Homeಕರ್ನಾಟಕಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

ಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

- Advertisement -
- Advertisement -

| ಗುರುಬಸವ ಬರಗೂರು |

ನೋಟಾ ಮತ ಚಲಾವಣೆ ಜಾರಿಯಾದ ನಂತರ ವಿವಿಧ ಉದ್ದೇಶಗಳಿಗಾಗಿ ನೋಟಾ ಮತ ಚಲಾಯಿಸುವಂತೆ ಬಹಳಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪ್ರಚಾರ ಮಾಡಿದ್ದು ನಮಗೆ ನೆನಪಿದೆ. ಬಹುತೇಕ ವಿದ್ಯಾವಂತರು ಮಾತ್ರ ನೋಟ ಕುರಿತು ಯೋಚಿಸುತ್ತಿದ್ದರು. ಅಭ್ಯರ್ಥಿಗಳು ಭ್ರಷ್ಟಾಚಾರಿಗಳಾಗಿದ್ದು, ಇವರು ಯಾರು ನಮ್ಮ ಆಯ್ಕೆಯಲ್ಲ ಎಂದು ಹೇಳಿದ್ದಿದೆ. ಆದರೆ ನಮ್ಮ ಭವಿಷ್ಯಕ್ಕಾಗಿ ಮದ್ಯವನ್ನು ನಿಷೇಧಿಸಿ, ಕುಟುಂಬಗಳನ್ನು ರಕ್ಷಿಸಿ ಎಂಬ ಆಶಯಕ್ಕಾಗಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ರಾಜ್ಯದ ಹಲವು ಜಿಲ್ಲೆಗಳಲ್ಲಿ ನೋಟಾ ಮತ ಚಲಾಯಿಸಿ ಎಂದು ಬಹಿರಂಗ ಪ್ರಚಾರಾಂದೋಲನಕ್ಕೆ ಇಳಿದಿದ್ದಾರೆ.

ಪ್ರಜಾಪ್ರಭುತ್ವವೆಂದರೆ ಕೇವಲ ಮತ ಚಲಾಯಿಸುವುದಲ್ಲ, ಪ್ರಜಾಪ್ರಭುತ್ವದಲ್ಲಿ  ಜನರಿಗೆ ಪ್ರತಿಭಟಿಸುವ ಹಕ್ಕು ಸಹ ಇದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನ ನಾವು ಸಂವಿಧಾನದ ಆಶಯಗಳಿಗೆ ಬದ್ಧರಾಗಿರುತ್ತೇವೆ ಮತ್ತು ಸಂವಿಧಾನವನ್ನು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಅದೇ ಸಂವಿಧಾನದ 47ನೇ ಪರಿಚ್ಛೇದ ಸಾಮಾಜಿಕ ಒಳಿತಿಗಾಗಿ ಮದ್ಯ ನಿಷೇಧದ ಬಗ್ಗೆ ಮಾತಾಡುತ್ತದೆ. ಆದರೆ ಅನದ್ನು ಅನುಷ್ಠಾನ ಮಾಡುತ್ತಿಲ್ಲ ಏಕೆ ಎಂದು ಆಂದೋಲನದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಮದ್ಯ ನಿಷೇಷ ಆಂದೋಲನ ವೇದಿಕೆಯು ಉತ್ತರ  ಕರ್ನಾಟಕದಲ್ಲಿ ಪ್ರಬಲವಾಗಿದೆ. ಅಲ್ಲೆಲ್ಲಾ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿಯೂ ಮೂರು ಪಕ್ಷದ ಮುಖಂಡರಿಗೆ ಮದ್ಯ ನಿಷೇಧಿಸುವಂತೆ ಪತ್ರ ಚಳವಳಿ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪಕ್ಷವೂ ಮದ್ಯ ನಿಷೇಧಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲದ ಕಾರಣಕ್ಕಾಗಿ ಪ್ರತಿ ಊರಿಗೂ ಹೋಗಿ ನೋಟಾ ಮತ ಚಲಾವಣೆ ಮಾಡುವಂತೆ ಜನರಿಗೆ ಕರೆ ನೀಡುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಮ್ಮ ವೇದಿಕೆಯ ಪ್ರಭಾವ ಕಡಿಮೆ ಇರುವುದರಿಂದ ರಾಯಚೂರು, ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಬಂದು ಸ್ವಯಂ ಪ್ರೇರಿತರಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಮದ್ಯ ಸೇವನೆಯಿಂದಾಗಿ ದಿನ ನಿತ್ಯ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.  ಇದರಿಂದ ಎಷ್ಟೋ ಮಕ್ಕಳು ತಬ್ಬಲಿಗಳಾದರೆ ಮಹಿಳೆಯರು ವಿಧವೆಯರಾಗುವ ಪರಿಸ್ಥಿತಿ ಬಂದಿದೆ. ಕಷ್ಟ ಪಟ್ಟು ದುಡಿದರೂ ಹಣವೆಲ್ಲಾ ಮದ್ಯಕ್ಕೆ ಹೋಗುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಎಲ್ಲಾ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧವಾಗಬೇಕೆಂದು ಪ್ರಚಾರಾಂದೋಲನ ತಂಡದಲ್ಲಿರುವ ಮದ್ಯ ನಿಷೇಧ ಆಂದೋಲನದ ಮೋಕ್ಷಮ್ಮ, ರಜಿಯ ಬೇಗಂ, ಅಕ್ಕಮ್ಮ, ಹುಲಿಗೇಮ್ಮ, ಅಮರೇಶ, ಬಸವರಾಜ ಮುಂತಾದವರು ಅಭಿಪ್ರಾಯಪಡುತ್ತಾರೆ.

