Homeಮುಖಪುಟಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

- Advertisement -
- Advertisement -

ಸರ್ವಧರ್ಮ ಸಮಭಾವವನ್ನು (Secularism) ಪ್ರತಿಪಾದಿಸುವ ಬೇರೆಲ್ಲಾ ರಾಷ್ಟ್ರಗಳಂತೆಯೇ, ಭಾರತಕ್ಕೂ ಕೂಡ ತನ್ನ ಶಿಕ್ಷಣ ವ್ಯವಸ್ಥೆಯಲ್ಲಿ ಧರ್ಮಕ್ಕೆ ಯಾವ ಸ್ಥಾನವಿರಬೇಕು ಎಂದು ನಿರ್ಧರಿಸಲು ತನ್ನದೇ ಆದ ಹಲವು ಸವಾಲುಗಳಿದ್ದವು. ಸ್ವಾತಂತ್ರ್ಯಾನಂತರದಲ್ಲಿ, ಭಾರತವು ಕೈಗೊಂಡ ಸರ್ವಧರ್ಮ ಸಮಭಾವದ ನಿಲುವು ಧರ್ಮವನ್ನು ಪ್ರಭುತ್ವದಿಂದ (ರಾಜ್ಯಾಂಗ) ಬೇರ್ಪಡಿಸಲು ಉದ್ದೇಶಿಸಿತು. ಆದರೂ, ಸರ್ವಧರ್ಮ ಸಮಭಾವದ ಭಾರತೀಯ ಆವೃತ್ತಿಯು ತನ್ನ ಸಂಕೀರ್ಣತೆಯನ್ನೂ ಮತ್ತು ’ಬಹು-ಮೌಲಿಕತೆ’ಯನ್ನೂ ಉಳಿಸಿಕೊಂಡಿತು. ಪ್ರಭುತ್ವದ ನಿಲುವುಗಳು ಮತ್ತು ಪರಿಣಾಮಕಾರಿ ಕಲಿಕೆಗಿರುವ ಬೇಡಿಕೆಯಿಂದಾಗಿ, ಈ ಸಂಕೀರ್ಣತೆಯು ಶಿಕ್ಷಣ ವ್ಯವಸ್ಥೆಯಲ್ಲಿಯೂ ಪ್ರತಿಧ್ವನಿಸಿತು.

ಸೋಶಿಯಲ್ ಕ್ಯಾರೆಕ್ಟರ್ ಆಫ್ ಲರ್ನಿಂಗ್ ಎಂಬ ಪುಸ್ತಕದಲ್ಲಿ ಎನ್.ಸಿ.ಈ.ಆರ್.ಟಿಯ ಮಾಜಿ ನಿರ್ದೇಶಕರಾದ ಕೃಷ್ಣ ಕುಮಾರರು, ಹೇಗೆ ಶಿಕ್ಷಣ ವ್ಯವಸ್ಥೆಗಳು ಶಿಕ್ಷಣಾರ್ಥಿಯ ಸಾಮಾಜಿಕ ಅಸ್ಮಿತೆಯೊಂದಿಗೆ ತಳುಕುಹಾಕಿಕೊಂಡಿರುತ್ತವೆ ಎಂಬುದನ್ನು ತಿಳಿಸುತ್ತಾರೆ. ಶಿಕ್ಷಣಾರ್ಥಿಗಳ ಮನೆಯ ಮತ್ತು ಸಾಮುದಾಯಿಕ ಮೌಲ್ಯಗಳನ್ನು ತರಗತಿಗೆ ಕೊಂಡುಬರುವುದು ಅವರ ಕಲಿಕೆಯಲ್ಲಿ ಒಂದು ಸಕಾರಾತ್ಮಕ ಪಾತ್ರ ವಹಿಸುತ್ತದೆ. ಭಾರತದ ಶಿಕ್ಷಣ ನೀತಿಗಳು ಶಿಕ್ಷಣ ಹಾಗೂ ಸಾಮುದಾಯಿಕ ಅನುಭವಗಳ ನಡುವಿನ ಸಂಬಂಧವನ್ನು ಗುರುತಿಸುತ್ತವೆ ಮತ್ತು ತರಗತಿಗಳ ಸಂಸ್ಕೃತಿಯಲ್ಲಿ ಅವುಗಳ ಪ್ರಾಮುಖ್ಯತೆಯನ್ನು ಇದು ವಿವರಿಸುತ್ತದೆ.

