Homeಕರ್ನಾಟಕಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

ಮದ್ಯ ನಿಷೇಧಕ್ಕಾಗಿ ನೋಟಾ ಮತ ಚಲಾಯಿಸುವಂತೆ ವಿಶಿಷ್ಠ ಪ್ರಚಾರಾಂದೋಲನ.

- Advertisement -
- Advertisement -

| ಗುರುಬಸವ ಬರಗೂರು |

ನೋಟಾ ಮತ ಚಲಾವಣೆ ಜಾರಿಯಾದ ನಂತರ ವಿವಿಧ ಉದ್ದೇಶಗಳಿಗಾಗಿ ನೋಟಾ ಮತ ಚಲಾಯಿಸುವಂತೆ ಬಹಳಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಪ್ರಚಾರ ಮಾಡಿದ್ದು ನಮಗೆ ನೆನಪಿದೆ. ಬಹುತೇಕ ವಿದ್ಯಾವಂತರು ಮಾತ್ರ ನೋಟ ಕುರಿತು ಯೋಚಿಸುತ್ತಿದ್ದರು. ಅಭ್ಯರ್ಥಿಗಳು ಭ್ರಷ್ಟಾಚಾರಿಗಳಾಗಿದ್ದು, ಇವರು ಯಾರು ನಮ್ಮ ಆಯ್ಕೆಯಲ್ಲ ಎಂದು ಹೇಳಿದ್ದಿದೆ. ಆದರೆ ನಮ್ಮ ಭವಿಷ್ಯಕ್ಕಾಗಿ ಮದ್ಯವನ್ನು ನಿಷೇಧಿಸಿ, ಕುಟುಂಬಗಳನ್ನು ರಕ್ಷಿಸಿ ಎಂಬ ಆಶಯಕ್ಕಾಗಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಮುಖ್ಯವಾಗಿ ಮಹಿಳೆಯರು ರಾಜ್ಯದ ಹಲವು ಜಿಲ್ಲೆಗಳಲ್ಲಿ ನೋಟಾ ಮತ ಚಲಾಯಿಸಿ ಎಂದು ಬಹಿರಂಗ ಪ್ರಚಾರಾಂದೋಲನಕ್ಕೆ ಇಳಿದಿದ್ದಾರೆ.

