Homeಮುಖಪುಟಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

ಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಈಗ ಪಂಚರಾಜ್ಯ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಂದಿದ್ದು, ಎಲ್ಲರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಾಗಿ ಸಮೀಕ್ಷೆಗಳು ಹೇಳಿವೆ. ಗೋವಾ ಫಲಿತಾಂಶ ಅತಂತ್ರವಾಗಿ ಬರುತ್ತದೆ ಎನ್ನಲಾಗುತ್ತಿದೆ. ಆದರೆ ಮಣಿಪುರ, ಉತ್ತರಖಾಂಡ್‌ನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎನ್ನಲಾಗುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ, ಎಬಿಪಿ ನ್ಯೂಸ್-ಸಿವೋಟರ್, ನ್ಯೂಸ್24- ಟುಡೇ ಚಾಣಕ್ಯ, ಟೈಮ್ಸ್ ನೌ-ವೆಟೊ, ರಿಪಬ್ಲಿಕ್-ಪಿ ಮಾರ್ಕ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...