Homeಕರ್ನಾಟಕಪಬ್ಲಿಕ್ ಪರೀಕ್ಷೆ ರದ್ದತಿ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ

ಪಬ್ಲಿಕ್ ಪರೀಕ್ಷೆ ರದ್ದತಿ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ

- Advertisement -
- Advertisement -

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿ ಆದೇಶಿಸಿದೆ. ಈ ಆದೇಶವನ್ನು ಶಿಕ್ಷಣ ತಜ್ಞರು, ಮಕ್ಕಳ ಪೋಷಕರು ಸ್ವಾಗತಿಸಿದ್ದಾರೆ.

ಆದರೆ, ಈಗ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸುವ ಆತಂಕ ಎದುರಾಗಿದೆ. ವರದಿಗಳ ಪ್ರಕಾರ, ಸರ್ಕಾರ ಈಗಾಗಲೇ ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದೆ.

ಸರ್ಕಾರ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಪ್ರಾರಂಭಿಸಿರುವ ಚಿಂತಕರು, ಶಿಕ್ಷಣ ತಜ್ಞರು ಮತ್ತು ಸಾರ್ವಜನಿಕರು, “ಮಕ್ಕಳನ್ನು ಪದೇ ಪದೇ ಪರೀಕ್ಷೆಗೆ ಗುರಿ ಪಡಿಸುವುದು ಮಕ್ಕಳ ಹಕ್ಕುಗಳ ವಿರೋಧ ಕ್ರಮವಾಗಿದೆ. ಅದನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿರುವುದು ಸ್ವಾಗತಾರ್ಹ. ಸರ್ಕಾರ ಮೇಲ್ಮನವಿ ಸಲ್ಲಿಸಬಾರದು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಚಿಂತಕ ಬಿ. ಶ್ರೀಪಾದ ಭಟ್, ಪಬ್ಲಿಕ್ ಪರೀಕ್ಷೆಗಳು ಮಕ್ಕಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ.

“ತಾತ್ವಿಕವಾಗಿ, ಸೈದ್ಧಾಂತಿಕವಾಗಿ ಮಕ್ಕಳನ್ನು ಈ ರೀತಿ ಪರೀಕ್ಷೆಗಳಿಗೆ ಗುರಿ ಪಡಿಸುವುದು ಮಕ್ಕಳ ಹಕ್ಕುಗಳ ವಿರೋಧ ಎನಿಸಿಕೊಳ್ಳುತ್ತದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಮೂಲಭೂತ ಸೌಕರ್ಯಗಳಿಲ್ಲ, ಸಮರ್ಪಕವಾಗಿ ಪಠ್ಯ ಪುಸ್ತಕಗಳ ವಿತರಣೆಯಾಗಿಲ್ಲ. ಈ ಕೊರತೆಗಳ ಕಾರಣದಿಂದ ಅಲ್ಲಿ ಓದುತ್ತಿರುವ ಗ್ರಾಮೀಣ ಭಾಗದ, ವಂಚಿತ ಸಮುದಾಯದ ಮಕ್ಕಳು ರಾಜ್ಯ ಮಟ್ಟದ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಲು ತರಬೇತಿ ಪಡೆದಿರುವುದಿಲ್ಲ. ಪ್ರತಿಭೆ ಇದ್ದರೂ ಇಂತಹ ಅನಾಹುತಕಾರಿ ನಿರ್ಧಾರಗಳ ಕಾರಣದಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಸರ್ಕಾರವು ಮೊದಲು ಸರ್ಕಾರಿ ಶಾಲೆಗಳನ್ನು ಬಲಪಡಿಸಲಿ, ನಂತರ ಮುಂದಿನ ವಿಚಾರ. ಎರಡನೆಯದಾಗಿ 5,8,9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಶಿಕ್ಷಣ ಹಕ್ಕುಗಳ ಕಾಯ್ದೆ (ಆರ್ ಟಿಇ) 2009ರ ಸೆಕ್ಷನ್ 16ರ ಉಲ್ಲಂಘನೆಯಾಗುತ್ತದೆ. ಅದರ ಪ್ರಕಾರ ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೂ ಮಕ್ಕಳನ್ನು ಫೇಲು ಮಾಡುವಂತಿಲ್ಲ (No detention policy)” ಎಂದಿದ್ದಾರೆ.

