Homeಮುಖಪುಟಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

- Advertisement -
- Advertisement -

ಸರ್ವಧರ್ಮ ಸಮಭಾವವನ್ನು (Secularism) ಪ್ರತಿಪಾದಿಸುವ ಬೇರೆಲ್ಲಾ ರಾಷ್ಟ್ರಗಳಂತೆಯೇ, ಭಾರತಕ್ಕೂ ಕೂಡ ತನ್ನ ಶಿಕ್ಷಣ ವ್ಯವಸ್ಥೆಯಲ್ಲಿ ಧರ್ಮಕ್ಕೆ ಯಾವ ಸ್ಥಾನವಿರಬೇಕು ಎಂದು ನಿರ್ಧರಿಸಲು ತನ್ನದೇ ಆದ ಹಲವು ಸವಾಲುಗಳಿದ್ದವು. ಸ್ವಾತಂತ್ರ್ಯಾನಂತರದಲ್ಲಿ, ಭಾರತವು ಕೈಗೊಂಡ ಸರ್ವಧರ್ಮ ಸಮಭಾವದ ನಿಲುವು ಧರ್ಮವನ್ನು ಪ್ರಭುತ್ವದಿಂದ (ರಾಜ್ಯಾಂಗ) ಬೇರ್ಪಡಿಸಲು ಉದ್ದೇಶಿಸಿತು. ಆದರೂ, ಸರ್ವಧರ್ಮ ಸಮಭಾವದ ಭಾರತೀಯ ಆವೃತ್ತಿಯು ತನ್ನ ಸಂಕೀರ್ಣತೆಯನ್ನೂ ಮತ್ತು ’ಬಹು-ಮೌಲಿಕತೆ’ಯನ್ನೂ ಉಳಿಸಿಕೊಂಡಿತು. ಪ್ರಭುತ್ವದ ನಿಲುವುಗಳು ಮತ್ತು ಪರಿಣಾಮಕಾರಿ ಕಲಿಕೆಗಿರುವ ಬೇಡಿಕೆಯಿಂದಾಗಿ, ಈ ಸಂಕೀರ್ಣತೆಯು ಶಿಕ್ಷಣ ವ್ಯವಸ್ಥೆಯಲ್ಲಿಯೂ ಪ್ರತಿಧ್ವನಿಸಿತು.

ಸೋಶಿಯಲ್ ಕ್ಯಾರೆಕ್ಟರ್ ಆಫ್ ಲರ್ನಿಂಗ್ ಎಂಬ ಪುಸ್ತಕದಲ್ಲಿ ಎನ್.ಸಿ.ಈ.ಆರ್.ಟಿಯ ಮಾಜಿ ನಿರ್ದೇಶಕರಾದ ಕೃಷ್ಣ ಕುಮಾರರು, ಹೇಗೆ ಶಿಕ್ಷಣ ವ್ಯವಸ್ಥೆಗಳು ಶಿಕ್ಷಣಾರ್ಥಿಯ ಸಾಮಾಜಿಕ ಅಸ್ಮಿತೆಯೊಂದಿಗೆ ತಳುಕುಹಾಕಿಕೊಂಡಿರುತ್ತವೆ ಎಂಬುದನ್ನು ತಿಳಿಸುತ್ತಾರೆ. ಶಿಕ್ಷಣಾರ್ಥಿಗಳ ಮನೆಯ ಮತ್ತು ಸಾಮುದಾಯಿಕ ಮೌಲ್ಯಗಳನ್ನು ತರಗತಿಗೆ ಕೊಂಡುಬರುವುದು ಅವರ ಕಲಿಕೆಯಲ್ಲಿ ಒಂದು ಸಕಾರಾತ್ಮಕ ಪಾತ್ರ ವಹಿಸುತ್ತದೆ. ಭಾರತದ ಶಿಕ್ಷಣ ನೀತಿಗಳು ಶಿಕ್ಷಣ ಹಾಗೂ ಸಾಮುದಾಯಿಕ ಅನುಭವಗಳ ನಡುವಿನ ಸಂಬಂಧವನ್ನು ಗುರುತಿಸುತ್ತವೆ ಮತ್ತು ತರಗತಿಗಳ ಸಂಸ್ಕೃತಿಯಲ್ಲಿ ಅವುಗಳ ಪ್ರಾಮುಖ್ಯತೆಯನ್ನು ಇದು ವಿವರಿಸುತ್ತದೆ.

