Homeಕರ್ನಾಟಕಪಬ್ಲಿಕ್ ಪರೀಕ್ಷೆ ರದ್ದತಿ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ

ಪಬ್ಲಿಕ್ ಪರೀಕ್ಷೆ ರದ್ದತಿ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ

- Advertisement -
- Advertisement -

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿ ಆದೇಶಿಸಿದೆ. ಈ ಆದೇಶವನ್ನು ಶಿಕ್ಷಣ ತಜ್ಞರು, ಮಕ್ಕಳ ಪೋಷಕರು ಸ್ವಾಗತಿಸಿದ್ದಾರೆ.

ಆದರೆ, ಈಗ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸುವ ಆತಂಕ ಎದುರಾಗಿದೆ. ವರದಿಗಳ ಪ್ರಕಾರ, ಸರ್ಕಾರ ಈಗಾಗಲೇ ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದೆ.

ಸರ್ಕಾರ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಪ್ರಾರಂಭಿಸಿರುವ ಚಿಂತಕರು, ಶಿಕ್ಷಣ ತಜ್ಞರು ಮತ್ತು ಸಾರ್ವಜನಿಕರು, “ಮಕ್ಕಳನ್ನು ಪದೇ ಪದೇ ಪರೀಕ್ಷೆಗೆ ಗುರಿ ಪಡಿಸುವುದು ಮಕ್ಕಳ ಹಕ್ಕುಗಳ ವಿರೋಧ ಕ್ರಮವಾಗಿದೆ. ಅದನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿರುವುದು ಸ್ವಾಗತಾರ್ಹ. ಸರ್ಕಾರ ಮೇಲ್ಮನವಿ ಸಲ್ಲಿಸಬಾರದು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಚಿಂತಕ ಬಿ. ಶ್ರೀಪಾದ ಭಟ್, ಪಬ್ಲಿಕ್ ಪರೀಕ್ಷೆಗಳು ಮಕ್ಕಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ.

“ತಾತ್ವಿಕವಾಗಿ, ಸೈದ್ಧಾಂತಿಕವಾಗಿ ಮಕ್ಕಳನ್ನು ಈ ರೀತಿ ಪರೀಕ್ಷೆಗಳಿಗೆ ಗುರಿ ಪಡಿಸುವುದು ಮಕ್ಕಳ ಹಕ್ಕುಗಳ ವಿರೋಧ ಎನಿಸಿಕೊಳ್ಳುತ್ತದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಮೂಲಭೂತ ಸೌಕರ್ಯಗಳಿಲ್ಲ, ಸಮರ್ಪಕವಾಗಿ ಪಠ್ಯ ಪುಸ್ತಕಗಳ ವಿತರಣೆಯಾಗಿಲ್ಲ. ಈ ಕೊರತೆಗಳ ಕಾರಣದಿಂದ ಅಲ್ಲಿ ಓದುತ್ತಿರುವ ಗ್ರಾಮೀಣ ಭಾಗದ, ವಂಚಿತ ಸಮುದಾಯದ ಮಕ್ಕಳು ರಾಜ್ಯ ಮಟ್ಟದ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಲು ತರಬೇತಿ ಪಡೆದಿರುವುದಿಲ್ಲ. ಪ್ರತಿಭೆ ಇದ್ದರೂ ಇಂತಹ ಅನಾಹುತಕಾರಿ ನಿರ್ಧಾರಗಳ ಕಾರಣದಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಸರ್ಕಾರವು ಮೊದಲು ಸರ್ಕಾರಿ ಶಾಲೆಗಳನ್ನು ಬಲಪಡಿಸಲಿ, ನಂತರ ಮುಂದಿನ ವಿಚಾರ. ಎರಡನೆಯದಾಗಿ 5,8,9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಶಿಕ್ಷಣ ಹಕ್ಕುಗಳ ಕಾಯ್ದೆ (ಆರ್ ಟಿಇ) 2009ರ ಸೆಕ್ಷನ್ 16ರ ಉಲ್ಲಂಘನೆಯಾಗುತ್ತದೆ. ಅದರ ಪ್ರಕಾರ ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೂ ಮಕ್ಕಳನ್ನು ಫೇಲು ಮಾಡುವಂತಿಲ್ಲ (No detention policy)” ಎಂದಿದ್ದಾರೆ.

