Homeಕರ್ನಾಟಕಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

ಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

- Advertisement -
- Advertisement -

| ಗುರುಬಸವ ಬರಗೂರು |

ನೋಟಾ ಮತ ಚಲಾವಣೆ ಜಾರಿಯಾದ ನಂತರ ವಿವಿಧ ಉದ್ದೇಶಗಳಿಗಾಗಿ ನೋಟಾ ಮತ ಚಲಾಯಿಸುವಂತೆ ಬಹಳಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪ್ರಚಾರ ಮಾಡಿದ್ದು ನಮಗೆ ನೆನಪಿದೆ. ಬಹುತೇಕ ವಿದ್ಯಾವಂತರು ಮಾತ್ರ ನೋಟ ಕುರಿತು ಯೋಚಿಸುತ್ತಿದ್ದರು. ಅಭ್ಯರ್ಥಿಗಳು ಭ್ರಷ್ಟಾಚಾರಿಗಳಾಗಿದ್ದು, ಇವರು ಯಾರು ನಮ್ಮ ಆಯ್ಕೆಯಲ್ಲ ಎಂದು ಹೇಳಿದ್ದಿದೆ. ಆದರೆ ನಮ್ಮ ಭವಿಷ್ಯಕ್ಕಾಗಿ ಮದ್ಯವನ್ನು ನಿಷೇಧಿಸಿ, ಕುಟುಂಬಗಳನ್ನು ರಕ್ಷಿಸಿ ಎಂಬ ಆಶಯಕ್ಕಾಗಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ರಾಜ್ಯದ ಹಲವು ಜಿಲ್ಲೆಗಳಲ್ಲಿ ನೋಟಾ ಮತ ಚಲಾಯಿಸಿ ಎಂದು ಬಹಿರಂಗ ಪ್ರಚಾರಾಂದೋಲನಕ್ಕೆ ಇಳಿದಿದ್ದಾರೆ.

ಪ್ರಜಾಪ್ರಭುತ್ವವೆಂದರೆ ಕೇವಲ ಮತ ಚಲಾಯಿಸುವುದಲ್ಲ, ಪ್ರಜಾಪ್ರಭುತ್ವದಲ್ಲಿ  ಜನರಿಗೆ ಪ್ರತಿಭಟಿಸುವ ಹಕ್ಕು ಸಹ ಇದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನ ನಾವು ಸಂವಿಧಾನದ ಆಶಯಗಳಿಗೆ ಬದ್ಧರಾಗಿರುತ್ತೇವೆ ಮತ್ತು ಸಂವಿಧಾನವನ್ನು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಅದೇ ಸಂವಿಧಾನದ 47ನೇ ಪರಿಚ್ಛೇದ ಸಾಮಾಜಿಕ ಒಳಿತಿಗಾಗಿ ಮದ್ಯ ನಿಷೇಧದ ಬಗ್ಗೆ ಮಾತಾಡುತ್ತದೆ. ಆದರೆ ಅನದ್ನು ಅನುಷ್ಠಾನ ಮಾಡುತ್ತಿಲ್ಲ ಏಕೆ ಎಂದು ಆಂದೋಲನದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಮದ್ಯ ನಿಷೇಷ ಆಂದೋಲನ ವೇದಿಕೆಯು ಉತ್ತರ  ಕರ್ನಾಟಕದಲ್ಲಿ ಪ್ರಬಲವಾಗಿದೆ. ಅಲ್ಲೆಲ್ಲಾ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿಯೂ ಮೂರು ಪಕ್ಷದ ಮುಖಂಡರಿಗೆ ಮದ್ಯ ನಿಷೇಧಿಸುವಂತೆ ಪತ್ರ ಚಳವಳಿ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪಕ್ಷವೂ ಮದ್ಯ ನಿಷೇಧಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲದ ಕಾರಣಕ್ಕಾಗಿ ಪ್ರತಿ ಊರಿಗೂ ಹೋಗಿ ನೋಟಾ ಮತ ಚಲಾವಣೆ ಮಾಡುವಂತೆ ಜನರಿಗೆ ಕರೆ ನೀಡುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಮ್ಮ ವೇದಿಕೆಯ ಪ್ರಭಾವ ಕಡಿಮೆ ಇರುವುದರಿಂದ ರಾಯಚೂರು, ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಬಂದು ಸ್ವಯಂ ಪ್ರೇರಿತರಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಮದ್ಯ ಸೇವನೆಯಿಂದಾಗಿ ದಿನ ನಿತ್ಯ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.  ಇದರಿಂದ ಎಷ್ಟೋ ಮಕ್ಕಳು ತಬ್ಬಲಿಗಳಾದರೆ ಮಹಿಳೆಯರು ವಿಧವೆಯರಾಗುವ ಪರಿಸ್ಥಿತಿ ಬಂದಿದೆ. ಕಷ್ಟ ಪಟ್ಟು ದುಡಿದರೂ ಹಣವೆಲ್ಲಾ ಮದ್ಯಕ್ಕೆ ಹೋಗುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಎಲ್ಲಾ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧವಾಗಬೇಕೆಂದು ಪ್ರಚಾರಾಂದೋಲನ ತಂಡದಲ್ಲಿರುವ ಮದ್ಯ ನಿಷೇಧ ಆಂದೋಲನದ ಮೋಕ್ಷಮ್ಮ, ರಜಿಯ ಬೇಗಂ, ಅಕ್ಕಮ್ಮ, ಹುಲಿಗೇಮ್ಮ, ಅಮರೇಶ, ಬಸವರಾಜ ಮುಂತಾದವರು ಅಭಿಪ್ರಾಯಪಡುತ್ತಾರೆ.