2016 ಆಕ್ಟೋಬರ್ 02 ರ ಗಾಂಧೀಜಿ ಜನ್ಮದಿನದಂದು ಅವರ ಆಶಯದಂತೆ ಮದ್ಯ ನಿಷೇಧ ಆಗಲೇಬೇಕು ಎಂದು ಸುಮಾರು 40 ಸಾವಿರ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ಶುರು ಮಾಡಿದರು. ನಂತರ ಅದೇ ವರ್ಷ ಜನವರಿ 30 (ಗಾಂಧೀಜಿ ನಿಧನವಾದ ದಿನ) ರಂದು “ನಮ್ಮ ಗಾಂಧಿ, ನಮಗೆ ಕೊಡಿ” ಎಂದು 16 ಜಿಲ್ಲೆಗಳಲ್ಲಿ  ಈ ಹೋರಾಟವನ್ನು ಮಾಡಲಾಯಿತು. ಅದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ  ಸುಮಾರು 71 ದಿನಗಳ ಕಾಲ ರಾಯಚೂರು ನಗರದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಹೀಗೆ ನಿರಂತರ ಶಾಂತಿಯುತವಾಗಿ ಹೋರಾಟಗಳು ನಡೆಯುತ್ತಾ ಬಂದರೂ ಸಹ ಯಾವ ರಾಜಕೀಯ ಪಕ್ಷಗಳು ಮಹಿಳೆಯರ ಸಮಸ್ಯೆಗಳಿಗೆ  ಸ್ಪಂದಿಸಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು 2019ರ ಜನವರಿ 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆಯ ದಾರಿಯ ಮಧ್ಯದಲ್ಲಿ ರೇಣುಕಮ್ಮ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು ಸಹ ಯಾವ ಪಕ್ಷದ ಮುಖಂಡರೂ ಬಂದು ಮಹಿಳೆಯರನ್ನು ಭೇಟಿ ಮಾಡದೇ ನಮ್ಮನ್ನು ಹಾಗೂ ನಮ್ಮ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನೋಟಾ ಚಲಾಯಿಸುವ ಮೂಲಕ ಮಹಿಳೆಯರ ಶಕ್ತಿ  ಏನೆಂದು ಆಳುವವರಿಗೆ ತಿಳಿಸಲು ಮುಂದಾಗಿದ್ದೇವೆ ಅನ್ನುತ್ತಾರೆ ಹೋರಾಟಗಾರ್ತಿ ವಿರುಪಮ್ಮನವರು.