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು [ನ್ಯಾಷನಲ್ ಕರಿಕ್ಯುಲಮ್ ಫ್ರೇಮ್ ವರ್ಕ್ (2000, 2005)] ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯು (2020) ವಿವಿಧ ಧರ್ಮಗಳ ಬಗ್ಗೆ ಅರಿವು ಮೂಡಿಸುವ ಹಾದಿಯಲ್ಲಿ ಎಲ್ಲಾ ಧರ್ಮಗಳನ್ನು ಗೌರವಯುತವಾಗಿ ಕಾಣುವುದನ್ನು ಶಿಫಾರಸ್ಸು ಮಾಡುತ್ತದೆ. ಜಿಲ್ಲಾ ಪ್ರಾಥಮಿಕ ಶಿಕ್ಷಣ ಕಾರ್ಯಕ್ರಮ (ಡಿಸ್ಟ್ರಿಕ್ಟ್ ಪ್ರೈಮರಿ ಎಜುಕೇಷನ್ ಪ್ರೋಗ್ರಾಮ್ – ಡಿ.ಪಿ.ಈ.ಪಿ) ಮತ್ತು ಶಾಲಾ ಆಡಳಿತ ಸಮಿತಿ (ಸ್ಕೂಲ್ ಮ್ಯಾನೇಜ್‌ಮೆಂಟ್ ಕಮಿಟಿ – ಎಸ್.ಎಂ.ಸಿ) ಮತ್ತು ಇತರೆ ಹಲವು ಕಾರ್ಯಕ್ರಮಗಳೂ ಕೂಡ ಸ್ಥಳೀಯರನ್ನು ಮತ್ತು ಸ್ಥಳೀಯ ಸೂಕ್ಷ್ಮತೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಒಳಗೊಳ್ಳುವ ಉದ್ದೇಶಗಳನ್ನು ಹೊಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯಲ್ಲಿ ಈ ರೀತಿಯ ಕಲಿಕಾ ವಾತಾವರಣವನ್ನು ಸೃಷ್ಟಿಸುವುದು ಎರಡು ರೀತಿಯಲ್ಲಿ ಉಪಕಾರಿಯಾಗುತ್ತದೆ. ಮೊದಲನೆಯದಾಗಿ, ಈ ರೀತಿಯ ವಾತಾವರಣವು ವಿದ್ಯಾರ್ಥಿಗಳಿಗೆ ದಿನನಿತ್ಯ ಜೀವನಾನುಭವದ ಉದಾಹರಣೆಗಳನ್ನು ನೀಡುವ ಮೂಲಕ ಅವರ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಎರಡನೆಯದಾಗಿ, ವಿದ್ಯಾರ್ಥಿಗಳು ತಮ್ಮ ಸಮುದಾಯದ ಅನುಭವಗಳನ್ನು ತರಗತಿಗಳಲ್ಲಿ ಹಂಚಿಕೊಳ್ಳುವುದು, ನಾವು ಅವರನ್ನು ಕೇವಲ ಅವರ ಬುದ್ಧಿಮತ್ತೆಗೆ ಮಾತ್ರವಲ್ಲದೇ, ಅವರನ್ನು ಇಡಿಯಾಗಿ ಅವರಿರುವಂತೆಯೇ ಸ್ವೀಕರಿಸುತ್ತೇವೆ ಎಂಬುದನ್ನೂ ತಿಳಿಸುತ್ತದೆ. ಇದು, ಅವರು ಯಾವುದೇ ಭಯ ಅಥವಾ ಅಳುಕಿಲ್ಲದೆ ಕಲಿಯಲು ಅನುವು ಮಾಡಿಕೊಡುತ್ತದೆ. ಈ ನಿಟ್ಟಿನಲ್ಲಿ, ವಿದ್ಯಾರ್ಥಿಗಳ ಹಿನ್ನೆಲೆಗಳು ಮತ್ತು ಅನುಭವಗಳು ಅವರ ಕಲಿಕೆಯನ್ನು ಹೆಚ್ಚಿಸುತ್ತದೆಯೇ ಹೊರತು ಕುಂದಿಸುವುದಿಲ್ಲ. ಹಾಗಾಗಿಯೇ, ಸ್ಪೇನ್, ಐಲೆಂಡ್, ಸ್ವೀಡನ್‌ಗಳಂತಹ ರಾಷ್ಟ್ರಗಳ ಸರ್ವಧರ್ಮ ಸಮಭಾವದ ಪಠ್ಯಕ್ರಮದಲ್ಲಿಯೂ (secular curriculum) ಕೂಡ ಧಾರ್ಮಿಕ ಮೌಲ್ಯಗಳು ಹಾಗೂ ನೀತಿಗಳು ಮತ್ತು ಧರ್ಮಗಳ ತೌಲನಿಕ ಅಧ್ಯಯನವನ್ನು ಒಳಗೊಂಡಿರುತ್ತದೆ. ಸ್ಪೇನಿನ ಸರ್ಕಾರಿ ಶಾಲೆಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಧಾರ್ಮಿಕ ಉಡುಪುಗಳ ಮತ್ತು ಸಂಕೇತಗಳ ಮೇರೆಗೆ ಯಾವುದೇ ರೀತಿಯ ನಿರ್ಬಂಧವನ್ನು ಹೇರದೆ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುತ್ತವೆ.

