Homeಕರ್ನಾಟಕಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

ಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

- Advertisement -
- Advertisement -

| ಗುರುಬಸವ ಬರಗೂರು |

ನೋಟಾ ಮತ ಚಲಾವಣೆ ಜಾರಿಯಾದ ನಂತರ ವಿವಿಧ ಉದ್ದೇಶಗಳಿಗಾಗಿ ನೋಟಾ ಮತ ಚಲಾಯಿಸುವಂತೆ ಬಹಳಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪ್ರಚಾರ ಮಾಡಿದ್ದು ನಮಗೆ ನೆನಪಿದೆ. ಬಹುತೇಕ ವಿದ್ಯಾವಂತರು ಮಾತ್ರ ನೋಟ ಕುರಿತು ಯೋಚಿಸುತ್ತಿದ್ದರು. ಅಭ್ಯರ್ಥಿಗಳು ಭ್ರಷ್ಟಾಚಾರಿಗಳಾಗಿದ್ದು, ಇವರು ಯಾರು ನಮ್ಮ ಆಯ್ಕೆಯಲ್ಲ ಎಂದು ಹೇಳಿದ್ದಿದೆ. ಆದರೆ ನಮ್ಮ ಭವಿಷ್ಯಕ್ಕಾಗಿ ಮದ್ಯವನ್ನು ನಿಷೇಧಿಸಿ, ಕುಟುಂಬಗಳನ್ನು ರಕ್ಷಿಸಿ ಎಂಬ ಆಶಯಕ್ಕಾಗಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ರಾಜ್ಯದ ಹಲವು ಜಿಲ್ಲೆಗಳಲ್ಲಿ ನೋಟಾ ಮತ ಚಲಾಯಿಸಿ ಎಂದು ಬಹಿರಂಗ ಪ್ರಚಾರಾಂದೋಲನಕ್ಕೆ ಇಳಿದಿದ್ದಾರೆ.

ಪ್ರಜಾಪ್ರಭುತ್ವವೆಂದರೆ ಕೇವಲ ಮತ ಚಲಾಯಿಸುವುದಲ್ಲ, ಪ್ರಜಾಪ್ರಭುತ್ವದಲ್ಲಿ  ಜನರಿಗೆ ಪ್ರತಿಭಟಿಸುವ ಹಕ್ಕು ಸಹ ಇದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನ ನಾವು ಸಂವಿಧಾನದ ಆಶಯಗಳಿಗೆ ಬದ್ಧರಾಗಿರುತ್ತೇವೆ ಮತ್ತು ಸಂವಿಧಾನವನ್ನು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಅದೇ ಸಂವಿಧಾನದ 47ನೇ ಪರಿಚ್ಛೇದ ಸಾಮಾಜಿಕ ಒಳಿತಿಗಾಗಿ ಮದ್ಯ ನಿಷೇಧದ ಬಗ್ಗೆ ಮಾತಾಡುತ್ತದೆ. ಆದರೆ ಅನದ್ನು ಅನುಷ್ಠಾನ ಮಾಡುತ್ತಿಲ್ಲ ಏಕೆ ಎಂದು ಆಂದೋಲನದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಮದ್ಯ ನಿಷೇಷ ಆಂದೋಲನ ವೇದಿಕೆಯು ಉತ್ತರ  ಕರ್ನಾಟಕದಲ್ಲಿ ಪ್ರಬಲವಾಗಿದೆ. ಅಲ್ಲೆಲ್ಲಾ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿಯೂ ಮೂರು ಪಕ್ಷದ ಮುಖಂಡರಿಗೆ ಮದ್ಯ ನಿಷೇಧಿಸುವಂತೆ ಪತ್ರ ಚಳವಳಿ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪಕ್ಷವೂ ಮದ್ಯ ನಿಷೇಧಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲದ ಕಾರಣಕ್ಕಾಗಿ ಪ್ರತಿ ಊರಿಗೂ ಹೋಗಿ ನೋಟಾ ಮತ ಚಲಾವಣೆ ಮಾಡುವಂತೆ ಜನರಿಗೆ ಕರೆ ನೀಡುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಮ್ಮ ವೇದಿಕೆಯ ಪ್ರಭಾವ ಕಡಿಮೆ ಇರುವುದರಿಂದ ರಾಯಚೂರು, ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಬಂದು ಸ್ವಯಂ ಪ್ರೇರಿತರಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಮದ್ಯ ಸೇವನೆಯಿಂದಾಗಿ ದಿನ ನಿತ್ಯ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.  ಇದರಿಂದ ಎಷ್ಟೋ ಮಕ್ಕಳು ತಬ್ಬಲಿಗಳಾದರೆ ಮಹಿಳೆಯರು ವಿಧವೆಯರಾಗುವ ಪರಿಸ್ಥಿತಿ ಬಂದಿದೆ. ಕಷ್ಟ ಪಟ್ಟು ದುಡಿದರೂ ಹಣವೆಲ್ಲಾ ಮದ್ಯಕ್ಕೆ ಹೋಗುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಎಲ್ಲಾ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧವಾಗಬೇಕೆಂದು ಪ್ರಚಾರಾಂದೋಲನ ತಂಡದಲ್ಲಿರುವ ಮದ್ಯ ನಿಷೇಧ ಆಂದೋಲನದ ಮೋಕ್ಷಮ್ಮ, ರಜಿಯ ಬೇಗಂ, ಅಕ್ಕಮ್ಮ, ಹುಲಿಗೇಮ್ಮ, ಅಮರೇಶ, ಬಸವರಾಜ ಮುಂತಾದವರು ಅಭಿಪ್ರಾಯಪಡುತ್ತಾರೆ.

