Homeಕರ್ನಾಟಕಪಬ್ಲಿಕ್ ಪರೀಕ್ಷೆ ರದ್ದತಿ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ

ಪಬ್ಲಿಕ್ ಪರೀಕ್ಷೆ ರದ್ದತಿ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ

- Advertisement -
- Advertisement -

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿ ಆದೇಶಿಸಿದೆ. ಈ ಆದೇಶವನ್ನು ಶಿಕ್ಷಣ ತಜ್ಞರು, ಮಕ್ಕಳ ಪೋಷಕರು ಸ್ವಾಗತಿಸಿದ್ದಾರೆ.

ಆದರೆ, ಈಗ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸುವ ಆತಂಕ ಎದುರಾಗಿದೆ. ವರದಿಗಳ ಪ್ರಕಾರ, ಸರ್ಕಾರ ಈಗಾಗಲೇ ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದೆ.

ಸರ್ಕಾರ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಪ್ರಾರಂಭಿಸಿರುವ ಚಿಂತಕರು, ಶಿಕ್ಷಣ ತಜ್ಞರು ಮತ್ತು ಸಾರ್ವಜನಿಕರು, “ಮಕ್ಕಳನ್ನು ಪದೇ ಪದೇ ಪರೀಕ್ಷೆಗೆ ಗುರಿ ಪಡಿಸುವುದು ಮಕ್ಕಳ ಹಕ್ಕುಗಳ ವಿರೋಧ ಕ್ರಮವಾಗಿದೆ. ಅದನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿರುವುದು ಸ್ವಾಗತಾರ್ಹ. ಸರ್ಕಾರ ಮೇಲ್ಮನವಿ ಸಲ್ಲಿಸಬಾರದು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಚಿಂತಕ ಬಿ. ಶ್ರೀಪಾದ ಭಟ್, ಪಬ್ಲಿಕ್ ಪರೀಕ್ಷೆಗಳು ಮಕ್ಕಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ.

“ತಾತ್ವಿಕವಾಗಿ, ಸೈದ್ಧಾಂತಿಕವಾಗಿ ಮಕ್ಕಳನ್ನು ಈ ರೀತಿ ಪರೀಕ್ಷೆಗಳಿಗೆ ಗುರಿ ಪಡಿಸುವುದು ಮಕ್ಕಳ ಹಕ್ಕುಗಳ ವಿರೋಧ ಎನಿಸಿಕೊಳ್ಳುತ್ತದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಮೂಲಭೂತ ಸೌಕರ್ಯಗಳಿಲ್ಲ, ಸಮರ್ಪಕವಾಗಿ ಪಠ್ಯ ಪುಸ್ತಕಗಳ ವಿತರಣೆಯಾಗಿಲ್ಲ. ಈ ಕೊರತೆಗಳ ಕಾರಣದಿಂದ ಅಲ್ಲಿ ಓದುತ್ತಿರುವ ಗ್ರಾಮೀಣ ಭಾಗದ, ವಂಚಿತ ಸಮುದಾಯದ ಮಕ್ಕಳು ರಾಜ್ಯ ಮಟ್ಟದ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಲು ತರಬೇತಿ ಪಡೆದಿರುವುದಿಲ್ಲ. ಪ್ರತಿಭೆ ಇದ್ದರೂ ಇಂತಹ ಅನಾಹುತಕಾರಿ ನಿರ್ಧಾರಗಳ ಕಾರಣದಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಸರ್ಕಾರವು ಮೊದಲು ಸರ್ಕಾರಿ ಶಾಲೆಗಳನ್ನು ಬಲಪಡಿಸಲಿ, ನಂತರ ಮುಂದಿನ ವಿಚಾರ. ಎರಡನೆಯದಾಗಿ 5,8,9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಶಿಕ್ಷಣ ಹಕ್ಕುಗಳ ಕಾಯ್ದೆ (ಆರ್ ಟಿಇ) 2009ರ ಸೆಕ್ಷನ್ 16ರ ಉಲ್ಲಂಘನೆಯಾಗುತ್ತದೆ. ಅದರ ಪ್ರಕಾರ ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೂ ಮಕ್ಕಳನ್ನು ಫೇಲು ಮಾಡುವಂತಿಲ್ಲ (No detention policy)” ಎಂದಿದ್ದಾರೆ.

