Homeಮುಖಪುಟಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

ಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಈಗ ಪಂಚರಾಜ್ಯ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಂದಿದ್ದು, ಎಲ್ಲರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಾಗಿ ಸಮೀಕ್ಷೆಗಳು ಹೇಳಿವೆ. ಗೋವಾ ಫಲಿತಾಂಶ ಅತಂತ್ರವಾಗಿ ಬರುತ್ತದೆ ಎನ್ನಲಾಗುತ್ತಿದೆ. ಆದರೆ ಮಣಿಪುರ, ಉತ್ತರಖಾಂಡ್‌ನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎನ್ನಲಾಗುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ, ಎಬಿಪಿ ನ್ಯೂಸ್-ಸಿವೋಟರ್, ನ್ಯೂಸ್24- ಟುಡೇ ಚಾಣಕ್ಯ, ಟೈಮ್ಸ್ ನೌ-ವೆಟೊ, ರಿಪಬ್ಲಿಕ್-ಪಿ ಮಾರ್ಕ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...