2016 ಆಕ್ಟೋಬರ್ 02 ರ ಗಾಂಧೀಜಿ ಜನ್ಮದಿನದಂದು ಅವರ ಆಶಯದಂತೆ ಮದ್ಯ ನಿಷೇಧ ಆಗಲೇಬೇಕು ಎಂದು ಸುಮಾರು 40 ಸಾವಿರ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ಶುರು ಮಾಡಿದರು. ನಂತರ ಅದೇ ವರ್ಷ ಜನವರಿ 30 (ಗಾಂಧೀಜಿ ನಿಧನವಾದ ದಿನ) ರಂದು “ನಮ್ಮ ಗಾಂಧಿ, ನಮಗೆ ಕೊಡಿ” ಎಂದು 16 ಜಿಲ್ಲೆಗಳಲ್ಲಿ  ಈ ಹೋರಾಟವನ್ನು ಮಾಡಲಾಯಿತು. ಅದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ  ಸುಮಾರು 71 ದಿನಗಳ ಕಾಲ ರಾಯಚೂರು ನಗರದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಹೀಗೆ ನಿರಂತರ ಶಾಂತಿಯುತವಾಗಿ ಹೋರಾಟಗಳು ನಡೆಯುತ್ತಾ ಬಂದರೂ ಸಹ ಯಾವ ರಾಜಕೀಯ ಪಕ್ಷಗಳು ಮಹಿಳೆಯರ ಸಮಸ್ಯೆಗಳಿಗೆ  ಸ್ಪಂದಿಸಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು 2019ರ ಜನವರಿ 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆಯ ದಾರಿಯ ಮಧ್ಯದಲ್ಲಿ ರೇಣುಕಮ್ಮ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು ಸಹ ಯಾವ ಪಕ್ಷದ ಮುಖಂಡರೂ ಬಂದು ಮಹಿಳೆಯರನ್ನು ಭೇಟಿ ಮಾಡದೇ ನಮ್ಮನ್ನು ಹಾಗೂ ನಮ್ಮ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನೋಟಾ ಚಲಾಯಿಸುವ ಮೂಲಕ ಮಹಿಳೆಯರ ಶಕ್ತಿ  ಏನೆಂದು ಆಳುವವರಿಗೆ ತಿಳಿಸಲು ಮುಂದಾಗಿದ್ದೇವೆ ಅನ್ನುತ್ತಾರೆ ಹೋರಾಟಗಾರ್ತಿ ವಿರುಪಮ್ಮನವರು.