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು [ನ್ಯಾಷನಲ್ ಕರಿಕ್ಯುಲಮ್ ಫ್ರೇಮ್ ವರ್ಕ್ (2000, 2005)] ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯು (2020) ವಿವಿಧ ಧರ್ಮಗಳ ಬಗ್ಗೆ ಅರಿವು ಮೂಡಿಸುವ ಹಾದಿಯಲ್ಲಿ ಎಲ್ಲಾ ಧರ್ಮಗಳನ್ನು ಗೌರವಯುತವಾಗಿ ಕಾಣುವುದನ್ನು ಶಿಫಾರಸ್ಸು ಮಾಡುತ್ತದೆ. ಜಿಲ್ಲಾ ಪ್ರಾಥಮಿಕ ಶಿಕ್ಷಣ ಕಾರ್ಯಕ್ರಮ (ಡಿಸ್ಟ್ರಿಕ್ಟ್ ಪ್ರೈಮರಿ ಎಜುಕೇಷನ್ ಪ್ರೋಗ್ರಾಮ್ – ಡಿ.ಪಿ.ಈ.ಪಿ) ಮತ್ತು ಶಾಲಾ ಆಡಳಿತ ಸಮಿತಿ (ಸ್ಕೂಲ್ ಮ್ಯಾನೇಜ್‌ಮೆಂಟ್ ಕಮಿಟಿ – ಎಸ್.ಎಂ.ಸಿ) ಮತ್ತು ಇತರೆ ಹಲವು ಕಾರ್ಯಕ್ರಮಗಳೂ ಕೂಡ ಸ್ಥಳೀಯರನ್ನು ಮತ್ತು ಸ್ಥಳೀಯ ಸೂಕ್ಷ್ಮತೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಒಳಗೊಳ್ಳುವ ಉದ್ದೇಶಗಳನ್ನು ಹೊಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯಲ್ಲಿ ಈ ರೀತಿಯ ಕಲಿಕಾ ವಾತಾವರಣವನ್ನು ಸೃಷ್ಟಿಸುವುದು ಎರಡು ರೀತಿಯಲ್ಲಿ ಉಪಕಾರಿಯಾಗುತ್ತದೆ. ಮೊದಲನೆಯದಾಗಿ, ಈ ರೀತಿಯ ವಾತಾವರಣವು ವಿದ್ಯಾರ್ಥಿಗಳಿಗೆ ದಿನನಿತ್ಯ ಜೀವನಾನುಭವದ ಉದಾಹರಣೆಗಳನ್ನು ನೀಡುವ ಮೂಲಕ ಅವರ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಎರಡನೆಯದಾಗಿ, ವಿದ್ಯಾರ್ಥಿಗಳು ತಮ್ಮ ಸಮುದಾಯದ ಅನುಭವಗಳನ್ನು ತರಗತಿಗಳಲ್ಲಿ ಹಂಚಿಕೊಳ್ಳುವುದು, ನಾವು ಅವರನ್ನು ಕೇವಲ ಅವರ ಬುದ್ಧಿಮತ್ತೆಗೆ ಮಾತ್ರವಲ್ಲದೇ, ಅವರನ್ನು ಇಡಿಯಾಗಿ ಅವರಿರುವಂತೆಯೇ ಸ್ವೀಕರಿಸುತ್ತೇವೆ ಎಂಬುದನ್ನೂ ತಿಳಿಸುತ್ತದೆ. ಇದು, ಅವರು ಯಾವುದೇ ಭಯ ಅಥವಾ ಅಳುಕಿಲ್ಲದೆ ಕಲಿಯಲು ಅನುವು ಮಾಡಿಕೊಡುತ್ತದೆ. ಈ ನಿಟ್ಟಿನಲ್ಲಿ, ವಿದ್ಯಾರ್ಥಿಗಳ ಹಿನ್ನೆಲೆಗಳು ಮತ್ತು ಅನುಭವಗಳು ಅವರ ಕಲಿಕೆಯನ್ನು ಹೆಚ್ಚಿಸುತ್ತದೆಯೇ ಹೊರತು ಕುಂದಿಸುವುದಿಲ್ಲ. ಹಾಗಾಗಿಯೇ, ಸ್ಪೇನ್, ಐಲೆಂಡ್, ಸ್ವೀಡನ್‌ಗಳಂತಹ ರಾಷ್ಟ್ರಗಳ ಸರ್ವಧರ್ಮ ಸಮಭಾವದ ಪಠ್ಯಕ್ರಮದಲ್ಲಿಯೂ (secular curriculum) ಕೂಡ ಧಾರ್ಮಿಕ ಮೌಲ್ಯಗಳು ಹಾಗೂ ನೀತಿಗಳು ಮತ್ತು ಧರ್ಮಗಳ ತೌಲನಿಕ ಅಧ್ಯಯನವನ್ನು ಒಳಗೊಂಡಿರುತ್ತದೆ. ಸ್ಪೇನಿನ ಸರ್ಕಾರಿ ಶಾಲೆಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಧಾರ್ಮಿಕ ಉಡುಪುಗಳ ಮತ್ತು ಸಂಕೇತಗಳ ಮೇರೆಗೆ ಯಾವುದೇ ರೀತಿಯ ನಿರ್ಬಂಧವನ್ನು ಹೇರದೆ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುತ್ತವೆ.

