Homeಮುಖಪುಟಬ್ರಿಜ್‌ಮೋಹನ್ ಮುಂದೆ ಬೇರೆಯವರಿಗೆ ಗೂಂಡಾ ಎಂದು ಕರೆಯುವುದು 'ಪದ'ಕ್ಕೆ ಮಾಡಿದ ಅವಮಾನ: ಛತ್ತೀಸ್‌ಗಢ ಸಿಎಂ

ಬ್ರಿಜ್‌ಮೋಹನ್ ಮುಂದೆ ಬೇರೆಯವರಿಗೆ ಗೂಂಡಾ ಎಂದು ಕರೆಯುವುದು ‘ಪದ’ಕ್ಕೆ ಮಾಡಿದ ಅವಮಾನ: ಛತ್ತೀಸ್‌ಗಢ ಸಿಎಂ

- Advertisement -
- Advertisement -

ಬಿಜೆಪಿಯ ಹಿರಿಯ ನಾಯಕ ಬ್ರಿಜ್‌ಮೋಹನ್ ಅಗರ್ವಾಲ್‌ ಅವರ ಮುಂದೆ ಬೇರೆಯವರನ್ನು ಗೂಂಡಾ ಎಂದು ಕರೆಯುವುದು ಪದಕ್ಕೆ ಮಾಡಿದ ಅವಮಾನ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಟೀಕಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಬ್ರಿಜ್‌ಮೋಹನ್ ಅಗರವಾಲ್ ಚುನಾವಣಾ ಪ್ರಚಾರದ ವೇಳೆ ತನ್ನ ಮೇಲೆ ಕಾಂಗ್ರೆಸ್‌ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಭೂಪೇಶ್ ಬಘೇಲ್, ಮೊದಲ ವಿಷಯವೆಂದರೆ ಬ್ರಿಜ್ಮೋಹನ್ ಅಗರ್ವಾಲ್ ಮೇಲೆ ಯಾರೂ ದಾಳಿ ಮಾಡಲು ಸಾಧ್ಯವಿಲ್ಲ. ವೀಡಿಯೊದಲ್ಲಿ ಅಗರವಾಲ್ ಅವರೇ ತಳ್ಳುತ್ತಿರುವುದನ್ನು ಕಾಣಬಹುದು. ಸೇಠ್ ಜಿ ಚುನಾವಣೆಯಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಈ ಆರೋಪ ಸೂಚಿಸುತ್ತದೆ. ಬ್ರಿಜ್ಮೋಹನ್ ಅವರ ಮುಂದೆ ಬೇರೊಬ್ಬರನ್ನು ಗೂಂಡ ಎಂದು ಕರೆಯುವುದು ಗೂಂಡ ಪದಕ್ಕೆ ಮಾಡಿದ ಅವಮಾನ ಎಂದು ಬಾಘೇಲ್ ಹೇಳಿದ್ದಾರೆ.

ರಾಯ್‌ಪುರ ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ 7 ಬಾರಿ ಶಾಸಕರಾಗಿರುವ ಅಗರ್‌ವಾಲ್ ಅವರು ತಮ್ಮ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾಗ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ ಹಲವಾರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕ್ರಮಕ್ಕೆ ಒತ್ತಾಯಿಸಿ ಧರಣಿ ಕುಳಿತಿದ್ದರು.

ರಾಯ್‌ಪುರದ ಪ್ರಸಿದ್ಧ ದುಧಾಧಾರಿ ಮಠದ ಮುಖ್ಯ ಅರ್ಚಕ ಮಹಂತ್ ರಾಮ್ ಸುಂದರ್ ದಾಸ್ ಅವರನ್ನು ರಾಯ್‌ಪುರ ಸಿಟಿ ಸೌತ್‌ನಿಂದ ಅಗರ್ವಾಲ್ ವಿರುದ್ಧ ಕಾಂಗ್ರೆಸ್ ಕಣಕ್ಕಿಳಿಸಿದೆ. ಗುರುವಾರ ಅಗರವಾಲ್ ಅವರು ತಮ್ಮ ಕ್ಷೇತ್ರದ ಬೈಜನಾಥ್ ಪಾರಾದಲ್ಲಿ ಪ್ರಚಾರ ಮಾಡುತ್ತಿದ್ದಾಗ ಕೆಲವರು ತಮ್ಮ ಕೊರಳಪಟ್ಟಿ ಹಿಡಿದು ಹಲ್ಲೆ ಮಾಡಲು ಪ್ರಯತ್ನಿಸಿದರು ಎಂದು ಆರೋಪಿಸಿದ್ದರು.

ಘಟನೆಯನ್ನು ಯೋಜಿತ ಮತ್ತು ಉದ್ದೇಶಿತ ಘಟನೆ ಎಂದು ಹೇಳಿದ ಅಗರ್ವಾಲ್ ತನ್ನ ಮೇಲೆ ದಾಳಿ ಮಾಡಿದವರು ಕಾಂಗ್ರೆಸ್‌ ನಾಯಕರ ಬೆಂಬಲಿಗರು ಎಂದು ಹೇಳಿದ್ದರು. ಘಟನೆಗೆ ಸಂಬಂಧಿಸಿದಂತೆ ಮೊಹಮ್ಮದ್ ಸಾಜಿದ್ ಖಾನ್ ಅಲಿಯಾಸ್ ಚಿಂಟು ಎಂಬ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಯ 20 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನ.7 ರಂದು ನಡೆದಿತ್ತು. ಉಳಿದ ಸ್ಥಾನಗಳಿಗೆ ನ.17ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನು ಓದಿ: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸಾಧ್ಯತೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...