Homeಮುಖಪುಟಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

ಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಈಗ ಪಂಚರಾಜ್ಯ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಂದಿದ್ದು, ಎಲ್ಲರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಾಗಿ ಸಮೀಕ್ಷೆಗಳು ಹೇಳಿವೆ. ಗೋವಾ ಫಲಿತಾಂಶ ಅತಂತ್ರವಾಗಿ ಬರುತ್ತದೆ ಎನ್ನಲಾಗುತ್ತಿದೆ. ಆದರೆ ಮಣಿಪುರ, ಉತ್ತರಖಾಂಡ್‌ನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎನ್ನಲಾಗುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ, ಎಬಿಪಿ ನ್ಯೂಸ್-ಸಿವೋಟರ್, ನ್ಯೂಸ್24- ಟುಡೇ ಚಾಣಕ್ಯ, ಟೈಮ್ಸ್ ನೌ-ವೆಟೊ, ರಿಪಬ್ಲಿಕ್-ಪಿ ಮಾರ್ಕ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...