Homeಮುಖಪುಟಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಅಖಿಲೇಶ್‌ ಯಾದವ್‌

- Advertisement -
- Advertisement -

ಲಖನೌದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ್‍ಯಾಲಿಯಲ್ಲಿ ಸಿಎಎ ಕುರಿತು ಧೈರ್‍ಯವಿದ್ದರೆ ಚರ್ಚೆಗೆ ಬನ್ನಿ ಎಂದು ಗೃಹ ಸಚಿವ ಅಮಿತ್ ಸವಾಲು ಹಾಕಿದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯೊಂದಿಗೆ ಚರ್ಚಿಗೆ ಸಿದ್ಧ ಎಂದು  ಸವಾಲು ಸ್ವೀಕರಿಸಿದ್ದಾರೆ. ಆದರೆ ಚರ್ಚಾ ವಿಷಯ ಮಾತ್ರ ಅಭಿವೃದ್ಧಿಯಾಗಿರಲಿ ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಅಗಲಿದ ನಾಯಕ ಜಾನೇಶ್ವರ್ ಮಿಶ್ರಾ ಅವರ 10 ನೇ ನಿಧನ ವಾರ್ಷಿಕೋತ್ಸವದಂದು ಗೌರವ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚರ್ಚೆಯ ಸ್ಥಳ ಮತ್ತು ಸಮಯವನ್ನು ಬಿಜೆಪಿ ನಿರ್ಧರಿಸಲಿ ಮತ್ತು ನಾನು ಅಲ್ಲಿಗೆ ತಲುಪುತ್ತೇನೆ. ಆದರೆ ಚರ್ಚೆಯ ವಿಷಯವೆಂದರೆ ಅಭಿವೃದ್ಧಿ, ಉದ್ಯೋಗ, ಯುವಜನರು, ರೈತರು ಇತ್ಯಾದಿಗಳಾಗಿರಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಅಲ್ಲದೇ ನೈಜ ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ವಿಭಜಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಅಖಿಲೇಶ್ ಯಾದವ್‌ ಆರೋಪಿಸಿದ್ದಾರೆ.

ಸಿಎಎ ಕುರಿತು ಚರ್ಚೆ ನಡೆಸುವಂತೆ ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಇತರ ವಿರೋಧ ಪಕ್ಷಗಳ ಮುಖಂಡರಿಗೆ ಅಮಿತ್‌ ಶಾ ಮಂಗಳವಾರ ಸವಾಲು ಹಾಕಿದ್ದರು.

ಷಾ ಅವರ ಟೀಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಅಖಿಲೇಶ್ ಬಿಜೆಪಿ ಮುಖಂಡರರು ಬಳಸುವ ಭಾಷೆಯನ್ನು ನೋಡಿದರೆ ಅವರು ರಾಜಕಾರಣಿಗಳು ಎನಿಸುವುದಿಲ್ಲ. ಸಿಎಎಯನ್ನು ಸಮಾಜವಾದಿ ಪಕ್ಷ ಮಾತ್ರ ವಿರೋಧಿಸುತ್ತಿಲ್ಲ. ಬದಲಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾಮಾನ್ಯ ನಾಗರಿಕರು ಸಹ ಈ ‘ತಾರತಮ್ಯ’ ಕಾನೂನನ್ನು ವಿರೋಧಿಸಿ ರಸ್ತೆಗಳಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

“ಧರ್ಮದ ಆಧಾರದ ಮೇಲೆ ಬಿಜೆಪಿ ನಾಗರಿಕರ ವಿರುದ್ಧ ಎಷ್ಟು ಸಮಯದವರೆಗೆ ತಾರತಮ್ಯವನ್ನು ಮುಂದುವರಿಸುತ್ತದೆ?” ಎಂದು ಯಾದವ್ ಪ್ರಶ್ನಿಸಿದ ಅವರು “ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು ಅಮಿತ್‌ ಶಾರವರ ಸವಾಲಿಗೆ ಬಹಳಷ್ಟು ಜನ ಟ್ರೋಲ್‌ ಮಾಡಿದ್ದಾರೆ. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್‌ “ಶಾಹೀನ್‌ಬಾಗ್‌ನ ದಬಾಂಗ್ ದಾದಿಗಳೊಂದಿಗೆ ಸಿಎಎ ಕುರಿತು ಸಾರ್ವಜನಿಕ ಚರ್ಚೆಯನ್ನು ನಡೆಸಲು, ಶಾಹೀನ್ ಬಾಗ್‌ನಲ್ಲಿ ಕೆಲವು ದಿನಗಳನ್ನು ಕಳೆಯಲು ಧೈರ್ಯವಿದೆಯೇ ಅಮಿತ್‌ ಶಾ” ಎಂದು ಟ್ವೀಟ್‌ ಮಾಡಿದ್ದಾರೆ.

ಐಎಎಸ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಧಿಕಾರಿ ಕಣ್ಣನ್‌ ಗೋಪಿನಾಥ್‌ “ಪ್ರೀತಿಯ ಅಮಿತ್‌ಶಾ, ನೀವು ಸಿಎಎ ಕುರಿತು ಚರ್ಚೆ ಮಾಡಲು ಬಯಸಿದ್ದೀರಿ ಎಂದು ಕೇಳಿದೆ. “ನಿಮ್ಮ ಕೈಲಾದ ಮಟ್ಟದಲ್ಲಿ ನೀವು ಚರ್ಚಿಸಲು ಪ್ರಯತ್ನಿಸಿದರೆ ಆ ತಾಜಿಂದರ್‌ ಬಗ್ಗ ಎಂಬ ಹುಡುನೊಂದಿಗೆ ಚರ್ಚೆ ಮಾಡಿ ಎಂದು ನಾನು ಸಲಹೆ ನೀಡುತ್ತೇನೆ. ಯಾರು ಗೆದ್ದರೂ, ನನ್ನ ಕಡೆಯಿಂದ ಬಣ್ಣ ಪುಸ್ತಕ ಕೊಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪೋಲ್‌ ಒಂದನ್ನು ಕ್ರಿಯೇಟ್‌ ಮಾಡಿ, “ಸಿಎಎ, ಎನ್‌ಆರ್‌ಸಿ ಕುರಿತು ಕನ್ನಯ್ಯ ಕುಮಾರ್‌ರವರೊಂದಿಗೆ ಚರ್ಚೆ ನಡೆಸಲು ಅಮಿತ್‌ ಶಾಗೆ ಧೈರ್ಯವಿದೆಯೇ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಹೌದು ಎಂದು ಶೇ.12% ಜನ ಹೇಳಿದರೆ, ಇಲ್ಲ ಅವರಿಗೆ ಭಯವಿದೆ ಎಂದು 88% ಜನ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...