“2019ರಲ್ಲಿ ಬಿಜೆಪಿ ಪಕ್ಷವು ತನ್ನ ಅನೀತಿಗೆ ಅನುಗುಣವಾಗುವಂತೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೆಕ್ಷನ್ 16ನ್ನು ತಿದ್ದುಪಡಿ ಮಾಡಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸದೆ ಸತತವಾಗಿ ಪರೀಕ್ಷೆಗಳ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಮೌಲ್ಯಮಾಪನ ಮಾಡುವುದು ಅಮಾನವೀಯವಲ್ಲವೇ? ಇದು ವಂಚಿತ ಸಮುದಾಯದ ಮಕ್ಕಳನ್ನು ಶಿಕ್ಷಣದಿಂದ ಹೊರದೂಡುತ್ತದೆ. 2023ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಈ ತಿದ್ದುಪಡಿಯನ್ನು ರದ್ದುಗೊಳಿಸಿ ಮೂಲದಲ್ಲಿದ್ದ ಸೆಕ್ಷನ್ 16ನ್ನು ಮರಳಿ ತರಬೇಕಿತ್ತು. ಆದರೆ ಇದನ್ನು ಮಾಡದೆ ಹಿಂದಿನ ಸರ್ಕಾರದ ಪಬ್ಲಿಕ್ ಪರೀಕ್ಷೆ ಎನ್ನುವ ಅನೀತಿಯನ್ನು ಮುಂದುವರಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೂರನೆಯದಾಗಿ 5,8,9 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ವಿಧಾನಮಂಡಲದಲ್ಲಿ ಚರ್ಚೆ ನಡೆಸಲಿಲ್ಲ. ಶಿಕ್ಷಣದ ಭಾಗೀದಾರರೊಂದಿಗೆ ಸಮಾಲೋಚನೆ ಮಾಡಲಿಲ್ಲ. ಏಕಪಕ್ಷೀಯವಾಗಿ ಕೇವಲ ಅಧಿಸೂಚನೆ ಮೂಲಕ ತಿದ್ದುಪಡಿ ಮಾಡುವುದು ಸಂವಿಧಾನ ವಿರೋಧಿ ನೀತಿಯಲ್ಲವೇ? ಮುಖ್ಯವಾಗಿ ಎನ್‌ಇಪಿ 2020ಯನ್ನು ವಿರೋಧಿಸಿದ ಕಾಂಗ್ರೆಸ್ ‘ಕೇಂದ್ರ ಬಿಜೆಪಿ ಸರ್ಕಾರವು ಸಂಸತ್ತಿನಲ್ಲಿ ಚರ್ಚೆ ಮಾಡಲಿಲ್ಲ, ರಾಜ್ಯ ಬಿಜೆಪಿ ಸರ್ಕಾರವು ವಿಧಾನ ಮಂಡಲದಲ್ಲಿ ಚರ್ಚೆ ಮಾಡಲಿಲ್ಲ’ ಎಂದು ಸಕಾರಣವಾಗಿ ಪ್ರತಿಭಟಿಸಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ಸ್ವತಃ ತಾವೇ ಆ ರೀತಿ ನಡೆದುಕೊಳ್ಳುವುದು ಸರಿಯೇ? ಎನ್‌ಇಪಿಯನ್ನು ವಿರೋಧಿಸುವ ಕಾಂಗ್ರೆಸ್ ಸರ್ಕಾರ ಪಬ್ಲಿಕ್ ಪರೀಕ್ಷೆ ನಡೆಸಬೇಕೆಂದು ಹೇಳಿದ ಅದರ ಶಿಫಾರಸ್ಸನ್ನು ಜಾರಿಗೊಳಿಸುತ್ತಿರುವುದು ಎಂತಹಾ ವ್ಯಂಗ್ಯ ಮತ್ತು ವೈರುಧ್ಯ?” ಎಂದು ಪ್ರಶ್ನಿಸಿದ್ದಾರೆ.

5,8,9,11 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಂತೆ ಕರ್ನಾಟಕ ಸರ್ಕಾರ, ಶಿಕ್ಷಣ ಇಲಾಖೆಗೆ ಪರಿಚಯದವರು ಕಿವಿಮಾತು ಹೇಳಿ ವಿವರಿಸಿ ಎಂದು ಮನವಿ ಮಾಡಿದ್ದಾರೆ.

ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕೂಡ ಸರ್ಕಾರ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಆಗ್ರಹಿಸಿದ್ದಾರೆ. “5,8,9,11 ತರಗತಿಗಳಿಗೆ ಬೋರ್ಡ್ ಪರೀಕ್ಷೆ ರದ್ದು ಮಾಡಿರುವ ಹೈಕೋರ್ಟ್ ಆದೇಶ ಸರಿಯಾಗಿದೆ. ಇದನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸುವ ನಿರ್ಧಾರ ಸರಿಯಲ್ಲ. ಕೋವಿಡ್ ಕಾಲದಲ್ಲಿ ಶೈಕ್ಷಣಿಕವಾಗಿ ನರಳಿರುವ ಮಕ್ಕಳನ್ನು ಹಿಂಸಿಸಬೇಡಿ. ಪ್ರತಿಷ್ಠೆ ಬೇಡ, ಮಕ್ಕಳ ಹಿತಾಸಕ್ತಿಯಷ್ಟೇ ಮುಖ್ಯ” ಎಂದಿದ್ದಾರೆ.

ಇದಲ್ಲದೆ ಸಾರ್ವಜನಿಕ ವಲಯದಲ್ಲೂ ಸರ್ಕಾರ ಹೈಕೋರ್ಟ್‌ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸದಂತೆ ಆಗ್ರಹಗಳು ಕೇಳಿ ಬಂದಿವೆ.

ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ:

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ದೊರೆತಿದೆ.

ಇಂದು(ಮಾ.7) ಮೇಲ್ಮನವಿ ಸಲ್ಲಿಸಿ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಏಕ ಸದಸ್ಯ ಪೀಠದ ಆದೇಶಕ್ಕೆ ಹೇಗಾದರು ತಡೆಯಾಜ್ಞೆ ತಂದು ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ನಾಲ್ಕೂ ತರಗತಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ. ಮಾರ್ಚ್ 9 ರಿಂದ 11 ರವರೆಗೆ ಬೋರ್ಡ್‌ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ.

ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಂ ನಡೆಸುವ ಚಿಂತನೆ ಮಾಡಿತ್ತು. ಆದರೆ, ಇದಕ್ಕೆ ಹೈಕೋರ್ಟ್ ತಡೆ ನೀಡಿದೆ. ಪ್ರಸ್ತುತ ರಾಜ್ಯದಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಬೇರೆ ತರಗತಿಯ ಮಕ್ಕಳಿಗೂ ಬೋರ್ಡ್ ಪರೀಕ್ಷೆ ನಡೆಸಿದರೆ, ಮಕ್ಕಳ ಮೇಲೆ ಒತ್ತಡ ಬೀಳುತ್ತದೆ ಎಂದು ಶಿಕ್ಷಣ ತಜ್ಞರು, ಪೋಷಕರು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 5,8,9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್‌ ಮಹತ್ವದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...