Homeಮುಖಪುಟಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

ಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಈಗ ಪಂಚರಾಜ್ಯ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಂದಿದ್ದು, ಎಲ್ಲರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಾಗಿ ಸಮೀಕ್ಷೆಗಳು ಹೇಳಿವೆ. ಗೋವಾ ಫಲಿತಾಂಶ ಅತಂತ್ರವಾಗಿ ಬರುತ್ತದೆ ಎನ್ನಲಾಗುತ್ತಿದೆ. ಆದರೆ ಮಣಿಪುರ, ಉತ್ತರಖಾಂಡ್‌ನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎನ್ನಲಾಗುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ, ಎಬಿಪಿ ನ್ಯೂಸ್-ಸಿವೋಟರ್, ನ್ಯೂಸ್24- ಟುಡೇ ಚಾಣಕ್ಯ, ಟೈಮ್ಸ್ ನೌ-ವೆಟೊ, ರಿಪಬ್ಲಿಕ್-ಪಿ ಮಾರ್ಕ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...