Homeಕರ್ನಾಟಕಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

ಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

- Advertisement -
- Advertisement -

| ಗುರುಬಸವ ಬರಗೂರು |

ನೋಟಾ ಮತ ಚಲಾವಣೆ ಜಾರಿಯಾದ ನಂತರ ವಿವಿಧ ಉದ್ದೇಶಗಳಿಗಾಗಿ ನೋಟಾ ಮತ ಚಲಾಯಿಸುವಂತೆ ಬಹಳಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪ್ರಚಾರ ಮಾಡಿದ್ದು ನಮಗೆ ನೆನಪಿದೆ. ಬಹುತೇಕ ವಿದ್ಯಾವಂತರು ಮಾತ್ರ ನೋಟ ಕುರಿತು ಯೋಚಿಸುತ್ತಿದ್ದರು. ಅಭ್ಯರ್ಥಿಗಳು ಭ್ರಷ್ಟಾಚಾರಿಗಳಾಗಿದ್ದು, ಇವರು ಯಾರು ನಮ್ಮ ಆಯ್ಕೆಯಲ್ಲ ಎಂದು ಹೇಳಿದ್ದಿದೆ. ಆದರೆ ನಮ್ಮ ಭವಿಷ್ಯಕ್ಕಾಗಿ ಮದ್ಯವನ್ನು ನಿಷೇಧಿಸಿ, ಕುಟುಂಬಗಳನ್ನು ರಕ್ಷಿಸಿ ಎಂಬ ಆಶಯಕ್ಕಾಗಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ರಾಜ್ಯದ ಹಲವು ಜಿಲ್ಲೆಗಳಲ್ಲಿ ನೋಟಾ ಮತ ಚಲಾಯಿಸಿ ಎಂದು ಬಹಿರಂಗ ಪ್ರಚಾರಾಂದೋಲನಕ್ಕೆ ಇಳಿದಿದ್ದಾರೆ.

ಪ್ರಜಾಪ್ರಭುತ್ವವೆಂದರೆ ಕೇವಲ ಮತ ಚಲಾಯಿಸುವುದಲ್ಲ, ಪ್ರಜಾಪ್ರಭುತ್ವದಲ್ಲಿ  ಜನರಿಗೆ ಪ್ರತಿಭಟಿಸುವ ಹಕ್ಕು ಸಹ ಇದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನ ನಾವು ಸಂವಿಧಾನದ ಆಶಯಗಳಿಗೆ ಬದ್ಧರಾಗಿರುತ್ತೇವೆ ಮತ್ತು ಸಂವಿಧಾನವನ್ನು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಅದೇ ಸಂವಿಧಾನದ 47ನೇ ಪರಿಚ್ಛೇದ ಸಾಮಾಜಿಕ ಒಳಿತಿಗಾಗಿ ಮದ್ಯ ನಿಷೇಧದ ಬಗ್ಗೆ ಮಾತಾಡುತ್ತದೆ. ಆದರೆ ಅನದ್ನು ಅನುಷ್ಠಾನ ಮಾಡುತ್ತಿಲ್ಲ ಏಕೆ ಎಂದು ಆಂದೋಲನದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಮದ್ಯ ನಿಷೇಷ ಆಂದೋಲನ ವೇದಿಕೆಯು ಉತ್ತರ  ಕರ್ನಾಟಕದಲ್ಲಿ ಪ್ರಬಲವಾಗಿದೆ. ಅಲ್ಲೆಲ್ಲಾ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿಯೂ ಮೂರು ಪಕ್ಷದ ಮುಖಂಡರಿಗೆ ಮದ್ಯ ನಿಷೇಧಿಸುವಂತೆ ಪತ್ರ ಚಳವಳಿ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪಕ್ಷವೂ ಮದ್ಯ ನಿಷೇಧಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲದ ಕಾರಣಕ್ಕಾಗಿ ಪ್ರತಿ ಊರಿಗೂ ಹೋಗಿ ನೋಟಾ ಮತ ಚಲಾವಣೆ ಮಾಡುವಂತೆ ಜನರಿಗೆ ಕರೆ ನೀಡುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಮ್ಮ ವೇದಿಕೆಯ ಪ್ರಭಾವ ಕಡಿಮೆ ಇರುವುದರಿಂದ ರಾಯಚೂರು, ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಬಂದು ಸ್ವಯಂ ಪ್ರೇರಿತರಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಮದ್ಯ ಸೇವನೆಯಿಂದಾಗಿ ದಿನ ನಿತ್ಯ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.  ಇದರಿಂದ ಎಷ್ಟೋ ಮಕ್ಕಳು ತಬ್ಬಲಿಗಳಾದರೆ ಮಹಿಳೆಯರು ವಿಧವೆಯರಾಗುವ ಪರಿಸ್ಥಿತಿ ಬಂದಿದೆ. ಕಷ್ಟ ಪಟ್ಟು ದುಡಿದರೂ ಹಣವೆಲ್ಲಾ ಮದ್ಯಕ್ಕೆ ಹೋಗುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಎಲ್ಲಾ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧವಾಗಬೇಕೆಂದು ಪ್ರಚಾರಾಂದೋಲನ ತಂಡದಲ್ಲಿರುವ ಮದ್ಯ ನಿಷೇಧ ಆಂದೋಲನದ ಮೋಕ್ಷಮ್ಮ, ರಜಿಯ ಬೇಗಂ, ಅಕ್ಕಮ್ಮ, ಹುಲಿಗೇಮ್ಮ, ಅಮರೇಶ, ಬಸವರಾಜ ಮುಂತಾದವರು ಅಭಿಪ್ರಾಯಪಡುತ್ತಾರೆ.