“2019ರಲ್ಲಿ ಬಿಜೆಪಿ ಪಕ್ಷವು ತನ್ನ ಅನೀತಿಗೆ ಅನುಗುಣವಾಗುವಂತೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೆಕ್ಷನ್ 16ನ್ನು ತಿದ್ದುಪಡಿ ಮಾಡಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸದೆ ಸತತವಾಗಿ ಪರೀಕ್ಷೆಗಳ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಮೌಲ್ಯಮಾಪನ ಮಾಡುವುದು ಅಮಾನವೀಯವಲ್ಲವೇ? ಇದು ವಂಚಿತ ಸಮುದಾಯದ ಮಕ್ಕಳನ್ನು ಶಿಕ್ಷಣದಿಂದ ಹೊರದೂಡುತ್ತದೆ. 2023ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಈ ತಿದ್ದುಪಡಿಯನ್ನು ರದ್ದುಗೊಳಿಸಿ ಮೂಲದಲ್ಲಿದ್ದ ಸೆಕ್ಷನ್ 16ನ್ನು ಮರಳಿ ತರಬೇಕಿತ್ತು. ಆದರೆ ಇದನ್ನು ಮಾಡದೆ ಹಿಂದಿನ ಸರ್ಕಾರದ ಪಬ್ಲಿಕ್ ಪರೀಕ್ಷೆ ಎನ್ನುವ ಅನೀತಿಯನ್ನು ಮುಂದುವರಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೂರನೆಯದಾಗಿ 5,8,9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ವಿಧಾನಮಂಡಲದಲ್ಲಿ ಚರ್ಚೆ ನಡೆಸಲಿಲ್ಲ. ಶಿಕ್ಷಣದ ಭಾಗೀದಾರರೊಂದಿಗೆ ಸಮಾಲೋಚನೆ ಮಾಡಲಿಲ್ಲ. ಏಕಪಕ್ಷೀಯವಾಗಿ ಕೇವಲ ಅಧಿಸೂಚನೆ ಮೂಲಕ ತಿದ್ದುಪಡಿ ಮಾಡುವುದು ಸಂವಿಧಾನ ವಿರೋಧಿ ನೀತಿಯಲ್ಲವೇ? ಮುಖ್ಯವಾಗಿ ಎನ್‌ಇಪಿ 2020ಯನ್ನು ವಿರೋಧಿಸಿದ ಕಾಂಗ್ರೆಸ್ ‘ಕೇಂದ್ರ ಬಿಜೆಪಿ ಸರ್ಕಾರವು ಸಂಸತ್ತಿನಲ್ಲಿ ಚರ್ಚೆ ಮಾಡಲಿಲ್ಲ, ರಾಜ್ಯ ಬಿಜೆಪಿ ಸರ್ಕಾರವು ವಿಧಾನ ಮಂಡಲದಲ್ಲಿ ಚರ್ಚೆ ಮಾಡಲಿಲ್ಲ’ ಎಂದು ಸಕಾರಣವಾಗಿ ಪ್ರತಿಭಟಿಸಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ಸ್ವತಃ ತಾವೇ ಆ ರೀತಿ ನಡೆದುಕೊಳ್ಳುವುದು ಸರಿಯೇ? ಎನ್‌ಇಪಿಯನ್ನು ವಿರೋಧಿಸುವ ಕಾಂಗ್ರೆಸ್ ಸರ್ಕಾರ ಪಬ್ಲಿಕ್ ಪರೀಕ್ಷೆ ನಡೆಸಬೇಕೆಂದು ಹೇಳಿದ ಅದರ ಶಿಫಾರಸ್ಸನ್ನು ಜಾರಿಗೊಳಿಸುತ್ತಿರುವುದು ಎಂತಹಾ ವ್ಯಂಗ್ಯ ಮತ್ತು ವೈರುಧ್ಯ?” ಎಂದು ಪ್ರಶ್ನಿಸಿದ್ದಾರೆ.

5,8,9,11 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಂತೆ ಕರ್ನಾಟಕ ಸರ್ಕಾರ, ಶಿಕ್ಷಣ ಇಲಾಖೆಗೆ ಪರಿಚಯದವರು ಕಿವಿಮಾತು ಹೇಳಿ ವಿವರಿಸಿ ಎಂದು ಮನವಿ ಮಾಡಿದ್ದಾರೆ.

ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕೂಡ ಸರ್ಕಾರ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಆಗ್ರಹಿಸಿದ್ದಾರೆ. “5,8,9,11 ತರಗತಿಗಳಿಗೆ ಬೋರ್ಡ್ ಪರೀಕ್ಷೆ ರದ್ದು ಮಾಡಿರುವ ಹೈಕೋರ್ಟ್ ಆದೇಶ ಸರಿಯಾಗಿದೆ. ಇದನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸುವ ನಿರ್ಧಾರ ಸರಿಯಲ್ಲ. ಕೋವಿಡ್ ಕಾಲದಲ್ಲಿ ಶೈಕ್ಷಣಿಕವಾಗಿ ನರಳಿರುವ ಮಕ್ಕಳನ್ನು ಹಿಂಸಿಸಬೇಡಿ. ಪ್ರತಿಷ್ಠೆ ಬೇಡ, ಮಕ್ಕಳ ಹಿತಾಸಕ್ತಿಯಷ್ಟೇ ಮುಖ್ಯ” ಎಂದಿದ್ದಾರೆ.

ಇದಲ್ಲದೆ ಸಾರ್ವಜನಿಕ ವಲಯದಲ್ಲೂ ಸರ್ಕಾರ ಹೈಕೋರ್ಟ್‌ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಆಗ್ರಹಗಳು ಕೇಳಿ ಬಂದಿವೆ.

ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ:

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ದೊರೆತಿದೆ.

ಇಂದು(ಮಾ.7) ಮೇಲ್ಮನವಿ ಸಲ್ಲಿಸಿ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಏಕ ಸದಸ್ಯ ಪೀಠದ ಆದೇಶಕ್ಕೆ ಹೇಗಾದರು ತಡೆಯಾಜ್ಞೆ ತಂದು ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ನಾಲ್ಕೂ ತರಗತಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ. ಮಾರ್ಚ್ 9 ರಿಂದ 11 ರವರೆಗೆ ಬೋರ್ಡ್‌ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ.

ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಂ ನಡೆಸುವ ಚಿಂತನೆ ಮಾಡಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆ ನೀಡಿದೆ. ಪ್ರಸ್ತುತ ರಾಜ್ಯದಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಬೇರೆ ತರಗತಿಯ ಮಕ್ಕಳಿಗೂ ಬೋರ್ಡ್ ಪರೀಕ್ಷೆ ನಡೆಸಿದರೆ, ಮಕ್ಕಳ ಮೇಲೆ ಒತ್ತಡ ಬೀಳುತ್ತದೆ ಎಂದು ಶಿಕ್ಷಣ ತಜ್ಞರು, ಪೋಷಕರು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 5,8,9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್‌ ಮಹತ್ವದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...