Homeಮುಖಪುಟವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ಕೊರೊನ ವೈರಸ್ ಲಾಕ್‌ಡೌನ್ ಮಧ್ಯೆ ವಲಸಿಗರ ಸುದೀರ್ಘ ಪ್ರಯಾಣವನ್ನು ನಿಲ್ಲಿಸಿ ಆಶ್ರಯಕ್ಕೆ ಕಳುಹಿಸಲಾಗಿದ್ದು, ಎಲ್ಲಾ ಧರ್ಮಗಳ ಮುಖಂಡರಿಂದ ಆಹಾರ, ವೈದ್ಯಕೀಯ ನೆರವು ಮತ್ತು ಸಮಾಲೋಚನೆ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ತಿಳಿಸಿದೆ.

ಕೊರೊನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ವಿಧಿಸಿದ ನಂತರ ಅಸಹಾಯಕರಾಗಿ ಉಳಿದಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

“ನೀವು ವಲಸೆ ನಿಲ್ಲಿಸಿದ ಎಲ್ಲರನ್ನು ಆಹಾರ, ಆಶ್ರಯ, ಪೋಷಣೆ ಮತ್ತು ವೈದ್ಯಕೀಯ ನೆರವಿನ ವಿಷಯದಲ್ಲಿ ನೋಡಿಕೊಳ್ಳುವುದನ್ನು ಭರವಸೆ ನೀಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು 21 ದಿನಗಳ ಲಾಕ್‌ಡೌನ್ ಕಾರಣ ಹಠಾತ್ತನೆ ಉದ್ಯೋಗ ಅಥವಾ ಮನೆಗಳಿಲ್ಲದೆ ಉಳಿದುಕೊಂಡ ನಂತರ ವಲಸಿಗರಲ್ಲಿ ಅವರ ಭವಿಷ್ಯದ ಬಗ್ಗೆ ಭಯವನ್ನು ಶಾಂತಗೊಳಿಸುವ ಬಗ್ಗೆಯೂ ನ್ಯಾಯಾಲಯವು ಮಾತನಾಡಿದೆ.


ಇದನ್ನೂ ಓದಿ: ಬಂಧನದಲ್ಲಿ ಕಣ್ಣೀರಿಡುತ್ತಿರುವ ವಲಸೆ ಕಾರ್ಮಿಕರು: ಪ್ರಶಾಂತ್ ಕಿಶೋರ್ ವಿಡಿಯೊ ಬಿಡುಗಡೆ


“ಭಯವೂ ವೈರಸ್‌ಗಿಂತ ಹೆಚ್ಚಿನ ಜೀವಗಳನ್ನು ಕೊಲ್ಲುತ್ತದೆ. ಭಜನೆ, ಕೀರ್ತನೆ, ನಮಾಜ್ ಅಥವಾ ಯಾವುದನ್ನಾದರೂ ಮಾಡಬಹುದು ಆದರೆ ನೀವು ಜನರಿಗೆ ಬಲ ನೀಡಬೇಕು” ಎಂದು ನ್ಯಾಯಾಲಯ ಹೇಳಿದೆಯಲ್ಲದೆ, “ಎಲ್ಲಾ ಧರ್ಮಗಳ ತರಬೇತಿ ಪಡೆದ ಸಲಹೆಗಾರರು ಮತ್ತು ಸಮುದಾಯದ ಮುಖಂಡರು ಪರಿಹಾರ ಶಿಬಿರಗಳಿಗೆ ಭೇಟಿ ನೀಡುವುದನ್ನು ಖಚಿತಪಡಿಸಿಕೊಳ್ಳಿ ಮತ್ತು ಭೀತಿಯನ್ನು ತಡೆಯಿರಿ” ಎಂದು ತಿಳಿಸಿದೆ.

“24 ಗಂಟೆಗಳ ಒಳಗೆ ನಾವು ತರಬೇತಿ ಪಡೆದ ಸಲಹೆಗಾರರನ್ನು ಮತ್ತು ಧಾರ್ಮಿಕ ಮುಖಂಡರನ್ನು ಸಜ್ಜುಗೊಳಿಸುತ್ತೇವೆ ಎಂದು ನಾನು ಇಲ್ಲಿ ಹೇಳಿಕೆ ನೀಡುತ್ತಿದ್ದೇನೆ. ಶಾಂತವಾಗಿರಲು ಸಲಹೆ ನೀಡುವಂತೆ ನಾವು ಧಾರ್ಮಿಕ ಮುಖಂಡರು, ಮೌಲ್ವಿಗಳು, ಸಾಧುಗಳನ್ನು ಸಜ್ಜುಗೊಳಿಸುತ್ತೇವೆ” ಎಂದು ಕೇದ್ರದ ಪರವಾಗಿ ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

“ರಸ್ತೆಗಳಲ್ಲಿ ವಲಸೆ ಕಾರ್ಮಿಕರಿಲ್ಲ ಇಂದು ಬೆಳಿಗ್ಗೆ 11 ಗಂಟೆಯವರೆಗೆ, ಎಲ್ಲರನ್ನು ಆಶ್ರಯದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದರು.

ಸೋಂಕಿನ ಅಪಾಯದಿಂದ, ಎಲ್ಲಾ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಿದ ನಂತರ ವಲಸಿಗರು ತಮ್ಮ ತಾಯ್ನಾಡಿನ ಕಡೆಗೆ ನಡೆಯಲು ಪ್ರಾರಂಭಿಸಿದರು. ದೀರ್ಘ ಪ್ರಯಾಣದಲ್ಲಿ ಅವರ ನೋವುಗಳ ಬಗ್ಗೆ ಹೃದಯ ವಿದ್ರಾವಕ ಚಿತ್ರಣಗಳು ಹೊರಹೊಮ್ಮಿದೆಯಲ್ಲದೆ, ಇದರಿಂದಾಗಿ ಇಲ್ಲಿಯವರೆಗೆ ಕನಿಷ್ಟ 22 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ ಘೋಷಿದಂದಿನಿಂದ 22 ವಲಸೆ ಕಾರ್ಮಿಕರ ಸಾವು


“ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ. ಇತರ ಹಲವು ದೇಶಗಳು ಮಾಡಿದ್ದಕ್ಕಿಂತ ಹೆಚ್ಚಿನ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ, ಭಾರತದಲ್ಲಿ ವೈರಸ್ ಹರಡುವಿಕೆಯು ಇತರ ದೇಶಗಳಿಗಿಂತ ಕಡಿಮೆಯಾಗಿದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು.

ಸರಿಯಾದ ಮಾಹಿತಿಗಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸಲು ಹಾಗೂ ಫೇಸ್ಬುಕ್, ಟ್ವಿಟರ್, ಟಿಕ್ ಟಾಕ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ಮಾಹಿತಿ ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಿ ಎಂದು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಹೇಳಿದರು.

ಭಾರತದಲ್ಲಿ ಸುಮಾರು 1,200 ಕೊರೊನ ವೈರಸ್ ರೋಗಿಗಳಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...