Homeಮುಖಪುಟ'ಪಾಕಿಸ್ತಾನಿ' ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

“ಮಿಯಾನ್-ಟಿಯಾನ್” ಮತ್ತು “ಪಾಕಿಸ್ತಾನಿ” ಎಂಬ ಪದಗಳನ್ನು ಬಳಸುವುದು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಾಗ್ಯೂ, ಈ ಪದಗಳು ಕೆಟ್ಟ ಅಭಿರುಚಿಯದ್ದಾಗಿದೆ ಎಂದು ಅದು ಹೇಳಿದೆ. ‘ಪಾಕಿಸ್ತಾನಿ’ ಎಂದು ಕರೆಯುವುದು

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಜಾರ್ಖಂಡ್‌ನ ಚಾಸ್‌ನ ಉಪ-ವಿಭಾಗೀಯ ಕಚೇರಿಯಲ್ಲಿ ಉರ್ದು ಭಾಷಾಂತರಕಾರ ಮತ್ತು ಮಾಹಿತಿ ಹಕ್ಕು (ಆರ್‌ಟಿಐ) ನ ಕಾರ್ಯಕಾರಿ ಗುಮಾಸ್ತರು ಸಲ್ಲಿಸಿದ ಕ್ರಿಮಿನಲ್ ಪ್ರಕರಣದಿಂದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ. ‘ಪಾಕಿಸ್ತಾನಿ’ ಎಂದು ಕರೆಯುವುದು

ಫೆಬ್ರವರಿ 11 ರ ನ್ಯಾಯಾಲಯದ ಆದೇಶದಲ್ಲಿ, “ಮೇಲ್ಮನವಿದಾರರು ಮಾಹಿತಿದಾರರನ್ನು ‘ಮಿಯಾನ್-ಟಿಯಾನ್’ ಮತ್ತು ‘ಪಾಕಿಸ್ತಾನಿ’ ಎಂದು ಕರೆಯುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಸ್ಸಂದೇಹವಾಗಿ, ಮಾಡಿದ ಹೇಳಿಕೆಗಳು ಕಳಪೆ ಅಭಿರುಚಿಯಿಂದ ಕೂಡಿವೆ.

ಆದಾಗ್ಯೂ, ಇದು ಮಾಹಿತಿದಾರರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದಿಲ್ಲ. ಆದ್ದರಿಂದ, ಮೇಲ್ಮನವಿದಾರರನ್ನು ಸೆಕ್ಷನ್ 298 ಐಪಿಸಿ ಅಡಿಯಲ್ಲಿಯೂ ಬಿಡುಗಡೆ ಮಾಡಲಾಗುತ್ತದೆ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ.” ಎಂದು ಹೇಳಿದೆ. ಐಪಿಸಿಯ ಸೆಕ್ಷನ್ 298 ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶಪೂರ್ವಕ ಉದ್ದೇಶದಿಂದ ಮಾಡಿದ ಪದಗಳು ಅಥವಾ ಸನ್ನೆಗಳ ಬಗ್ಗೆಗಿನ ಅಪರಾಧದ ಬಗ್ಗೆ ಹೇಳುತ್ತದೆ.

ಆರೋಪಿ ಹರಿ ನಂದನ್ ಸಿಂಗ್, ಬೊಕಾರೊದ ಹೆಚ್ಚುವರಿ ಜಿಲ್ಲಾಧಿಕಾರಿಯಿಂದ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಮಾಹಿತಿಯೊಂದನ್ನು ಕೋರಿದ್ದರು. ಈ ವೇಳೆ ಅವರಿಗೆ ಮಾಹಿತಿಯನ್ನು ನೀಡಲಾಗಿತ್ತಾದರೂ, ಅದರಿಂದ ಅವರು ತೃಪ್ತರಾಗಿರಲಿಲ್ಲ. ಈ ವೇಳೆ ಅವರು ಮೇಲ್ಮನವಿ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಹಾಗಾಗಿ, ಮೇಲ್ಮನವಿ ಪ್ರಾಧಿಕಾರವು ಭಾಷಾಂತರಕಾರರಿಗೆ ಮಾಹಿತಿಯನ್ನು ಮೇಲ್ಮನವಿದಾರರಿಗೆ ವೈಯಕ್ತಿಕವಾಗಿ ಒದಗಿಸುವಂತೆ ನಿರ್ದೇಶಿಸಿತ್ತು.

