Homeಮುಖಪುಟಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

ಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಈಗ ಪಂಚರಾಜ್ಯ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಂದಿದ್ದು, ಎಲ್ಲರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಾಗಿ ಸಮೀಕ್ಷೆಗಳು ಹೇಳಿವೆ. ಗೋವಾ ಫಲಿತಾಂಶ ಅತಂತ್ರವಾಗಿ ಬರುತ್ತದೆ ಎನ್ನಲಾಗುತ್ತಿದೆ. ಆದರೆ ಮಣಿಪುರ, ಉತ್ತರಖಾಂಡ್‌ನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎನ್ನಲಾಗುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ, ಎಬಿಪಿ ನ್ಯೂಸ್-ಸಿವೋಟರ್, ನ್ಯೂಸ್24- ಟುಡೇ ಚಾಣಕ್ಯ, ಟೈಮ್ಸ್ ನೌ-ವೆಟೊ, ರಿಪಬ್ಲಿಕ್-ಪಿ ಮಾರ್ಕ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...