ಯಾವ ಶಿಕ್ಷಣ ವ್ಯವಸ್ಥೆಯು ಸಾಮಾಜಿಕ- ಸಾಂಸ್ಕೃತಿಕ ಅಥವಾ ಧಾರ್ಮಿಕ ಸಂಕೇತಗಳನ್ನು ಶಾಲೆಯಿಂದ ಹೊರಗಿಡಲು ಪ್ರಯತ್ನಿಸುತ್ತದೋ, ಅದು ಅಲ್ಪಸಂಖ್ಯಾತರ ಸಂಸ್ಕೃತಿಗಳನ್ನು ಕೆಳದರ್ಜೆಯವೆಂದೂ, ಕೀಳುಮಟ್ಟದ್ದೆಂದೂ ಚಿತ್ರಿಸುತ್ತದೆ. ಇದು ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಮೇಲೆ ಮಾನಸಿಕ ಹಿಂಸೆಯನ್ನೆಸಗಿ ಅವರ ಕಲಿಕೆಯನ್ನು ಕುಂಠಿತಗೊಳಿಸುತ್ತದೆ. ಇದರಿಂದಾಗಿ, ಶೋಷಿತ ಸಮುದಾಯವನ್ನು ಸುಧಾರಿಸುವ ಗುರಿಹೊಂದಿದ ಶಿಕ್ಷಣ ವ್ಯವಸ್ಥೆಯೇ ಅವರ ಸ್ವಂತಿಕೆಯನ್ನು ಹಾಳುಗೆಡವಿ ಅವರನ್ನು ಇನ್ನಷ್ಟು ದೂರತಳ್ಳುತ್ತದೆ. ಅಮೆರಿಕ ಮತ್ತು ಫ್ರಾನ್ಸ್ ದೇಶಗಳು ಇದಕ್ಕೆ ಉದಾಹರಣೆಗಳಾಗಿವೆ.

