Homeಮುಖಪುಟಲಲಿತ ಮೋದಿ, ನೀರವ್ ಮೋದಿಯನ್ನು ನಿಮ್ಮೊಂದಿಗೆ ಹೋಲಿಸಬಹುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಲಲಿತ ಮೋದಿ, ನೀರವ್ ಮೋದಿಯನ್ನು ನಿಮ್ಮೊಂದಿಗೆ ಹೋಲಿಸಬಹುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ವಿರೋಧ ಪಕ್ಷಗಳ ಒಕ್ಕೂಟ INDIAವನ್ನು ಪ್ರಧಾನಿ ಮೋದಿ ಅವರು ಭಯೋತ್ಪಾದಕ ಸಂಘಟನೆಗಳೊಂದಿಗೆ ಹೋಲಿಸಿ ಮಾಡಿದ ಟೀಕೆಗೆ ಸಿದ್ದರಾಮಯ್ಯ ಕಿಡಿ ಕಾರಿದ್ದು, ನಿಮ್ಮನ್ನು ಲಲಿತ ಮೋದಿ, ನೀರವ್ ಮೋದಿಗೆ ಹೋಲಿಸಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ ನರೇಂದ್ರ ಮೋದಿ ಅವರೇ, ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ?” ಎಂದು ಕೇಳಿದ್ದಾರೆ.

”ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್‌ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?” ಎಂದು ಕೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ”ಪ್ರಧಾನಿ ನರೇಂದ್ರ ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?” ಎಂದು ಪ್ರಶ್ನಿಸಿದ್ದಾರೆ.

ಮೋದಿ ಹೇಳಿದ್ದೇನು?

ಪ್ರತಿಪಕ್ಷಗಳ ಒಕ್ಕೂಟ INDIA ಹೆಸರಿನ ವಿರುದ್ಧ ಟೀಕೆ ಮಾಡಿದ್ದ ಪ್ರಧಾನಿ ಮೋದಿ, ”ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ, ಇಂಡಿಯನ್ ಮುಜಾಹಿದ್ದೀನ್‌ನಂತಹ ಸಂಘಟನೆಗಳ ಹೆಸರಿನಲ್ಲೂ ಇಂಡಿಯಾ ಎನ್ನುವ ಪದವಿದೆ. ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗುವುದಿಲ್ಲ. ದೇಶದ ಹೆಸರನ್ನು ಬಳಸುವುದರಿಂದ ಜನರನ್ನು ದಾರಿ ತಪ್ಪಿಸಲಾಗುವುದಿಲ್ಲ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...