2016 ಆಕ್ಟೋಬರ್ 02 ರ ಗಾಂಧೀಜಿ ಜನ್ಮದಿನದಂದು ಅವರ ಆಶಯದಂತೆ ಮದ್ಯ ನಿಷೇಧ ಆಗಲೇಬೇಕು ಎಂದು ಸುಮಾರು 40 ಸಾವಿರ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ಶುರು ಮಾಡಿದರು. ನಂತರ ಅದೇ ವರ್ಷ ಜನವರಿ 30 (ಗಾಂಧೀಜಿ ನಿಧನವಾದ ದಿನ) ರಂದು “ನಮ್ಮ ಗಾಂಧಿ, ನಮಗೆ ಕೊಡಿ” ಎಂದು 16 ಜಿಲ್ಲೆಗಳಲ್ಲಿ  ಈ ಹೋರಾಟವನ್ನು ಮಾಡಲಾಯಿತು. ಅದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ  ಸುಮಾರು 71 ದಿನಗಳ ಕಾಲ ರಾಯಚೂರು ನಗರದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಹೀಗೆ ನಿರಂತರ ಶಾಂತಿಯುತವಾಗಿ ಹೋರಾಟಗಳು ನಡೆಯುತ್ತಾ ಬಂದರೂ ಸಹ ಯಾವ ರಾಜಕೀಯ ಪಕ್ಷಗಳು ಮಹಿಳೆಯರ ಸಮಸ್ಯೆಗಳಿಗೆ  ಸ್ಪಂದಿಸಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು 2019ರ ಜನವರಿ 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆಯ ದಾರಿಯ ಮಧ್ಯದಲ್ಲಿ ರೇಣುಕಮ್ಮ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು ಸಹ ಯಾವ ಪಕ್ಷದ ಮುಖಂಡರೂ ಬಂದು ಮಹಿಳೆಯರನ್ನು ಭೇಟಿ ಮಾಡದೇ ನಮ್ಮನ್ನು ಹಾಗೂ ನಮ್ಮ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನೋಟಾ ಚಲಾಯಿಸುವ ಮೂಲಕ ಮಹಿಳೆಯರ ಶಕ್ತಿ  ಏನೆಂದು ಆಳುವವರಿಗೆ ತಿಳಿಸಲು ಮುಂದಾಗಿದ್ದೇವೆ ಅನ್ನುತ್ತಾರೆ ಹೋರಾಟಗಾರ್ತಿ ವಿರುಪಮ್ಮನವರು.