2016 ಆಕ್ಟೋಬರ್ 02 ರ ಗಾಂಧೀಜಿ ಜನ್ಮದಿನದಂದು ಅವರ ಆಶಯದಂತೆ ಮದ್ಯ ನಿಷೇಧ ಆಗಲೇಬೇಕು ಎಂದು ಸುಮಾರು 40 ಸಾವಿರ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ಶುರು ಮಾಡಿದರು. ನಂತರ ಅದೇ ವರ್ಷ ಜನವರಿ 30 (ಗಾಂಧೀಜಿ ನಿಧನವಾದ ದಿನ) ರಂದು “ನಮ್ಮ ಗಾಂಧಿ, ನಮಗೆ ಕೊಡಿ” ಎಂದು 16 ಜಿಲ್ಲೆಗಳಲ್ಲಿ  ಈ ಹೋರಾಟವನ್ನು ಮಾಡಲಾಯಿತು. ಅದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ  ಸುಮಾರು 71 ದಿನಗಳ ಕಾಲ ರಾಯಚೂರು ನಗರದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಹೀಗೆ ನಿರಂತರ ಶಾಂತಿಯುತವಾಗಿ ಹೋರಾಟಗಳು ನಡೆಯುತ್ತಾ ಬಂದರೂ ಸಹ ಯಾವ ರಾಜಕೀಯ ಪಕ್ಷಗಳು ಮಹಿಳೆಯರ ಸಮಸ್ಯೆಗಳಿಗೆ  ಸ್ಪಂದಿಸಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು 2019ರ ಜನವರಿ 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆಯ ದಾರಿಯ ಮಧ್ಯದಲ್ಲಿ ರೇಣುಕಮ್ಮ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು ಸಹ ಯಾವ ಪಕ್ಷದ ಮುಖಂಡರೂ ಬಂದು ಮಹಿಳೆಯರನ್ನು ಭೇಟಿ ಮಾಡದೇ ನಮ್ಮನ್ನು ಹಾಗೂ ನಮ್ಮ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನೋಟಾ ಚಲಾಯಿಸುವ ಮೂಲಕ ಮಹಿಳೆಯರ ಶಕ್ತಿ  ಏನೆಂದು ಆಳುವವರಿಗೆ ತಿಳಿಸಲು ಮುಂದಾಗಿದ್ದೇವೆ ಅನ್ನುತ್ತಾರೆ ಹೋರಾಟಗಾರ್ತಿ ವಿರುಪಮ್ಮನವರು.

