Homeಮುಖಪುಟಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಅಖಿಲೇಶ್‌ ಯಾದವ್‌

- Advertisement -
- Advertisement -

ಲಖನೌದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ್‍ಯಾಲಿಯಲ್ಲಿ ಸಿಎಎ ಕುರಿತು ಧೈರ್‍ಯವಿದ್ದರೆ ಚರ್ಚೆಗೆ ಬನ್ನಿ ಎಂದು ಗೃಹ ಸಚಿವ ಅಮಿತ್ ಸವಾಲು ಹಾಕಿದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯೊಂದಿಗೆ ಚರ್ಚಿಗೆ ಸಿದ್ಧ ಎಂದು  ಸವಾಲು ಸ್ವೀಕರಿಸಿದ್ದಾರೆ. ಆದರೆ ಚರ್ಚಾ ವಿಷಯ ಮಾತ್ರ ಅಭಿವೃದ್ಧಿಯಾಗಿರಲಿ ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಅಗಲಿದ ನಾಯಕ ಜಾನೇಶ್ವರ್ ಮಿಶ್ರಾ ಅವರ 10 ನೇ ನಿಧನ ವಾರ್ಷಿಕೋತ್ಸವದಂದು ಗೌರವ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚರ್ಚೆಯ ಸ್ಥಳ ಮತ್ತು ಸಮಯವನ್ನು ಬಿಜೆಪಿ ನಿರ್ಧರಿಸಲಿ ಮತ್ತು ನಾನು ಅಲ್ಲಿಗೆ ತಲುಪುತ್ತೇನೆ. ಆದರೆ ಚರ್ಚೆಯ ವಿಷಯವೆಂದರೆ ಅಭಿವೃದ್ಧಿ, ಉದ್ಯೋಗ, ಯುವಜನರು, ರೈತರು ಇತ್ಯಾದಿಗಳಾಗಿರಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಅಲ್ಲದೇ ನೈಜ ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ವಿಭಜಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಅಖಿಲೇಶ್ ಯಾದವ್‌ ಆರೋಪಿಸಿದ್ದಾರೆ.

ಸಿಎಎ ಕುರಿತು ಚರ್ಚೆ ನಡೆಸುವಂತೆ ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಇತರ ವಿರೋಧ ಪಕ್ಷಗಳ ಮುಖಂಡರಿಗೆ ಅಮಿತ್‌ ಶಾ ಮಂಗಳವಾರ ಸವಾಲು ಹಾಕಿದ್ದರು.

ಷಾ ಅವರ ಟೀಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಅಖಿಲೇಶ್ ಬಿಜೆಪಿ ಮುಖಂಡರರು ಬಳಸುವ ಭಾಷೆಯನ್ನು ನೋಡಿದರೆ ಅವರು ರಾಜಕಾರಣಿಗಳು ಎನಿಸುವುದಿಲ್ಲ. ಸಿಎಎಯನ್ನು ಸಮಾಜವಾದಿ ಪಕ್ಷ ಮಾತ್ರ ವಿರೋಧಿಸುತ್ತಿಲ್ಲ. ಬದಲಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾಮಾನ್ಯ ನಾಗರಿಕರು ಸಹ ಈ ‘ತಾರತಮ್ಯ’ ಕಾನೂನನ್ನು ವಿರೋಧಿಸಿ ರಸ್ತೆಗಳಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

“ಧರ್ಮದ ಆಧಾರದ ಮೇಲೆ ಬಿಜೆಪಿ ನಾಗರಿಕರ ವಿರುದ್ಧ ಎಷ್ಟು ಸಮಯದವರೆಗೆ ತಾರತಮ್ಯವನ್ನು ಮುಂದುವರಿಸುತ್ತದೆ?” ಎಂದು ಯಾದವ್ ಪ್ರಶ್ನಿಸಿದ ಅವರು “ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು ಅಮಿತ್‌ ಶಾರವರ ಸವಾಲಿಗೆ ಬಹಳಷ್ಟು ಜನ ಟ್ರೋಲ್‌ ಮಾಡಿದ್ದಾರೆ. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್‌ “ಶಾಹೀನ್‌ಬಾಗ್‌ನ ದಬಾಂಗ್ ದಾದಿಗಳೊಂದಿಗೆ ಸಿಎಎ ಕುರಿತು ಸಾರ್ವಜನಿಕ ಚರ್ಚೆಯನ್ನು ನಡೆಸಲು, ಶಾಹೀನ್ ಬಾಗ್‌ನಲ್ಲಿ ಕೆಲವು ದಿನಗಳನ್ನು ಕಳೆಯಲು ಧೈರ್ಯವಿದೆಯೇ ಅಮಿತ್‌ ಶಾ” ಎಂದು ಟ್ವೀಟ್‌ ಮಾಡಿದ್ದಾರೆ.

ಐಎಎಸ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಧಿಕಾರಿ ಕಣ್ಣನ್‌ ಗೋಪಿನಾಥ್‌ “ಪ್ರೀತಿಯ ಅಮಿತ್‌ಶಾ, ನೀವು ಸಿಎಎ ಕುರಿತು ಚರ್ಚೆ ಮಾಡಲು ಬಯಸಿದ್ದೀರಿ ಎಂದು ಕೇಳಿದೆ. “ನಿಮ್ಮ ಕೈಲಾದ ಮಟ್ಟದಲ್ಲಿ ನೀವು ಚರ್ಚಿಸಲು ಪ್ರಯತ್ನಿಸಿದರೆ ಆ ತಾಜಿಂದರ್‌ ಬಗ್ಗ ಎಂಬ ಹುಡುನೊಂದಿಗೆ ಚರ್ಚೆ ಮಾಡಿ ಎಂದು ನಾನು ಸಲಹೆ ನೀಡುತ್ತೇನೆ. ಯಾರು ಗೆದ್ದರೂ, ನನ್ನ ಕಡೆಯಿಂದ ಬಣ್ಣ ಪುಸ್ತಕ ಕೊಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪೋಲ್‌ ಒಂದನ್ನು ಕ್ರಿಯೇಟ್‌ ಮಾಡಿ, “ಸಿಎಎ, ಎನ್‌ಆರ್‌ಸಿ ಕುರಿತು ಕನ್ನಯ್ಯ ಕುಮಾರ್‌ರವರೊಂದಿಗೆ ಚರ್ಚೆ ನಡೆಸಲು ಅಮಿತ್‌ ಶಾಗೆ ಧೈರ್ಯವಿದೆಯೇ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಹೌದು ಎಂದು ಶೇ.12% ಜನ ಹೇಳಿದರೆ, ಇಲ್ಲ ಅವರಿಗೆ ಭಯವಿದೆ ಎಂದು 88% ಜನ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...