ಬೆಂಗಳೂರಿನ ತಂಡವು ಈಗಾಗಲೇ ಶ್ರೀ ರಾಂಪುರ ಮತ್ತು ಶೇಷಾದ್ರಿಪುರಂ ಸ್ಲಂಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನೊಂದು ತಂಡವು ಮಂಡ್ಯದ ಹಲವು ಸ್ಲಂಗಳಲ್ಲಿ ಪ್ರಚಾರ ಮುಗಿಸಿದ್ದಾರೆ. ಪ್ರಚಾರದ ವೇಳೆ ಅಲ್ಲಿನ ಮಹಿಳೆಯರು ಸಹ ತಮ್ಮ ಜೀವನದ ನೋವಿನ ಕಥೆಗಳನ್ನು ಹೇಳುತ್ತಿದ್ದಾರೆ, ಖಂಡಿತ ನೋಟಾಗೆ ಓಟು ಹಾಕುತ್ತೇವೆ ಎಂದು ಬೆಂಬಲ ವ್ಯಕ್ತಿವಾಗಿದೆ ಎನ್ನುತ್ತಾರೆ ವಿರುಪಮ್ಮ.

ಚುನಾವಣೆಯ ದಿವಸ ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಬಹಳಷ್ಟು ಸಂಖ್ಯೆಗಳಲ್ಲಿ ಜನ ಒಂದೆಡೆ ಸೇರಿಕೊಂಡು ಶಾಂತಿಯುತವಾದ ಸತ್ಯಾಗ್ರಹ (ಬಹಿರಂಗ ನೋಟಾ) ಮಾಡಿ ನಿಮ್ಮ ಸಿಟ್ಟನ್ನು ರಾಜಕೀಯ ಪಕ್ಷಿಗಳಿಗೆ ತೋರಿಸಬೇಕು. ಮದ್ಯ ನಿಷೇಧದ ಪರವಾಗಿರುವ ಜನರು ಮುಂದಿನ ತಿಂಗಳು ರಾಜಕೀಯ ಪಕ್ಷಗಳ ಮುಖಂಡರಿಗೆ/ಅಧ್ಯಕ್ಷರಿಗೆ ಲಕ್ಷಾಂತರ ಪತ್ರಗಳನ್ನು ಬರೆಯಿರಿ. ಪತ್ರದಲ್ಲಿ ಸಹೋದರರೇ ಅಥವಾ ಮುಖಂಡರೇ ನೀವು ನಿಮ್ಮ ಸರ್ಕಾರಕ್ಕೆ ಬರುವ ಆದಾಯದ ಚಿಂತೆ ಮಾಡದೇ ಸಮಾಜದ ಆರೋಗ್ಯದ ಚಿಂತೆ ಮಾಡಿ ಹಾಗೂ ಮಹಿಳೆಯರ ಗೌರವಕ್ಕೆ ಆದ್ಯತೆ ನೀಡಿ. ಇದು ಮಹಿಳೆಯರ ಬದುಕಿನ ಪ್ರಶ್ನೆ ಎಂದು ಮನದಟ್ಟು ಮಾಡಿರಿ ಎಂದು ಜನರಲ್ಲಿ ಮನವಿ ಮಾಡುತ್ತಿರುವುದು ಕಂಡುಬರುತ್ತಿದೆ. ಫಲಿತಾಂಶದ ದಿನ ಇದರ ಪ್ರಭಾವ ರಾಜಕೀಯ ಪಕ್ಷಗಳಿಗೆ ಅರ್ಥವಾಗಬಹುದು ಕಾದು ನೋಡೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...