ಈ ದೇಶಗಳು ಧರ್ಮವನ್ನು ಶಿಕ್ಷಣದಿಂದ ಸಂಪೂರ್ಣವಾಗಿ ಬೇರ್ಪಡಿಸಲಿಕ್ಕೆ ಪ್ರಯತ್ನಿಸಿದರೂ, ತಮ್ಮ ಶಾಲೆಗಳಲ್ಲಿ ಧಾರ್ಮಿಕ ಮೌಲ್ಯಗಳು ಮತ್ತು ಸಂಕೇತಗಳು ಯಥೇಚ್ಛವಾಗಿಯೇ ಕಂಡುಬರುವುದನ್ನು ಸಂಶೋಧಕರು ಗುರುತಿಸಿದ್ದಾರೆ. ಬಹುಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಮೌಲ್ಯಗಳು ಹಾಗೂ ಸಂಕೇತಗಳನ್ನು ಶಾಲೆಯ ಅಂಗಳಕ್ಕೆ ಹೊತ್ತು ತರುವ ಬಗ್ಗೆ ಯಾವುದೇ ಆಕ್ಷೇಪಣೆಗಳಿರುವುದಿಲ್ಲ ಎಂಬುದು ಅಧ್ಯಯನಗಳಿಂದ ತಿಳಿದುಬಂದಿದೆ.

ಇದು ಭಾರತಕ್ಕೂ ಅನ್ವಯಿಸುತ್ತದೆ. ಧರ್ಮವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದು ಅವಿಭಾಜ್ಯ ಅಂಗವೇ ಆಗಿಹೋಗಿದೆ. ಶಾಲೆಗಳು ದಿನನಿತ್ಯ ಕಾರ್ಯ ನಿರ್ವಹಿಸುವ ರೀತಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಧಾರ್ಮಿಕ ಮೌಲ್ಯಗಳು, ಸಂಕೇತಗಳು ಮತ್ತು ಆಹಾರ ಪದ್ಧತಿಗಳು ಶಾಲೆಗಳ ಸಂಸ್ಕೃತಿಯ ಭಾಗವೇ ಆಗಿರುವುದನ್ನು ನಾವು ಗಮನಿಸಬಹುದಾಗಿದೆ. ದೀಪ ಬೆಳಗಿಸುವುದು, ಪೂಜೆಗಳು, ಸರಸ್ವತಿ ವಂದನೆಗಳು, ಗಣೇಶ ಸ್ತುತಿಗಳನ್ನೂ ಒಳಗೊಂಡಂತೆ ಅನೇಕ ಆಚರಣೆಗಳು ಸಾಮಾನ್ಯವಾಗಿ ಕಂಡುಬರುತ್ತದೆ. ಅಲ್ಲದೇ, ದಸರಾ ಮತ್ತು ದೀಪಾವಳಿಗೆ ದೀರ್ಘಕಾಲದ ರಜೆಗಳನ್ನೂ ನೀಡಲಾಗುತ್ತದೆ.

ಸರ್ವವ್ಯಾಪಿಯಾಗಿರುವ ಧಾರ್ಮಿಕ ಸಂಕೇತಗಳು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಎಷ್ಟು ಸಾಮಾನ್ಯಗೊಳಿಸಲಾಗಿದೆ (normalise) ಎಂದರೆ, ಅದನ್ನು ಯಾರೂ ಗಮನಿಸಲಾಗುವುದೂ ಇಲ್ಲ, ಪ್ರಶ್ನಿಸಲಾಗುವುದೂ ಇಲ್ಲ. ಬಹುಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಇವು ಸಾಮಾನ್ಯ ಎನಿಸಿದರೆ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಇದು ವಿಮುಖಗೊಳಿಸುತ್ತದೆ.