ಪ್ರಜಾಪ್ರಭುತ್ವವೆಂದರೆ ಕೇವಲ ಮತ ಚಲಾಯಿಸುವುದಲ್ಲ, ಪ್ರಜಾಪ್ರಭುತ್ವದಲ್ಲಿ  ಜನರಿಗೆ ಪ್ರತಿಭಟಿಸುವ ಹಕ್ಕು ಸಹ ಇದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನ ನಾವು ಸಂವಿಧಾನದ ಆಶಯಗಳಿಗೆ ಬದ್ಧರಾಗಿರುತ್ತೇವೆ ಮತ್ತು ಸಂವಿಧಾನವನ್ನು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಅದೇ ಸಂವಿಧಾನದ 47ನೇ ಪರಿಚ್ಛೇದ ಸಾಮಾಜಿಕ ಒಳಿತಿಗಾಗಿ ಮದ್ಯ ನಿಷೇಧದ ಬಗ್ಗೆ ಮಾತಾಡುತ್ತದೆ. ಆದರೆ ಅನದ್ನು ಅನುಷ್ಠಾನ ಮಾಡುತ್ತಿಲ್ಲ ಏಕೆ ಎಂದು ಆಂದೋಲನದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಮದ್ಯ ನಿಷೇಷ ಆಂದೋಲನ ವೇದಿಕೆಯು ಉತ್ತರ  ಕರ್ನಾಟಕದಲ್ಲಿ ಪ್ರಬಲವಾಗಿದೆ. ಅಲ್ಲೆಲ್ಲಾ ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿಯೂ ಮೂರು ಪಕ್ಷದ ಮುಖಂಡರಿಗೆ ಮದ್ಯ ನಿಷೇಧಿಸುವಂತೆ ಪತ್ರ ಚಳವಳಿ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪಕ್ಷವೂ ಮದ್ಯ ನಿಷೇಧಿಸುವ ಕುರಿತು ಸ್ಪಷ್ಟ ಭರವಸೆ ನೀಡಿಲ್ಲದ ಕಾರಣಕ್ಕಾಗಿ ಪ್ರತಿ ಊರಿಗೂ ಹೋಗಿ ನೋಟಾ ಮತ ಚಲಾವಣೆ ಮಾಡುವಂತೆ ಜನರಿಗೆ ಕರೆ ನೀಡುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಮ್ಮ ವೇದಿಕೆಯ ಪ್ರಭಾವ ಕಡಿಮೆ ಇರುವುದರಿಂದ ರಾಯಚೂರು, ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗೆ ಬಂದು ಸ್ವಯಂ ಪ್ರೇರಿತರಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಮದ್ಯ ಸೇವನೆಯಿಂದಾಗಿ ದಿನ ನಿತ್ಯ ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.  ಇದರಿಂದ ಎಷ್ಟೋ ಮಕ್ಕಳು ತಬ್ಬಲಿಗಳಾದರೆ ಮಹಿಳೆಯರು ವಿಧವೆಯರಾಗುವ ಪರಿಸ್ಥಿತಿ ಬಂದಿದೆ. ಕಷ್ಟ ಪಟ್ಟು ದುಡಿದರೂ ಹಣವೆಲ್ಲಾ ಮದ್ಯಕ್ಕೆ ಹೋಗುವುದರಿಂದ ಜೀವನ ನಡೆಸಲು ಸಾಧ್ಯವಾಗದೆ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಎಲ್ಲಾ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧವಾಗಬೇಕೆಂದು ಪ್ರಚಾರಾಂದೋಲನ ತಂಡದಲ್ಲಿರುವ ಮದ್ಯ ನಿಷೇಧ ಆಂದೋಲನದ ಮೋಕ್ಷಮ್ಮ, ರಜಿಯ ಬೇಗಂ, ಅಕ್ಕಮ್ಮ, ಹುಲಿಗೇಮ್ಮ, ಅಮರೇಶ, ಬಸವರಾಜ ಮುಂತಾದವರು ಅಭಿಪ್ರಾಯಪಡುತ್ತಾರೆ.

2016 ಆಕ್ಟೋಬರ್ 02 ರ ಗಾಂಧೀಜಿ ಜನ್ಮದಿನದಂದು ಅವರ ಆಶಯದಂತೆ ಮದ್ಯ ನಿಷೇಧ ಆಗಲೇಬೇಕು ಎಂದು ಸುಮಾರು 40 ಸಾವಿರ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ಶುರು ಮಾಡಿದರು. ನಂತರ ಅದೇ ವರ್ಷ ಜನವರಿ 30 (ಗಾಂಧೀಜಿ ನಿಧನವಾದ ದಿನ) ರಂದು “ನಮ್ಮ ಗಾಂಧಿ, ನಮಗೆ ಕೊಡಿ” ಎಂದು 16 ಜಿಲ್ಲೆಗಳಲ್ಲಿ  ಈ ಹೋರಾಟವನ್ನು ಮಾಡಲಾಯಿತು. ಅದೇ ವರ್ಷ ಫೆಬ್ರವರಿ ತಿಂಗಳಿನಲ್ಲಿ  ಸುಮಾರು 71 ದಿನಗಳ ಕಾಲ ರಾಯಚೂರು ನಗರದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ಹೀಗೆ ನಿರಂತರ ಶಾಂತಿಯುತವಾಗಿ ಹೋರಾಟಗಳು ನಡೆಯುತ್ತಾ ಬಂದರೂ ಸಹ ಯಾವ ರಾಜಕೀಯ ಪಕ್ಷಗಳು ಮಹಿಳೆಯರ ಸಮಸ್ಯೆಗಳಿಗೆ  ಸ್ಪಂದಿಸಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು 2019ರ ಜನವರಿ 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ರಾಜ್ಯದ ಸುಮಾರು 3000 ಕ್ಕೂ ಹೆಚ್ಚು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆಯ ದಾರಿಯ ಮಧ್ಯದಲ್ಲಿ ರೇಣುಕಮ್ಮ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು ಸಹ ಯಾವ ಪಕ್ಷದ ಮುಖಂಡರೂ ಬಂದು ಮಹಿಳೆಯರನ್ನು ಭೇಟಿ ಮಾಡದೇ ನಮ್ಮನ್ನು ಹಾಗೂ ನಮ್ಮ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನೋಟಾ ಚಲಾಯಿಸುವ ಮೂಲಕ ಮಹಿಳೆಯರ ಶಕ್ತಿ  ಏನೆಂದು ಆಳುವವರಿಗೆ ತಿಳಿಸಲು ಮುಂದಾಗಿದ್ದೇವೆ ಅನ್ನುತ್ತಾರೆ ಹೋರಾಟಗಾರ್ತಿ ವಿರುಪಮ್ಮನವರು.