ಯಾವ ಶಿಕ್ಷಣ ವ್ಯವಸ್ಥೆಯು ಸಾಮಾಜಿಕ- ಸಾಂಸ್ಕೃತಿಕ ಅಥವಾ ಧಾರ್ಮಿಕ ಸಂಕೇತಗಳನ್ನು ಶಾಲೆಯಿಂದ ಹೊರಗಿಡಲು ಪ್ರಯತ್ನಿಸುತ್ತದೋ, ಅದು ಅಲ್ಪಸಂಖ್ಯಾತರ ಸಂಸ್ಕೃತಿಗಳನ್ನು ಕೆಳದರ್ಜೆಯವೆಂದೂ, ಕೀಳುಮಟ್ಟದ್ದೆಂದೂ ಚಿತ್ರಿಸುತ್ತದೆ. ಇದು ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಮೇಲೆ ಮಾನಸಿಕ ಹಿಂಸೆಯನ್ನೆಸಗಿ ಅವರ ಕಲಿಕೆಯನ್ನು ಕುಂಠಿತಗೊಳಿಸುತ್ತದೆ. ಇದರಿಂದಾಗಿ, ಶೋಷಿತ ಸಮುದಾಯವನ್ನು ಸುಧಾರಿಸುವ ಗುರಿಹೊಂದಿದ ಶಿಕ್ಷಣ ವ್ಯವಸ್ಥೆಯೇ ಅವರ ಸ್ವಂತಿಕೆಯನ್ನು ಹಾಳುಗೆಡವಿ ಅವರನ್ನು ಇನ್ನಷ್ಟು ದೂರತಳ್ಳುತ್ತದೆ. ಅಮೆರಿಕ ಮತ್ತು ಫ್ರಾನ್ಸ್ ದೇಶಗಳು ಇದಕ್ಕೆ ಉದಾಹರಣೆಗಳಾಗಿವೆ.