ಶಾಲೆಗಳು ವಿದ್ಯಾರ್ಥಿಗಳನ್ನು ಭವಿಷ್ಯದ ಸಮಾಜದಲ್ಲಿ ಬದುಕಲು ಕಲಿಸುವ ಕಿರು ಸಮಾಜಗಳೇ ಆಗಿವೆ. ಶಾಲೆಗಳ ಕಾರ್ಯಕಲಾಪಗಳಲ್ಲಿ ರೂಪುಗೊಳ್ಳಬೇಕಿರುವ ಪ್ರಜಾಪ್ರಭುತ್ವ ವ್ಯವಸ್ಥೆಯು ಮುಂದೆ ಅವರು ನಿರ್ವಹಿಸಬೇಕಾದ ಪಾತ್ರಗಳಿಗೆ ಸಜ್ಜುಗೊಳಿಸುತ್ತದೆ. ಶಾಲೆ ಅಥವಾ ಕಾಲೇಜುಗಳು ಕೆಲವೇ ಸಮುದಾಯಗಳ ಆಚಾರ ಮತ್ತು ಪದ್ಧತಿಗಳನ್ನು ಸ್ವಾಗತಿಸಿದರೆ, ಶಿಕ್ಷಕರು ಕೂಡ ತಮ್ಮ ಕಾರ್ಯ ಚಟುವಟಿಕೆಗಳಲ್ಲಿ ಅದೇ ಧಾರ್ಮಿಕ ಶ್ರೇಣೀಕರಣವನ್ನು ಸ್ಥಾಪಿಸುತ್ತಾರೆ ಮತ್ತು ಗಟ್ಟಿಗೊಳಿಸುತ್ತಾರೆ.

ಈ ರೀತಿಯ ಸಾಂಸ್ಕೃತಿಕ ಮತ್ತು ಧಾರ್ಮಿಕ ಶ್ರೇಷ್ಠತೆಯ ಪರಿಕಲ್ಪನೆಯಲ್ಲಿ ಬದುಕುವ-ಬೆಳೆಯುವ ವಿದ್ಯಾರ್ಥಿಗಳು, ಮುಂದೆ ನಾಗರಿಕರಾಗಿಯೂ ಅದನ್ನೇ ಮುಂದುವರೆಸುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ, ವಿದ್ಯಾರ್ಥಿ ಜೀವನದಲ್ಲಿ ಸಾಂಸ್ಕೃತಿಕ ಅಧೀನತೆಗೆ ಒಳಪಡುವ ಸಮುದಾಯವು ಪ್ರತ್ಯೇಕಗೊಳಿಸಿದ ಮತ್ತು ಒಂಟಿತನದ ಭಾವನೆಯನ್ನು ಹೊತ್ತು ಬೆಳೆಯುತ್ತದೆ. ಈ ರೀತಿಯ ನಿಷ್ಪ್ರಯೋಜಕ ಮತ್ತು ನಿರರ್ಥಕ
ಸಂದರ್ಭಗಳಲ್ಲಿ, ಮತ್ತದೇ ಶೋಷಿತ ಸಮುದಾಯವು ಬೆಳೆಯಲಿಕ್ಕೆ ಇಚ್ಛಸುತ್ತಿಲ್ಲವೆಂದೂ, ಮುಖ್ಯವಾಹಿನಿಯಲ್ಲಿ ಪಾಲ್ಗೊಳ್ಳುತ್ತಿಲ್ಲವೆಂದೂ ಎಂದೆಂದಿಗೂ ದೂಷಿಸಲ್ಪಡುತ್ತದೆ.

ಶೈಮಾ ಅಮತುಲ್ಲಾಹ್
ಬೆಂಗಳೂರಿನ ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಅಸ್ಮಿತೆಯ ಅನುಸಂಧಾನ ಎಂಬ ವಿಷಯದ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ.

ಶಾಲಿನಿ ದೀಕ್ಷಿತ್
ಬೆಂಗಳೂರಿನ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯ ಶಿಕ್ಷಣ ವಿಭಾಗದಲ್ಲಿ ಪ್ರಾಧ್ಯಾಪಕರು.

ಅನುವಾದ: ಶಶಾಂಕ್ ಎಸ್ ಆರ್

(ಈ ಲೇಖನವು ಮೊದಲು ಇಂಗ್ಲಿಷಿನಲ್ಲಿ, newsclick.in ಅಲ್ಲಿ ಪ್ರಕಟಗೊಂಡಿತ್ತು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...