Homeಕರ್ನಾಟಕಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

ಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

- Advertisement -
- Advertisement -

| ಗುರುಬಸವ ಬರಗೂರು |

ನೋಟಾ ಮತ ಚಲಾವಣೆ ಜಾರಿಯಾದ ನಂತರ ವಿವಿಧ ಉದ್ದೇಶಗಳಿಗಾಗಿ ನೋಟಾ ಮತ ಚಲಾಯಿಸುವಂತೆ ಬಹಳಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪ್ರಚಾರ ಮಾಡಿದ್ದು ನಮಗೆ ನೆನಪಿದೆ. ಬಹುತೇಕ ವಿದ್ಯಾವಂತರು ಮಾತ್ರ ನೋಟ ಕುರಿತು ಯೋಚಿಸುತ್ತಿದ್ದರು. ಅಭ್ಯರ್ಥಿಗಳು ಭ್ರಷ್ಟಾಚಾರಿಗಳಾಗಿದ್ದು, ಇವರು ಯಾರು ನಮ್ಮ ಆಯ್ಕೆಯಲ್ಲ ಎಂದು ಹೇಳಿದ್ದಿದೆ. ಆದರೆ ನಮ್ಮ ಭವಿಷ್ಯಕ್ಕಾಗಿ ಮದ್ಯವನ್ನು ನಿಷೇಧಿಸಿ, ಕುಟುಂಬಗಳನ್ನು ರಕ್ಷಿಸಿ ಎಂಬ ಆಶಯಕ್ಕಾಗಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ರಾಜ್ಯದ ಹಲವು ಜಿಲ್ಲೆಗಳಲ್ಲಿ ನೋಟಾ ಮತ ಚಲಾಯಿಸಿ ಎಂದು ಬಹಿರಂಗ ಪ್ರಚಾರಾಂದೋಲನಕ್ಕೆ ಇಳಿದಿದ್ದಾರೆ.

ಪ್ರಜಾಪ್ರಭುತ್ವವೆಂದರೆ ಕೇವಲ ಮತ ಚಲಾಯಿಸುವುದಲ್ಲ, ಪ್ರಜಾಪ್ರಭುತ್ವದಲ್ಲಿ  ಜನರಿಗೆ ಪ್ರತಿಭಟಿಸುವ ಹಕ್ಕು ಸಹ ಇದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನ ನಾವು ಸಂವಿಧಾನದ ಆಶಯಗಳಿಗೆ ಬದ್ಧರಾಗಿರುತ್ತೇವೆ ಮತ್ತು ಸಂವಿಧಾನವನ್ನು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಅದೇ ಸಂವಿಧಾನದ 47ನೇ ಪರಿಚ್ಛೇದ ಸಾಮಾಜಿಕ ಒಳಿತಿಗಾಗಿ ಮದ್ಯ ನಿಷೇಧದ ಬಗ್ಗೆ ಮಾತಾಡುತ್ತದೆ. ಆದರೆ ಅನದ್ನು ಅನುಷ್ಠಾನ ಮಾಡುತ್ತಿಲ್ಲ ಏಕೆ ಎಂದು ಆಂದೋಲನದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಮದ್ಯ ನಿಷೇಷ ಆಂದೋಲನ ವೇದಿಕೆಯು ಉತ್ತರ  ಕರ್ನಾಟಕದಲ್ಲಿ ಪ್ರಬಲವಾಗಿದೆ. ಅಲ್ಲೆಲ್ಲಾ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿಯೂ ಮೂರು ಪಕ್ಷದ ಮುಖಂಡರಿಗೆ ಮದ್ಯ ನಿಷೇಧಿಸುವಂತೆ ಪತ್ರ ಚಳವಳಿ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪಕ್ಷವೂ ಮದ್ಯ ನಿಷೇಧಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲದ ಕಾರಣಕ್ಕಾಗಿ ಪ್ರತಿ ಊರಿಗೂ ಹೋಗಿ ನೋಟಾ ಮತ ಚಲಾವಣೆ ಮಾಡುವಂತೆ ಜನರಿಗೆ ಕರೆ ನೀಡುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಮ್ಮ ವೇದಿಕೆಯ ಪ್ರಭಾವ ಕಡಿಮೆ ಇರುವುದರಿಂದ ರಾಯಚೂರು, ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಬಂದು ಸ್ವಯಂ ಪ್ರೇರಿತರಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಮದ್ಯ ಸೇವನೆಯಿಂದಾಗಿ ದಿನ ನಿತ್ಯ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.  ಇದರಿಂದ ಎಷ್ಟೋ ಮಕ್ಕಳು ತಬ್ಬಲಿಗಳಾದರೆ ಮಹಿಳೆಯರು ವಿಧವೆಯರಾಗುವ ಪರಿಸ್ಥಿತಿ ಬಂದಿದೆ. ಕಷ್ಟ ಪಟ್ಟು ದುಡಿದರೂ ಹಣವೆಲ್ಲಾ ಮದ್ಯಕ್ಕೆ ಹೋಗುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಎಲ್ಲಾ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧವಾಗಬೇಕೆಂದು ಪ್ರಚಾರಾಂದೋಲನ ತಂಡದಲ್ಲಿರುವ ಮದ್ಯ ನಿಷೇಧ ಆಂದೋಲನದ ಮೋಕ್ಷಮ್ಮ, ರಜಿಯ ಬೇಗಂ, ಅಕ್ಕಮ್ಮ, ಹುಲಿಗೇಮ್ಮ, ಅಮರೇಶ, ಬಸವರಾಜ ಮುಂತಾದವರು ಅಭಿಪ್ರಾಯಪಡುತ್ತಾರೆ.