ಬೆಂಗಳೂರಿನ ತಂಡವು ಈಗಾಗಲೇ ಶ್ರೀ ರಾಂಪುರ ಮತ್ತು ಶೇಷಾದ್ರಿಪುರಂ ಸ್ಲಂಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನೊಂದು ತಂಡವು ಮಂಡ್ಯದ ಹಲವು ಸ್ಲಂಗಳಲ್ಲಿ ಪ್ರಚಾರ ಮುಗಿಸಿದ್ದಾರೆ. ಪ್ರಚಾರದ ವೇಳೆ ಅಲ್ಲಿನ ಮಹಿಳೆಯರು ಸಹ ತಮ್ಮ ಜೀವನದ ನೋವಿನ ಕಥೆಗಳನ್ನು ಹೇಳುತ್ತಿದ್ದಾರೆ, ಖಂಡಿತ ನೋಟಾಗೆ ಓಟು ಹಾಕುತ್ತೇವೆ ಎಂದು ಬೆಂಬಲ ವ್ಯಕ್ತಿವಾಗಿದೆ ಎನ್ನುತ್ತಾರೆ ವಿರುಪಮ್ಮ.

ಚುನಾವಣೆಯ ದಿವಸ ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಬಹಳಷ್ಟು ಸಂಖ್ಯೆಗಳಲ್ಲಿ ಜನ ಒಂದೆಡೆ ಸೇರಿಕೊಂಡು ಶಾಂತಿಯುತವಾದ ಸತ್ಯಾಗ್ರಹ (ಬಹಿರಂಗ ನೋಟಾ) ಮಾಡಿ ನಿಮ್ಮ ಸಿಟ್ಟನ್ನು ರಾಜಕೀಯ ಪಕ್ಷಿಗಳಿಗೆ ತೋರಿಸಬೇಕು. ಮದ್ಯ ನಿಷೇಧದ ಪರವಾಗಿರುವ ಜನರು ಮುಂದಿನ ತಿಂಗಳು ರಾಜಕೀಯ ಪಕ್ಷಗಳ ಮುಖಂಡರಿಗೆ/ಅಧ್ಯಕ್ಷರಿಗೆ ಲಕ್ಷಾಂತರ ಪತ್ರಗಳನ್ನು ಬರೆಯಿರಿ. ಪತ್ರದಲ್ಲಿ ಸಹೋದರರೇ ಅಥವಾ ಮುಖಂಡರೇ ನೀವು ನಿಮ್ಮ ಸರ್ಕಾರಕ್ಕೆ ಬರುವ ಆದಾಯದ ಚಿಂತೆ ಮಾಡದೇ ಸಮಾಜದ ಆರೋಗ್ಯದ ಚಿಂತೆ ಮಾಡಿ ಹಾಗೂ ಮಹಿಳೆಯರ ಗೌರವಕ್ಕೆ ಆದ್ಯತೆ ನೀಡಿ. ಇದು ಮಹಿಳೆಯರ ಬದುಕಿನ ಪ್ರಶ್ನೆ ಎಂದು ಮನದಟ್ಟು ಮಾಡಿರಿ ಎಂದು ಜನರಲ್ಲಿ ಮನವಿ ಮಾಡುತ್ತಿರುವುದು ಕಂಡುಬರುತ್ತಿದೆ. ಫಲಿತಾಂಶದ ದಿನ ಇದರ ಪ್ರಭಾವ ರಾಜಕೀಯ ಪಕ್ಷಗಳಿಗೆ ಅರ್ಥವಾಗಬಹುದು ಕಾದು ನೋಡೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...