ಬೆಂಗಳೂರಿನ ತಂಡವು ಈಗಾಗಲೇ ಶ್ರೀ ರಾಂಪುರ ಮತ್ತು ಶೇಷಾದ್ರಿಪುರಂ ಸ್ಲಂಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನೊಂದು ತಂಡವು ಮಂಡ್ಯದ ಹಲವು ಸ್ಲಂಗಳಲ್ಲಿ ಪ್ರಚಾರ ಮುಗಿಸಿದ್ದಾರೆ. ಪ್ರಚಾರದ ವೇಳೆ ಅಲ್ಲಿನ ಮಹಿಳೆಯರು ಸಹ ತಮ್ಮ ಜೀವನದ ನೋವಿನ ಕಥೆಗಳನ್ನು ಹೇಳುತ್ತಿದ್ದಾರೆ, ಖಂಡಿತ ನೋಟಾಗೆ ಓಟು ಹಾಕುತ್ತೇವೆ ಎಂದು ಬೆಂಬಲ ವ್ಯಕ್ತಿವಾಗಿದೆ ಎನ್ನುತ್ತಾರೆ ವಿರುಪಮ್ಮ.

ಚುನಾವಣೆಯ ದಿವಸ ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಬಹಳಷ್ಟು ಸಂಖ್ಯೆಗಳಲ್ಲಿ ಜನ ಒಂದೆಡೆ ಸೇರಿಕೊಂಡು ಶಾಂತಿಯುತವಾದ ಸತ್ಯಾಗ್ರಹ (ಬಹಿರಂಗ ನೋಟಾ) ಮಾಡಿ ನಿಮ್ಮ ಸಿಟ್ಟನ್ನು ರಾಜಕೀಯ ಪಕ್ಷಿಗಳಿಗೆ ತೋರಿಸಬೇಕು. ಮದ್ಯ ನಿಷೇಧದ ಪರವಾಗಿರುವ ಜನರು ಮುಂದಿನ ತಿಂಗಳು ರಾಜಕೀಯ ಪಕ್ಷಗಳ ಮುಖಂಡರಿಗೆ/ಅಧ್ಯಕ್ಷರಿಗೆ ಲಕ್ಷಾಂತರ ಪತ್ರಗಳನ್ನು ಬರೆಯಿರಿ. ಪತ್ರದಲ್ಲಿ ಸಹೋದರರೇ ಅಥವಾ ಮುಖಂಡರೇ ನೀವು ನಿಮ್ಮ ಸರ್ಕಾರಕ್ಕೆ ಬರುವ ಆದಾಯದ ಚಿಂತೆ ಮಾಡದೇ ಸಮಾಜದ ಆರೋಗ್ಯದ ಚಿಂತೆ ಮಾಡಿ ಹಾಗೂ ಮಹಿಳೆಯರ ಗೌರವಕ್ಕೆ ಆದ್ಯತೆ ನೀಡಿ. ಇದು ಮಹಿಳೆಯರ ಬದುಕಿನ ಪ್ರಶ್ನೆ ಎಂದು ಮನದಟ್ಟು ಮಾಡಿರಿ ಎಂದು ಜನರಲ್ಲಿ ಮನವಿ ಮಾಡುತ್ತಿರುವುದು ಕಂಡುಬರುತ್ತಿದೆ. ಫಲಿತಾಂಶದ ದಿನ ಇದರ ಪ್ರಭಾವ ರಾಜಕೀಯ ಪಕ್ಷಗಳಿಗೆ ಅರ್ಥವಾಗಬಹುದು ಕಾದು ನೋಡೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...