Homeಮುಖಪುಟವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ಕೊರೊನ ವೈರಸ್ ಲಾಕ್‌ಡೌನ್ ಮಧ್ಯೆ ವಲಸಿಗರ ಸುದೀರ್ಘ ಪ್ರಯಾಣವನ್ನು ನಿಲ್ಲಿಸಿ ಆಶ್ರಯಕ್ಕೆ ಕಳುಹಿಸಲಾಗಿದ್ದು, ಎಲ್ಲಾ ಧರ್ಮಗಳ ಮುಖಂಡರಿಂದ ಆಹಾರ, ವೈದ್ಯಕೀಯ ನೆರವು ಮತ್ತು ಸಮಾಲೋಚನೆ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ತಿಳಿಸಿದೆ.

ಕೊರೊನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ವಿಧಿಸಿದ ನಂತರ ಅಸಹಾಯಕರಾಗಿ ಉಳಿದಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

“ನೀವು ವಲಸೆ ನಿಲ್ಲಿಸಿದ ಎಲ್ಲರನ್ನು ಆಹಾರ, ಆಶ್ರಯ, ಪೋಷಣೆ ಮತ್ತು ವೈದ್ಯಕೀಯ ನೆರವಿನ ವಿಷಯದಲ್ಲಿ ನೋಡಿಕೊಳ್ಳುವುದನ್ನು ಭರವಸೆ ನೀಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು 21 ದಿನಗಳ ಲಾಕ್‌ಡೌನ್ ಕಾರಣ ಹಠಾತ್ತನೆ ಉದ್ಯೋಗ ಅಥವಾ ಮನೆಗಳಿಲ್ಲದೆ ಉಳಿದುಕೊಂಡ ನಂತರ ವಲಸಿಗರಲ್ಲಿ ಅವರ ಭವಿಷ್ಯದ ಬಗ್ಗೆ ಭಯವನ್ನು ಶಾಂತಗೊಳಿಸುವ ಬಗ್ಗೆಯೂ ನ್ಯಾಯಾಲಯವು ಮಾತನಾಡಿದೆ.


ಇದನ್ನೂ ಓದಿ: ಬಂಧನದಲ್ಲಿ ಕಣ್ಣೀರಿಡುತ್ತಿರುವ ವಲಸೆ ಕಾರ್ಮಿಕರು: ಪ್ರಶಾಂತ್ ಕಿಶೋರ್ ವಿಡಿಯೊ ಬಿಡುಗಡೆ


“ಭಯವೂ ವೈರಸ್‌ಗಿಂತ ಹೆಚ್ಚಿನ ಜೀವಗಳನ್ನು ಕೊಲ್ಲುತ್ತದೆ. ಭಜನೆ, ಕೀರ್ತನೆ, ನಮಾಜ್ ಅಥವಾ ಯಾವುದನ್ನಾದರೂ ಮಾಡಬಹುದು ಆದರೆ ನೀವು ಜನರಿಗೆ ಬಲ ನೀಡಬೇಕು” ಎಂದು ನ್ಯಾಯಾಲಯ ಹೇಳಿದೆಯಲ್ಲದೆ, “ಎಲ್ಲಾ ಧರ್ಮಗಳ ತರಬೇತಿ ಪಡೆದ ಸಲಹೆಗಾರರು ಮತ್ತು ಸಮುದಾಯದ ಮುಖಂಡರು ಪರಿಹಾರ ಶಿಬಿರಗಳಿಗೆ ಭೇಟಿ ನೀಡುವುದನ್ನು ಖಚಿತಪಡಿಸಿಕೊಳ್ಳಿ ಮತ್ತು ಭೀತಿಯನ್ನು ತಡೆಯಿರಿ” ಎಂದು ತಿಳಿಸಿದೆ.

“24 ಗಂಟೆಗಳ ಒಳಗೆ ನಾವು ತರಬೇತಿ ಪಡೆದ ಸಲಹೆಗಾರರನ್ನು ಮತ್ತು ಧಾರ್ಮಿಕ ಮುಖಂಡರನ್ನು ಸಜ್ಜುಗೊಳಿಸುತ್ತೇವೆ ಎಂದು ನಾನು ಇಲ್ಲಿ ಹೇಳಿಕೆ ನೀಡುತ್ತಿದ್ದೇನೆ. ಶಾಂತವಾಗಿರಲು ಸಲಹೆ ನೀಡುವಂತೆ ನಾವು ಧಾರ್ಮಿಕ ಮುಖಂಡರು, ಮೌಲ್ವಿಗಳು, ಸಾಧುಗಳನ್ನು ಸಜ್ಜುಗೊಳಿಸುತ್ತೇವೆ” ಎಂದು ಕೇದ್ರದ ಪರವಾಗಿ ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

“ರಸ್ತೆಗಳಲ್ಲಿ ವಲಸೆ ಕಾರ್ಮಿಕರಿಲ್ಲ ಇಂದು ಬೆಳಿಗ್ಗೆ 11 ಗಂಟೆಯವರೆಗೆ, ಎಲ್ಲರನ್ನು ಆಶ್ರಯದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದರು.

ಸೋಂಕಿನ ಅಪಾಯದಿಂದ, ಎಲ್ಲಾ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಿದ ನಂತರ ವಲಸಿಗರು ತಮ್ಮ ತಾಯ್ನಾಡಿನ ಕಡೆಗೆ ನಡೆಯಲು ಪ್ರಾರಂಭಿಸಿದರು. ದೀರ್ಘ ಪ್ರಯಾಣದಲ್ಲಿ ಅವರ ನೋವುಗಳ ಬಗ್ಗೆ ಹೃದಯ ವಿದ್ರಾವಕ ಚಿತ್ರಣಗಳು ಹೊರಹೊಮ್ಮಿದೆಯಲ್ಲದೆ, ಇದರಿಂದಾಗಿ ಇಲ್ಲಿಯವರೆಗೆ ಕನಿಷ್ಟ 22 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ ಘೋಷಿದಂದಿನಿಂದ 22 ವಲಸೆ ಕಾರ್ಮಿಕರ ಸಾವು


“ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ. ಇತರ ಹಲವು ದೇಶಗಳು ಮಾಡಿದ್ದಕ್ಕಿಂತ ಹೆಚ್ಚಿನ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ, ಭಾರತದಲ್ಲಿ ವೈರಸ್ ಹರಡುವಿಕೆಯು ಇತರ ದೇಶಗಳಿಗಿಂತ ಕಡಿಮೆಯಾಗಿದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು.

ಸರಿಯಾದ ಮಾಹಿತಿಗಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸಲು ಹಾಗೂ ಫೇಸ್ಬುಕ್, ಟ್ವಿಟರ್, ಟಿಕ್ ಟಾಕ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ಮಾಹಿತಿ ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಿ ಎಂದು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಹೇಳಿದರು.

ಭಾರತದಲ್ಲಿ ಸುಮಾರು 1,200 ಕೊರೊನ ವೈರಸ್ ರೋಗಿಗಳಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...