Homeಮುಖಪುಟಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಅಖಿಲೇಶ್‌ ಯಾದವ್‌

- Advertisement -
- Advertisement -

ಲಖನೌದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ್‍ಯಾಲಿಯಲ್ಲಿ ಸಿಎಎ ಕುರಿತು ಧೈರ್‍ಯವಿದ್ದರೆ ಚರ್ಚೆಗೆ ಬನ್ನಿ ಎಂದು ಗೃಹ ಸಚಿವ ಅಮಿತ್ ಸವಾಲು ಹಾಕಿದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯೊಂದಿಗೆ ಚರ್ಚಿಗೆ ಸಿದ್ಧ ಎಂದು  ಸವಾಲು ಸ್ವೀಕರಿಸಿದ್ದಾರೆ. ಆದರೆ ಚರ್ಚಾ ವಿಷಯ ಮಾತ್ರ ಅಭಿವೃದ್ಧಿಯಾಗಿರಲಿ ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಅಗಲಿದ ನಾಯಕ ಜಾನೇಶ್ವರ್ ಮಿಶ್ರಾ ಅವರ 10 ನೇ ನಿಧನ ವಾರ್ಷಿಕೋತ್ಸವದಂದು ಗೌರವ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚರ್ಚೆಯ ಸ್ಥಳ ಮತ್ತು ಸಮಯವನ್ನು ಬಿಜೆಪಿ ನಿರ್ಧರಿಸಲಿ ಮತ್ತು ನಾನು ಅಲ್ಲಿಗೆ ತಲುಪುತ್ತೇನೆ. ಆದರೆ ಚರ್ಚೆಯ ವಿಷಯವೆಂದರೆ ಅಭಿವೃದ್ಧಿ, ಉದ್ಯೋಗ, ಯುವಜನರು, ರೈತರು ಇತ್ಯಾದಿಗಳಾಗಿರಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಅಲ್ಲದೇ ನೈಜ ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ವಿಭಜಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಅಖಿಲೇಶ್ ಯಾದವ್‌ ಆರೋಪಿಸಿದ್ದಾರೆ.

ಸಿಎಎ ಕುರಿತು ಚರ್ಚೆ ನಡೆಸುವಂತೆ ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಇತರ ವಿರೋಧ ಪಕ್ಷಗಳ ಮುಖಂಡರಿಗೆ ಅಮಿತ್‌ ಶಾ ಮಂಗಳವಾರ ಸವಾಲು ಹಾಕಿದ್ದರು.

ಷಾ ಅವರ ಟೀಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಅಖಿಲೇಶ್ ಬಿಜೆಪಿ ಮುಖಂಡರರು ಬಳಸುವ ಭಾಷೆಯನ್ನು ನೋಡಿದರೆ ಅವರು ರಾಜಕಾರಣಿಗಳು ಎನಿಸುವುದಿಲ್ಲ. ಸಿಎಎಯನ್ನು ಸಮಾಜವಾದಿ ಪಕ್ಷ ಮಾತ್ರ ವಿರೋಧಿಸುತ್ತಿಲ್ಲ. ಬದಲಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾಮಾನ್ಯ ನಾಗರಿಕರು ಸಹ ಈ ‘ತಾರತಮ್ಯ’ ಕಾನೂನನ್ನು ವಿರೋಧಿಸಿ ರಸ್ತೆಗಳಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

“ಧರ್ಮದ ಆಧಾರದ ಮೇಲೆ ಬಿಜೆಪಿ ನಾಗರಿಕರ ವಿರುದ್ಧ ಎಷ್ಟು ಸಮಯದವರೆಗೆ ತಾರತಮ್ಯವನ್ನು ಮುಂದುವರಿಸುತ್ತದೆ?” ಎಂದು ಯಾದವ್ ಪ್ರಶ್ನಿಸಿದ ಅವರು “ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು ಅಮಿತ್‌ ಶಾರವರ ಸವಾಲಿಗೆ ಬಹಳಷ್ಟು ಜನ ಟ್ರೋಲ್‌ ಮಾಡಿದ್ದಾರೆ. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್‌ “ಶಾಹೀನ್‌ಬಾಗ್‌ನ ದಬಾಂಗ್ ದಾದಿಗಳೊಂದಿಗೆ ಸಿಎಎ ಕುರಿತು ಸಾರ್ವಜನಿಕ ಚರ್ಚೆಯನ್ನು ನಡೆಸಲು, ಶಾಹೀನ್ ಬಾಗ್‌ನಲ್ಲಿ ಕೆಲವು ದಿನಗಳನ್ನು ಕಳೆಯಲು ಧೈರ್ಯವಿದೆಯೇ ಅಮಿತ್‌ ಶಾ” ಎಂದು ಟ್ವೀಟ್‌ ಮಾಡಿದ್ದಾರೆ.

ಐಎಎಸ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಧಿಕಾರಿ ಕಣ್ಣನ್‌ ಗೋಪಿನಾಥ್‌ “ಪ್ರೀತಿಯ ಅಮಿತ್‌ಶಾ, ನೀವು ಸಿಎಎ ಕುರಿತು ಚರ್ಚೆ ಮಾಡಲು ಬಯಸಿದ್ದೀರಿ ಎಂದು ಕೇಳಿದೆ. “ನಿಮ್ಮ ಕೈಲಾದ ಮಟ್ಟದಲ್ಲಿ ನೀವು ಚರ್ಚಿಸಲು ಪ್ರಯತ್ನಿಸಿದರೆ ಆ ತಾಜಿಂದರ್‌ ಬಗ್ಗ ಎಂಬ ಹುಡುನೊಂದಿಗೆ ಚರ್ಚೆ ಮಾಡಿ ಎಂದು ನಾನು ಸಲಹೆ ನೀಡುತ್ತೇನೆ. ಯಾರು ಗೆದ್ದರೂ, ನನ್ನ ಕಡೆಯಿಂದ ಬಣ್ಣ ಪುಸ್ತಕ ಕೊಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪೋಲ್‌ ಒಂದನ್ನು ಕ್ರಿಯೇಟ್‌ ಮಾಡಿ, “ಸಿಎಎ, ಎನ್‌ಆರ್‌ಸಿ ಕುರಿತು ಕನ್ನಯ್ಯ ಕುಮಾರ್‌ರವರೊಂದಿಗೆ ಚರ್ಚೆ ನಡೆಸಲು ಅಮಿತ್‌ ಶಾಗೆ ಧೈರ್ಯವಿದೆಯೇ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಹೌದು ಎಂದು ಶೇ.12% ಜನ ಹೇಳಿದರೆ, ಇಲ್ಲ ಅವರಿಗೆ ಭಯವಿದೆ ಎಂದು 88% ಜನ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...