ನವೆಂಬರ್ 18, 2020 ರಂದು, ಮಾಹಿತಿದಾರರು ಮಾಹಿತಿಯನ್ನು ಹಸ್ತಾಂತರಿಸಲು ಆರೋಪಿಯ ಮನೆಗೆ ಹೋಗಿದ್ದರು. ಈ ವೇಳೆ ಆರೋಪಿ ಆರಂಭದಲ್ಲಿ ದಾಖಲೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದರು. ಅದಾಗ್ಯೂ, ನಂತರ ಮಾಹಿತಿದಾರರ ಒತ್ತಾಯದ ಮೇರೆಗೆ ಅದನ್ನು ಸ್ವೀಕರಿಸಿದರು. ಈ ವೇಳೆ ಆರೋಪಿ ತನ್ನನ್ನು ಧಾರ್ಮಿಕವಾಗಿ ನಿಂದಿಸಿದ್ದಾನೆ ಮತ್ತು ಕ್ರಿಮಿನಲ್ ಬಲಪ್ರಯೋಗ ಮಾಡಿದ್ದಾನೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದರು.

ತನಿಖೆಯ ನಂತರ, ವಿಚಾರಣಾ ನ್ಯಾಯಾಲಯವು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಆರೋಪಗಳನ್ನು ರೂಪಿಸಲು ಆದೇಶಿಸಿತ್ತು.

ಈ ಕಾರ್ಯವಿಧಾನಗಳನ್ನು ರದ್ದುಗೊಳಿಸುವಂತೆ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ಆದೇಶದ ವಿರುದ್ಧ ವ್ಯಕ್ತಿಯ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸೆಕ್ಷನ್ 353 ಹೊರತುಪಡಿಸಿ “ಶಾಂತಿ ಭಂಗವನ್ನು ಉಂಟುಮಾಡುವ ಯಾವುದೇ ಕೃತ್ಯ ಅವನ ಕಡೆಯಿಂದ ಆಗಿಲ್ಲ” ಎಂದು ಹೇಳಿರುವ ಪೀಠವು ಅವರನ್ನು ಉದ್ದೇಶಪೂರ್ವಕ ಅವಮಾನದ ಸೆಕ್ಷನ್ 504ರ ಅಪರಾಧದಿಂದ ಮುಕ್ತಗೊಳಿಸಿದೆ.

“ವಿಚಾರಣಾ ನ್ಯಾಯಾಲಯದ ಆದೇಶವನ್ನು ಸಮರ್ಥಿಸಿಕೊಂಡಿರುವ ಹೈಕೋರ್ಟ್‌ನ ಆದೇಶವನ್ನು ನಾವು ರದ್ದುಗೊಳಿಸಿದ್ದೇವೆ. ಪರಿಣಾಮವಾಗಿ ಮೇಲ್ಮನವಿ ಸಲ್ಲಿಸಿದ ಅರ್ಜಿಯನ್ನು ಅನುಮತಿಸುತ್ತೇವೆ. ಮೇಲ್ಮನವಿ ಸಲ್ಲಿಸಿದವರ ವಿರುದ್ಧ ಆರೋಪಿಸಲಾದ ಎಲ್ಲಾ ಮೂರು ಅಪರಾಧಗಳಿಂದ ಅವರನ್ನು ಬಿಡುಗಡೆ ಮಾಡುತ್ತೇವೆ” ಎಂದು ಅದು ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ

ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...