Homeಮುಖಪುಟವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ಕೊರೊನ ವೈರಸ್ ಲಾಕ್‌ಡೌನ್ ಮಧ್ಯೆ ವಲಸಿಗರ ಸುದೀರ್ಘ ಪ್ರಯಾಣವನ್ನು ನಿಲ್ಲಿಸಿ ಆಶ್ರಯಕ್ಕೆ ಕಳುಹಿಸಲಾಗಿದ್ದು, ಎಲ್ಲಾ ಧರ್ಮಗಳ ಮುಖಂಡರಿಂದ ಆಹಾರ, ವೈದ್ಯಕೀಯ ನೆರವು ಮತ್ತು ಸಮಾಲೋಚನೆ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ತಿಳಿಸಿದೆ.

ಕೊರೊನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ವಿಧಿಸಿದ ನಂತರ ಅಸಹಾಯಕರಾಗಿ ಉಳಿದಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

“ನೀವು ವಲಸೆ ನಿಲ್ಲಿಸಿದ ಎಲ್ಲರನ್ನು ಆಹಾರ, ಆಶ್ರಯ, ಪೋಷಣೆ ಮತ್ತು ವೈದ್ಯಕೀಯ ನೆರವಿನ ವಿಷಯದಲ್ಲಿ ನೋಡಿಕೊಳ್ಳುವುದನ್ನು ಭರವಸೆ ನೀಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು 21 ದಿನಗಳ ಲಾಕ್‌ಡೌನ್ ಕಾರಣ ಹಠಾತ್ತನೆ ಉದ್ಯೋಗ ಅಥವಾ ಮನೆಗಳಿಲ್ಲದೆ ಉಳಿದುಕೊಂಡ ನಂತರ ವಲಸಿಗರಲ್ಲಿ ಅವರ ಭವಿಷ್ಯದ ಬಗ್ಗೆ ಭಯವನ್ನು ಶಾಂತಗೊಳಿಸುವ ಬಗ್ಗೆಯೂ ನ್ಯಾಯಾಲಯವು ಮಾತನಾಡಿದೆ.


ಇದನ್ನೂ ಓದಿ: ಬಂಧನದಲ್ಲಿ ಕಣ್ಣೀರಿಡುತ್ತಿರುವ ವಲಸೆ ಕಾರ್ಮಿಕರು: ಪ್ರಶಾಂತ್ ಕಿಶೋರ್ ವಿಡಿಯೊ ಬಿಡುಗಡೆ


“ಭಯವೂ ವೈರಸ್‌ಗಿಂತ ಹೆಚ್ಚಿನ ಜೀವಗಳನ್ನು ಕೊಲ್ಲುತ್ತದೆ. ಭಜನೆ, ಕೀರ್ತನೆ, ನಮಾಜ್ ಅಥವಾ ಯಾವುದನ್ನಾದರೂ ಮಾಡಬಹುದು ಆದರೆ ನೀವು ಜನರಿಗೆ ಬಲ ನೀಡಬೇಕು” ಎಂದು ನ್ಯಾಯಾಲಯ ಹೇಳಿದೆಯಲ್ಲದೆ, “ಎಲ್ಲಾ ಧರ್ಮಗಳ ತರಬೇತಿ ಪಡೆದ ಸಲಹೆಗಾರರು ಮತ್ತು ಸಮುದಾಯದ ಮುಖಂಡರು ಪರಿಹಾರ ಶಿಬಿರಗಳಿಗೆ ಭೇಟಿ ನೀಡುವುದನ್ನು ಖಚಿತಪಡಿಸಿಕೊಳ್ಳಿ ಮತ್ತು ಭೀತಿಯನ್ನು ತಡೆಯಿರಿ” ಎಂದು ತಿಳಿಸಿದೆ.

“24 ಗಂಟೆಗಳ ಒಳಗೆ ನಾವು ತರಬೇತಿ ಪಡೆದ ಸಲಹೆಗಾರರನ್ನು ಮತ್ತು ಧಾರ್ಮಿಕ ಮುಖಂಡರನ್ನು ಸಜ್ಜುಗೊಳಿಸುತ್ತೇವೆ ಎಂದು ನಾನು ಇಲ್ಲಿ ಹೇಳಿಕೆ ನೀಡುತ್ತಿದ್ದೇನೆ. ಶಾಂತವಾಗಿರಲು ಸಲಹೆ ನೀಡುವಂತೆ ನಾವು ಧಾರ್ಮಿಕ ಮುಖಂಡರು, ಮೌಲ್ವಿಗಳು, ಸಾಧುಗಳನ್ನು ಸಜ್ಜುಗೊಳಿಸುತ್ತೇವೆ” ಎಂದು ಕೇದ್ರದ ಪರವಾಗಿ ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

“ರಸ್ತೆಗಳಲ್ಲಿ ವಲಸೆ ಕಾರ್ಮಿಕರಿಲ್ಲ ಇಂದು ಬೆಳಿಗ್ಗೆ 11 ಗಂಟೆಯವರೆಗೆ, ಎಲ್ಲರನ್ನು ಆಶ್ರಯದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದರು.

ಸೋಂಕಿನ ಅಪಾಯದಿಂದ, ಎಲ್ಲಾ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಿದ ನಂತರ ವಲಸಿಗರು ತಮ್ಮ ತಾಯ್ನಾಡಿನ ಕಡೆಗೆ ನಡೆಯಲು ಪ್ರಾರಂಭಿಸಿದರು. ದೀರ್ಘ ಪ್ರಯಾಣದಲ್ಲಿ ಅವರ ನೋವುಗಳ ಬಗ್ಗೆ ಹೃದಯ ವಿದ್ರಾವಕ ಚಿತ್ರಣಗಳು ಹೊರಹೊಮ್ಮಿದೆಯಲ್ಲದೆ, ಇದರಿಂದಾಗಿ ಇಲ್ಲಿಯವರೆಗೆ ಕನಿಷ್ಟ 22 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ ಘೋಷಿದಂದಿನಿಂದ 22 ವಲಸೆ ಕಾರ್ಮಿಕರ ಸಾವು


“ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ. ಇತರ ಹಲವು ದೇಶಗಳು ಮಾಡಿದ್ದಕ್ಕಿಂತ ಹೆಚ್ಚಿನ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ, ಭಾರತದಲ್ಲಿ ವೈರಸ್ ಹರಡುವಿಕೆಯು ಇತರ ದೇಶಗಳಿಗಿಂತ ಕಡಿಮೆಯಾಗಿದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು.

ಸರಿಯಾದ ಮಾಹಿತಿಗಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸಲು ಹಾಗೂ ಫೇಸ್ಬುಕ್, ಟ್ವಿಟರ್, ಟಿಕ್ ಟಾಕ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ಮಾಹಿತಿ ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಿ ಎಂದು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಹೇಳಿದರು.

ಭಾರತದಲ್ಲಿ ಸುಮಾರು 1,200 ಕೊರೊನ ವೈರಸ್ ರೋಗಿಗಳಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...