Homeಮುಖಪುಟಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

ಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಈಗ ಪಂಚರಾಜ್ಯ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಂದಿದ್ದು, ಎಲ್ಲರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಾಗಿ ಸಮೀಕ್ಷೆಗಳು ಹೇಳಿವೆ. ಗೋವಾ ಫಲಿತಾಂಶ ಅತಂತ್ರವಾಗಿ ಬರುತ್ತದೆ ಎನ್ನಲಾಗುತ್ತಿದೆ. ಆದರೆ ಮಣಿಪುರ, ಉತ್ತರಖಾಂಡ್‌ನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎನ್ನಲಾಗುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ, ಎಬಿಪಿ ನ್ಯೂಸ್-ಸಿವೋಟರ್, ನ್ಯೂಸ್24- ಟುಡೇ ಚಾಣಕ್ಯ, ಟೈಮ್ಸ್ ನೌ-ವೆಟೊ, ರಿಪಬ್ಲಿಕ್-ಪಿ ಮಾರ್ಕ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...