರೋಕೋ

ದೇಶಾದ್ಯಂತ ಫೆ.18ರಂದು ಮಧ್ಯಾಹ್ನ 12ರಿಂದ 3ರವರೆಗೆ ರೈಲು ತಡೆ ಚಳವಳಿಗೆ ಕರೆ ನೀಡಲಾಗಿದೆ. ಆ ಪ್ರಕಾರವಾಗಿಯೇ ರಾಜ್ಯದಲ್ಲೂ ರೈಲು ತಡೆದು ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದೆಂದು ರೈತ ಸಂಘಟನೆಗಳ ಸಂಯುಕ್ತ ಹೋರಾಟದ ಸಂಯೋಜಕರಾದ ಬಯ್ಯಾರೆಡ್ಡಿ, ಕೋಡಿಹಳ್ಳಿ ಚಂದ್ರಶೇಖರ್, ಗುರುಪ್ರಸಾದ್ ಕೆರೆಗೋಡು, ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.


ಇದನ್ನೂ ಓದಿ: ಹಿಂದಿನ ಸರ್ಕಾರದ ಮೇಲೆ ತೈಲ ಬೆಲೆ ಹೆಚ್ಚಳದ ಹೊಣೆ ಹೊರಿಸಿದ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...