ಈ ದೇಶಗಳು ಧರ್ಮವನ್ನು ಶಿಕ್ಷಣದಿಂದ ಸಂಪೂರ್ಣವಾಗಿ ಬೇರ್ಪಡಿಸಲಿಕ್ಕೆ ಪ್ರಯತ್ನಿಸಿದರೂ, ತಮ್ಮ ಶಾಲೆಗಳಲ್ಲಿ ಧಾರ್ಮಿಕ ಮೌಲ್ಯಗಳು ಮತ್ತು ಸಂಕೇತಗಳು ಯಥೇಚ್ಛವಾಗಿಯೇ ಕಂಡುಬರುವುದನ್ನು ಸಂಶೋಧಕರು ಗುರುತಿಸಿದ್ದಾರೆ. ಬಹುಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಮೌಲ್ಯಗಳು ಹಾಗೂ ಸಂಕೇತಗಳನ್ನು ಶಾಲೆಯ ಅಂಗಳಕ್ಕೆ ಹೊತ್ತು ತರುವ ಬಗ್ಗೆ ಯಾವುದೇ ಆಕ್ಷೇಪಣೆಗಳಿರುವುದಿಲ್ಲ ಎಂಬುದು ಅಧ್ಯಯನಗಳಿಂದ ತಿಳಿದುಬಂದಿದೆ.

ಇದು ಭಾರತಕ್ಕೂ ಅನ್ವಯಿಸುತ್ತದೆ. ಧರ್ಮವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದು ಅವಿಭಾಜ್ಯ ಅಂಗವೇ ಆಗಿಹೋಗಿದೆ. ಶಾಲೆಗಳು ದಿನನಿತ್ಯ ಕಾರ್ಯ ನಿರ್ವಹಿಸುವ ರೀತಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಧಾರ್ಮಿಕ ಮೌಲ್ಯಗಳು, ಸಂಕೇತಗಳು ಮತ್ತು ಆಹಾರ ಪದ್ಧತಿಗಳು ಶಾಲೆಗಳ ಸಂಸ್ಕೃತಿಯ ಭಾಗವೇ ಆಗಿರುವುದನ್ನು ನಾವು ಗಮನಿಸಬಹುದಾಗಿದೆ. ದೀಪ ಬೆಳಗಿಸುವುದು, ಪೂಜೆಗಳು, ಸರಸ್ವತಿ ವಂದನೆಗಳು, ಗಣೇಶ ಸ್ತುತಿಗಳನ್ನೂ ಒಳಗೊಂಡಂತೆ ಅನೇಕ ಆಚರಣೆಗಳು ಸಾಮಾನ್ಯವಾಗಿ ಕಂಡುಬರುತ್ತದೆ. ಅಲ್ಲದೇ, ದಸರಾ ಮತ್ತು ದೀಪಾವಳಿಗೆ ದೀರ್ಘಕಾಲದ ರಜೆಗಳನ್ನೂ ನೀಡಲಾಗುತ್ತದೆ.

ಸರ್ವವ್ಯಾಪಿಯಾಗಿರುವ ಧಾರ್ಮಿಕ ಸಂಕೇತಗಳು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಎಷ್ಟು ಸಾಮಾನ್ಯಗೊಳಿಸಲಾಗಿದೆ (normalise) ಎಂದರೆ, ಅದನ್ನು ಯಾರೂ ಗಮನಿಸಲಾಗುವುದೂ ಇಲ್ಲ, ಪ್ರಶ್ನಿಸಲಾಗುವುದೂ ಇಲ್ಲ. ಬಹುಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಇವು ಸಾಮಾನ್ಯ ಎನಿಸಿದರೆ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಇದು ವಿಮುಖಗೊಳಿಸುತ್ತದೆ.