2016 ಆಕ್ಟೋಬರ್ 02 ರ ಗಾಂಧೀಜಿ ಜನ್ಮದಿನದಂದು ಅವರ ಆಶಯದಂತೆ ಮದ್ಯ ನಿಷೇಧ ಆಗಲೇಬೇಕು ಎಂದು ಸುಮಾರು 40 ಸಾವಿರ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ಶುರು ಮಾಡಿದರು. ನಂತರ ಅದೇ ವರ್ಷ ಜನವರಿ 30 (ಗಾಂಧೀಜಿ ನಿಧನವಾದ ದಿನ) ರಂದು “ನಮ್ಮ ಗಾಂಧಿ, ನಮಗೆ ಕೊಡಿ” ಎಂದು 16 ಜಿಲ್ಲೆಗಳಲ್ಲಿ  ಈ ಹೋರಾಟವನ್ನು ಮಾಡಲಾಯಿತು. ಅದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ  ಸುಮಾರು 71 ದಿನಗಳ ಕಾಲ ರಾಯಚೂರು ನಗರದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಹೀಗೆ ನಿರಂತರ ಶಾಂತಿಯುತವಾಗಿ ಹೋರಾಟಗಳು ನಡೆಯುತ್ತಾ ಬಂದರೂ ಸಹ ಯಾವ ರಾಜಕೀಯ ಪಕ್ಷಗಳು ಮಹಿಳೆಯರ ಸಮಸ್ಯೆಗಳಿಗೆ  ಸ್ಪಂದಿಸಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು 2019ರ ಜನವರಿ 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆಯ ದಾರಿಯ ಮಧ್ಯದಲ್ಲಿ ರೇಣುಕಮ್ಮ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು ಸಹ ಯಾವ ಪಕ್ಷದ ಮುಖಂಡರೂ ಬಂದು ಮಹಿಳೆಯರನ್ನು ಭೇಟಿ ಮಾಡದೇ ನಮ್ಮನ್ನು ಹಾಗೂ ನಮ್ಮ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನೋಟಾ ಚಲಾಯಿಸುವ ಮೂಲಕ ಮಹಿಳೆಯರ ಶಕ್ತಿ  ಏನೆಂದು ಆಳುವವರಿಗೆ ತಿಳಿಸಲು ಮುಂದಾಗಿದ್ದೇವೆ ಅನ್ನುತ್ತಾರೆ ಹೋರಾಟಗಾರ್ತಿ ವಿರುಪಮ್ಮನವರು.