ಬೆಂಗಳೂರಿನ ತಂಡವು ಈಗಾಗಲೇ ಶ್ರೀ ರಾಂಪುರ ಮತ್ತು ಶೇಷಾದ್ರಿಪುರಂ ಸ್ಲಂಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇನ್ನೊಂದು ತಂಡವು ಮಂಡ್ಯದ ಹಲವು ಸ್ಲಂಗಳಲ್ಲಿ ಪ್ರಚಾರ ಮುಗಿಸಿದ್ದಾರೆ. ಪ್ರಚಾರದ ವೇಳೆ ಅಲ್ಲಿನ ಮಹಿಳೆಯರು ಸಹ ತಮ್ಮ ಜೀವನದ ನೋವಿನ ಕಥೆಗಳನ್ನು ಹೇಳುತ್ತಿದ್ದಾರೆ, ಖಂಡಿತ ನೋಟಾಗೆ ಓಟು ಹಾಕುತ್ತೇವೆ ಎಂದು ಬೆಂಬಲ ವ್ಯಕ್ತಿವಾಗಿದೆ ಎನ್ನುತ್ತಾರೆ ವಿರುಪಮ್ಮ.

ಚುನಾವಣೆಯ ದಿವಸ ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಬಹಳಷ್ಟು ಸಂಖ್ಯೆಗಳಲ್ಲಿ ಜನ ಒಂದೆಡೆ ಸೇರಿಕೊಂಡು ಶಾಂತಿಯುತವಾದ ಸತ್ಯಾಗ್ರಹ (ಬಹಿರಂಗ ನೋಟಾ) ಮಾಡಿ ನಿಮ್ಮ ಸಿಟ್ಟನ್ನು ರಾಜಕೀಯ ಪಕ್ಷಿಗಳಿಗೆ ತೋರಿಸಬೇಕು. ಮದ್ಯ ನಿಷೇಧದ ಪರವಾಗಿರುವ ಜನರು ಮುಂದಿನ ತಿಂಗಳು ರಾಜಕೀಯ ಪಕ್ಷಗಳ ಮುಖಂಡರಿಗೆ/ಅಧ್ಯಕ್ಷರಿಗೆ ಲಕ್ಷಾಂತರ ಪತ್ರಗಳನ್ನು ಬರೆಯಿರಿ. ಪತ್ರದಲ್ಲಿ ಸಹೋದರರೇ ಅಥವಾ ಮುಖಂಡರೇ ನೀವು ನಿಮ್ಮ ಸರ್ಕಾರಕ್ಕೆ ಬರುವ ಆದಾಯದ ಚಿಂತೆ ಮಾಡದೇ ಸಮಾಜದ ಆರೋಗ್ಯದ ಚಿಂತೆ ಮಾಡಿ ಹಾಗೂ ಮಹಿಳೆಯರ ಗೌರವಕ್ಕೆ ಆದ್ಯತೆ ನೀಡಿ. ಇದು ಮಹಿಳೆಯರ ಬದುಕಿನ ಪ್ರಶ್ನೆ ಎಂದು ಮನದಟ್ಟು ಮಾಡಿರಿ ಎಂದು ಜನರಲ್ಲಿ ಮನವಿ ಮಾಡುತ್ತಿರುವುದು ಕಂಡುಬರುತ್ತಿದೆ. ಫಲಿತಾಂಶದ ದಿನ ಇದರ ಪ್ರಭಾವ ರಾಜಕೀಯ ಪಕ್ಷಗಳಿಗೆ ಅರ್ಥವಾಗಬಹುದು ಕಾದು ನೋಡೋಣ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...