ಶಾಲೆಗಳು ವಿದ್ಯಾರ್ಥಿಗಳನ್ನು ಭವಿಷ್ಯದ ಸಮಾಜದಲ್ಲಿ ಬದುಕಲು ಕಲಿಸುವ ಕಿರು ಸಮಾಜಗಳೇ ಆಗಿವೆ. ಶಾಲೆಗಳ ಕಾರ್ಯಕಲಾಪಗಳಲ್ಲಿ ರೂಪುಗೊಳ್ಳಬೇಕಿರುವ ಪ್ರಜಾಪ್ರಭುತ್ವ ವ್ಯವಸ್ಥೆಯು ಮುಂದೆ ಅವರು ನಿರ್ವಹಿಸಬೇಕಾದ ಪಾತ್ರಗಳಿಗೆ ಸಜ್ಜುಗೊಳಿಸುತ್ತದೆ. ಶಾಲೆ ಅಥವಾ ಕಾಲೇಜುಗಳು ಕೆಲವೇ ಸಮುದಾಯಗಳ ಆಚಾರ ಮತ್ತು ಪದ್ಧತಿಗಳನ್ನು ಸ್ವಾಗತಿಸಿದರೆ, ಶಿಕ್ಷಕರು ಕೂಡ ತಮ್ಮ ಕಾರ್ಯ ಚಟುವಟಿಕೆಗಳಲ್ಲಿ ಅದೇ ಧಾರ್ಮಿಕ ಶ್ರೇಣೀಕರಣವನ್ನು ಸ್ಥಾಪಿಸುತ್ತಾರೆ ಮತ್ತು ಗಟ್ಟಿಗೊಳಿಸುತ್ತಾರೆ.

ಈ ರೀತಿಯ ಸಾಂಸ್ಕೃತಿಕ ಮತ್ತು ಧಾರ್ಮಿಕ ಶ್ರೇಷ್ಠತೆಯ ಪರಿಕಲ್ಪನೆಯಲ್ಲಿ ಬದುಕುವ-ಬೆಳೆಯುವ ವಿದ್ಯಾರ್ಥಿಗಳು, ಮುಂದೆ ನಾಗರಿಕರಾಗಿಯೂ ಅದನ್ನೇ ಮುಂದುವರೆಸುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ, ವಿದ್ಯಾರ್ಥಿ ಜೀವನದಲ್ಲಿ ಸಾಂಸ್ಕೃತಿಕ ಅಧೀನತೆಗೆ ಒಳಪಡುವ ಸಮುದಾಯವು ಪ್ರತ್ಯೇಕಗೊಳಿಸಿದ ಮತ್ತು ಒಂಟಿತನದ ಭಾವನೆಯನ್ನು ಹೊತ್ತು ಬೆಳೆಯುತ್ತದೆ. ಈ ರೀತಿಯ ನಿಷ್ಪ್ರಯೋಜಕ ಮತ್ತು ನಿರರ್ಥಕ
ಸಂದರ್ಭಗಳಲ್ಲಿ, ಮತ್ತದೇ ಶೋಷಿತ ಸಮುದಾಯವು ಬೆಳೆಯಲಿಕ್ಕೆ ಇಚ್ಛಸುತ್ತಿಲ್ಲವೆಂದೂ, ಮುಖ್ಯವಾಹಿನಿಯಲ್ಲಿ ಪಾಲ್ಗೊಳ್ಳುತ್ತಿಲ್ಲವೆಂದೂ ಎಂದೆಂದಿಗೂ ದೂಷಿಸಲ್ಪಡುತ್ತದೆ.

ಶೈಮಾ ಅಮತುಲ್ಲಾಹ್
ಬೆಂಗಳೂರಿನ ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಅಸ್ಮಿತೆಯ ಅನುಸಂಧಾನ ಎಂಬ ವಿಷಯದ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ.

ಶಾಲಿನಿ ದೀಕ್ಷಿತ್
ಬೆಂಗಳೂರಿನ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯ ಶಿಕ್ಷಣ ವಿಭಾಗದಲ್ಲಿ ಪ್ರಾಧ್ಯಾಪಕರು.

ಅನುವಾದ: ಶಶಾಂಕ್ ಎಸ್ ಆರ್

(ಈ ಲೇಖನವು ಮೊದಲು ಇಂಗ್ಲಿಷಿನಲ್ಲಿ, newsclick.in ಅಲ್ಲಿ ಪ್ರಕಟಗೊಂಡಿತ್ತು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...