ಬೆಂಗಳೂರಿನ ತಂಡವು ಈಗಾಗಲೇ ಶ್ರೀ ರಾಂಪುರ ಮತ್ತು ಶೇಷಾದ್ರಿಪುರಂ ಸ್ಲಂಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನೊಂದು ತಂಡವು ಮಂಡ್ಯದ ಹಲವು ಸ್ಲಂಗಳಲ್ಲಿ ಪ್ರಚಾರ ಮುಗಿಸಿದ್ದಾರೆ. ಪ್ರಚಾರದ ವೇಳೆ ಅಲ್ಲಿನ ಮಹಿಳೆಯರು ಸಹ ತಮ್ಮ ಜೀವನದ ನೋವಿನ ಕಥೆಗಳನ್ನು ಹೇಳುತ್ತಿದ್ದಾರೆ, ಖಂಡಿತ ನೋಟಾಗೆ ಓಟು ಹಾಕುತ್ತೇವೆ ಎಂದು ಬೆಂಬಲ ವ್ಯಕ್ತಿವಾಗಿದೆ ಎನ್ನುತ್ತಾರೆ ವಿರುಪಮ್ಮ.

ಚುನಾವಣೆಯ ದಿವಸ ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಬಹಳಷ್ಟು ಸಂಖ್ಯೆಗಳಲ್ಲಿ ಜನ ಒಂದೆಡೆ ಸೇರಿಕೊಂಡು ಶಾಂತಿಯುತವಾದ ಸತ್ಯಾಗ್ರಹ (ಬಹಿರಂಗ ನೋಟಾ) ಮಾಡಿ ನಿಮ್ಮ ಸಿಟ್ಟನ್ನು ರಾಜಕೀಯ ಪಕ್ಷಿಗಳಿಗೆ ತೋರಿಸಬೇಕು. ಮದ್ಯ ನಿಷೇಧದ ಪರವಾಗಿರುವ ಜನರು ಮುಂದಿನ ತಿಂಗಳು ರಾಜಕೀಯ ಪಕ್ಷಗಳ ಮುಖಂಡರಿಗೆ/ಅಧ್ಯಕ್ಷರಿಗೆ ಲಕ್ಷಾಂತರ ಪತ್ರಗಳನ್ನು ಬರೆಯಿರಿ. ಪತ್ರದಲ್ಲಿ ಸಹೋದರರೇ ಅಥವಾ ಮುಖಂಡರೇ ನೀವು ನಿಮ್ಮ ಸರ್ಕಾರಕ್ಕೆ ಬರುವ ಆದಾಯದ ಚಿಂತೆ ಮಾಡದೇ ಸಮಾಜದ ಆರೋಗ್ಯದ ಚಿಂತೆ ಮಾಡಿ ಹಾಗೂ ಮಹಿಳೆಯರ ಗೌರವಕ್ಕೆ ಆದ್ಯತೆ ನೀಡಿ. ಇದು ಮಹಿಳೆಯರ ಬದುಕಿನ ಪ್ರಶ್ನೆ ಎಂದು ಮನದಟ್ಟು ಮಾಡಿರಿ ಎಂದು ಜನರಲ್ಲಿ ಮನವಿ ಮಾಡುತ್ತಿರುವುದು ಕಂಡುಬರುತ್ತಿದೆ. ಫಲಿತಾಂಶದ ದಿನ ಇದರ ಪ್ರಭಾವ ರಾಜಕೀಯ ಪಕ್ಷಗಳಿಗೆ ಅರ್ಥವಾಗಬಹುದು ಕಾದು ನೋಡೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...