Homeಮುಖಪುಟ#StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

#StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ. ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿಯೇ, 37,000 ಜನ ಇಷ್ಟಪಟ್ಟರೆ 70,000 ಜನ ತಿರಸ್ಕರಿಸಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರವನ್ನು ಯೂಟ್ಯೂಬ್‌ನಲ್ಲಿ ಅತಿಹೆಚ್ಚು ಸಂಖ್ಯೆಯ ಜನರು ಡಿಸ್ ಲೈಕ್ ಮಾಡಿರುವ ಬೆನ್ನಲ್ಲೇ ಟ್ವಿಟರ್ ನಲ್ಲಿ #StudentsDislikePMModi ಹ್ಯಾಸ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ನಿನ್ನೆ ಮನ್ ಕಿ ಬಾತ್ ಪ್ರಸಾರವಾದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

#StudentsDislikePMModi ಎಂದು ಟ್ವಿಟರ್ ನಲ್ಲಿ ಆರಂಭವಾಗಿರುವ ಅಭಿಯಾನ ಟ್ರೆಂಡಿಂಗ್ ನಲ್ಲಿ 3ನೇ ಸ್ಥಾನದಲ್ಲಿದೆ. ಸುಮಾರು 6,60,000 ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಜೆ ಎನ್ ಯು ವಿದ್ಯಾರ್ಥಿಗಳ ಸಂಘದ ಮಾಜಿ ಅಧ್ಯಕ್ಷರಾದ ಸುಚೇತ ಡಿ, “ಹಲವು ವಿದ್ಯಾರ್ಥಿಗಳು ಪ್ರವೇಶಾತಿ ಪತ್ರವನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರ ಅರ್ಥ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕು ಎಂಬುದಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಈಗ ಲಕ್ಷಾಂತರ ವಿದ್ಯಾರ್ಥಿಗಳು #StudentsDislikePMModi ಎಂದು ಹೇಳುತ್ತಿದ್ದಾರೆ. ಇದರ ಅರ್ಥ ಮೋದಿಯವರು ರಾಜಿನಾಮೆ ಕೊಡಬೇಕು ಎಂಬುದಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಮೊನಿಸ್ ಖಾನ್ ಎನ್ನುವವರು “ಇದು ಯುವಪಡೆಯ ಶಕ್ತಿ. ಯುವಜನರು ನಿಮ್ಮಂಥವರನ್ನು ಎಂದಿಗೂ ಇಷ್ಟಪಡುವುದಿಲ್ಲ” ಎಂದು ಬರೆದು, ಜಗತ್ತಿನ ಅತಿ ಹೆಚ್ಚು ಡಿಸ್ ಲೈಕ್ ಪಡೆದ ಪ್ರಧಾನಿ ವೀಡಿಯೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಆ ವಿಡಿಯೋಗೆ 71,000 ಜನರು ಲೈಕ್ ಒತ್ತಿದರೆ, 4,85,000 ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇನ್ನು ಪ್ರಧಾನಿ ಕಛೇರಿಯ ಅಧಿಕೃತ ಯೂಟ್ಯೂಬ್‌ನಲ್ಲಿ 37,000 ಜನ ಇಷ್ಟಪಟ್ಟರೆ 70,000 ಜನ ತಿರಸ್ಕರಿಸಿದ್ದಾರೆ. ಒಟ್ಟಿನಲ್ಲಿ ಎಲ್ಲಾ ವೇದಿಕೆಗಳಲ್ಲಿಯೂ ಮೋದಿಯವರ ಮನ್‌ಕಿ ಬಾತ್‌ಗೆ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳೇ ಅಧಿಕವಾಗಿವೆ.

ಡಿಸ್ಲೈಕ್ ನೊಂದಿಗೆ, “ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದು, ಮನ್ ಕಿ ಬಾತ್ ಬಿಟ್ಟು, ಕಾಮ್ ಕಿ ಬಾತ್ ಹೇಳಿ ಎಂಬ ಕಾಮೆಂಟ್‌ಗಳು ಬಂದಿವೆ. ಗೊಂಬೆಗಳ ಬದಲು ಸಮಸ್ಯೆಗಳ ಬಗ್ಗೆ ಮಾತನಾಡಿ, ಪರಿಹಾರ ನೀಡಿ” ಎಂಬಂತ ಕಾಮೆಂಟ್‌ಗಳು ಬರತೊಡಗಿದವು.

ಯೂಟ್ಯೂಬ್‌ನಲ್ಲಿ ಕಾಮೆಂಟ್‌ಗಳಲ್ಲಿ ಪ್ರಶ್ನೆಗಳು ಹೆಚ್ಚಾಗತೊಡಗಿದಂತೆ ಬಿಜೆಪಿಯು ತಕ್ಷಣ ಕಾಮೆಂಟ್‌ಗಳನ್ನು ಸಾರ್ವಜನಿಕರಿಗೆ ಕಾಣಿಸದಂತೆ ಮರೆಮಾಚಿದೆ. ಜನ ಅದಕ್ಕೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟು ದಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪರೀಕ್ಷೆ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಿನ್ನೆಯಿಂದ ನಡೆಯುತ್ತಿರುವ ಈ ಡಿಸ್‌ಲೈಕ್ ಪ್ರಕ್ರಿಯೇ ಇಡೀ ದೇಶದ ಜನರು ಕೂಡ ಪರೀಕ್ಷೆ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಗೆ ಭಾರೀ ವಿರೋಧ ಇದೆ ಎಂಬುದನ್ನು ಸಾಬೀತುಪಡಿಸುತ್ತಿದೆ. ನಾಳೆಯಿಂದ ಜೆಇಇ ಪರೀಕ್ಷೆ ಆರಂಭವಾಗಲಿದೆ.


ಇದನ್ನೂ ಓದಿ: ಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...