ಬೆಂಗಳೂರಿನ ತಂಡವು ಈಗಾಗಲೇ ಶ್ರೀ ರಾಂಪುರ ಮತ್ತು ಶೇಷಾದ್ರಿಪುರಂ ಸ್ಲಂಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನೊಂದು ತಂಡವು ಮಂಡ್ಯದ ಹಲವು ಸ್ಲಂಗಳಲ್ಲಿ ಪ್ರಚಾರ ಮುಗಿಸಿದ್ದಾರೆ. ಪ್ರಚಾರದ ವೇಳೆ ಅಲ್ಲಿನ ಮಹಿಳೆಯರು ಸಹ ತಮ್ಮ ಜೀವನದ ನೋವಿನ ಕಥೆಗಳನ್ನು ಹೇಳುತ್ತಿದ್ದಾರೆ, ಖಂಡಿತ ನೋಟಾಗೆ ಓಟು ಹಾಕುತ್ತೇವೆ ಎಂದು ಬೆಂಬಲ ವ್ಯಕ್ತಿವಾಗಿದೆ ಎನ್ನುತ್ತಾರೆ ವಿರುಪಮ್ಮ.

ಚುನಾವಣೆಯ ದಿವಸ ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಬಹಳಷ್ಟು ಸಂಖ್ಯೆಗಳಲ್ಲಿ ಜನ ಒಂದೆಡೆ ಸೇರಿಕೊಂಡು ಶಾಂತಿಯುತವಾದ ಸತ್ಯಾಗ್ರಹ (ಬಹಿರಂಗ ನೋಟಾ) ಮಾಡಿ ನಿಮ್ಮ ಸಿಟ್ಟನ್ನು ರಾಜಕೀಯ ಪಕ್ಷಿಗಳಿಗೆ ತೋರಿಸಬೇಕು. ಮದ್ಯ ನಿಷೇಧದ ಪರವಾಗಿರುವ ಜನರು ಮುಂದಿನ ತಿಂಗಳು ರಾಜಕೀಯ ಪಕ್ಷಗಳ ಮುಖಂಡರಿಗೆ/ಅಧ್ಯಕ್ಷರಿಗೆ ಲಕ್ಷಾಂತರ ಪತ್ರಗಳನ್ನು ಬರೆಯಿರಿ. ಪತ್ರದಲ್ಲಿ ಸಹೋದರರೇ ಅಥವಾ ಮುಖಂಡರೇ ನೀವು ನಿಮ್ಮ ಸರ್ಕಾರಕ್ಕೆ ಬರುವ ಆದಾಯದ ಚಿಂತೆ ಮಾಡದೇ ಸಮಾಜದ ಆರೋಗ್ಯದ ಚಿಂತೆ ಮಾಡಿ ಹಾಗೂ ಮಹಿಳೆಯರ ಗೌರವಕ್ಕೆ ಆದ್ಯತೆ ನೀಡಿ. ಇದು ಮಹಿಳೆಯರ ಬದುಕಿನ ಪ್ರಶ್ನೆ ಎಂದು ಮನದಟ್ಟು ಮಾಡಿರಿ ಎಂದು ಜನರಲ್ಲಿ ಮನವಿ ಮಾಡುತ್ತಿರುವುದು ಕಂಡುಬರುತ್ತಿದೆ. ಫಲಿತಾಂಶದ ದಿನ ಇದರ ಪ್ರಭಾವ ರಾಜಕೀಯ ಪಕ್ಷಗಳಿಗೆ ಅರ್ಥವಾಗಬಹುದು ಕಾದು ನೋಡೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...