“2019ರಲ್ಲಿ ಬಿಜೆಪಿ ಪಕ್ಷವು ತನ್ನ ಅನೀತಿಗೆ ಅನುಗುಣವಾಗುವಂತೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೆಕ್ಷನ್ 16ನ್ನು ತಿದ್ದುಪಡಿ ಮಾಡಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸದೆ ಸತತವಾಗಿ ಪರೀಕ್ಷೆಗಳ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಮೌಲ್ಯಮಾಪನ ಮಾಡುವುದು ಅಮಾನವೀಯವಲ್ಲವೇ? ಇದು ವಂಚಿತ ಸಮುದಾಯದ ಮಕ್ಕಳನ್ನು ಶಿಕ್ಷಣದಿಂದ ಹೊರದೂಡುತ್ತದೆ. 2023ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಈ ತಿದ್ದುಪಡಿಯನ್ನು ರದ್ದುಗೊಳಿಸಿ ಮೂಲದಲ್ಲಿದ್ದ ಸೆಕ್ಷನ್ 16ನ್ನು ಮರಳಿ ತರಬೇಕಿತ್ತು. ಆದರೆ ಇದನ್ನು ಮಾಡದೆ ಹಿಂದಿನ ಸರ್ಕಾರದ ಪಬ್ಲಿಕ್ ಪರೀಕ್ಷೆ ಎನ್ನುವ ಅನೀತಿಯನ್ನು ಮುಂದುವರಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೂರನೆಯದಾಗಿ 5,8,9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ವಿಧಾನಮಂಡಲದಲ್ಲಿ ಚರ್ಚೆ ನಡೆಸಲಿಲ್ಲ. ಶಿಕ್ಷಣದ ಭಾಗೀದಾರರೊಂದಿಗೆ ಸಮಾಲೋಚನೆ ಮಾಡಲಿಲ್ಲ. ಏಕಪಕ್ಷೀಯವಾಗಿ ಕೇವಲ ಅಧಿಸೂಚನೆ ಮೂಲಕ ತಿದ್ದುಪಡಿ ಮಾಡುವುದು ಸಂವಿಧಾನ ವಿರೋಧಿ ನೀತಿಯಲ್ಲವೇ? ಮುಖ್ಯವಾಗಿ ಎನ್‌ಇಪಿ 2020ಯನ್ನು ವಿರೋಧಿಸಿದ ಕಾಂಗ್ರೆಸ್ ‘ಕೇಂದ್ರ ಬಿಜೆಪಿ ಸರ್ಕಾರವು ಸಂಸತ್ತಿನಲ್ಲಿ ಚರ್ಚೆ ಮಾಡಲಿಲ್ಲ, ರಾಜ್ಯ ಬಿಜೆಪಿ ಸರ್ಕಾರವು ವಿಧಾನ ಮಂಡಲದಲ್ಲಿ ಚರ್ಚೆ ಮಾಡಲಿಲ್ಲ’ ಎಂದು ಸಕಾರಣವಾಗಿ ಪ್ರತಿಭಟಿಸಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ಸ್ವತಃ ತಾವೇ ಆ ರೀತಿ ನಡೆದುಕೊಳ್ಳುವುದು ಸರಿಯೇ? ಎನ್‌ಇಪಿಯನ್ನು ವಿರೋಧಿಸುವ ಕಾಂಗ್ರೆಸ್ ಸರ್ಕಾರ ಪಬ್ಲಿಕ್ ಪರೀಕ್ಷೆ ನಡೆಸಬೇಕೆಂದು ಹೇಳಿದ ಅದರ ಶಿಫಾರಸ್ಸನ್ನು ಜಾರಿಗೊಳಿಸುತ್ತಿರುವುದು ಎಂತಹಾ ವ್ಯಂಗ್ಯ ಮತ್ತು ವೈರುಧ್ಯ?” ಎಂದು ಪ್ರಶ್ನಿಸಿದ್ದಾರೆ.

5,8,9,11 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಂತೆ ಕರ್ನಾಟಕ ಸರ್ಕಾರ, ಶಿಕ್ಷಣ ಇಲಾಖೆಗೆ ಪರಿಚಯದವರು ಕಿವಿಮಾತು ಹೇಳಿ ವಿವರಿಸಿ ಎಂದು ಮನವಿ ಮಾಡಿದ್ದಾರೆ.

ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕೂಡ ಸರ್ಕಾರ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಆಗ್ರಹಿಸಿದ್ದಾರೆ. “5,8,9,11 ತರಗತಿಗಳಿಗೆ ಬೋರ್ಡ್ ಪರೀಕ್ಷೆ ರದ್ದು ಮಾಡಿರುವ ಹೈಕೋರ್ಟ್ ಆದೇಶ ಸರಿಯಾಗಿದೆ. ಇದನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸುವ ನಿರ್ಧಾರ ಸರಿಯಲ್ಲ. ಕೋವಿಡ್ ಕಾಲದಲ್ಲಿ ಶೈಕ್ಷಣಿಕವಾಗಿ ನರಳಿರುವ ಮಕ್ಕಳನ್ನು ಹಿಂಸಿಸಬೇಡಿ. ಪ್ರತಿಷ್ಠೆ ಬೇಡ, ಮಕ್ಕಳ ಹಿತಾಸಕ್ತಿಯಷ್ಟೇ ಮುಖ್ಯ” ಎಂದಿದ್ದಾರೆ.

ಇದಲ್ಲದೆ ಸಾರ್ವಜನಿಕ ವಲಯದಲ್ಲೂ ಸರ್ಕಾರ ಹೈಕೋರ್ಟ್‌ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಆಗ್ರಹಗಳು ಕೇಳಿ ಬಂದಿವೆ.

ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ:

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ದೊರೆತಿದೆ.

ಇಂದು(ಮಾ.7) ಮೇಲ್ಮನವಿ ಸಲ್ಲಿಸಿ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಏಕ ಸದಸ್ಯ ಪೀಠದ ಆದೇಶಕ್ಕೆ ಹೇಗಾದರು ತಡೆಯಾಜ್ಞೆ ತಂದು ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ನಾಲ್ಕೂ ತರಗತಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ. ಮಾರ್ಚ್ 9 ರಿಂದ 11 ರವರೆಗೆ ಬೋರ್ಡ್‌ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ.

ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಂ ನಡೆಸುವ ಚಿಂತನೆ ಮಾಡಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆ ನೀಡಿದೆ. ಪ್ರಸ್ತುತ ರಾಜ್ಯದಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಬೇರೆ ತರಗತಿಯ ಮಕ್ಕಳಿಗೂ ಬೋರ್ಡ್ ಪರೀಕ್ಷೆ ನಡೆಸಿದರೆ, ಮಕ್ಕಳ ಮೇಲೆ ಒತ್ತಡ ಬೀಳುತ್ತದೆ ಎಂದು ಶಿಕ್ಷಣ ತಜ್ಞರು, ಪೋಷಕರು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 5,8,9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್‌ ಮಹತ್ವದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...