Homeಮುಖಪುಟಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

- Advertisement -
- Advertisement -

ನನ್ನ ಮಾತುಗಳನ್ನ ಶೇಕ್ಸ್‌ಪಿಯರ್‌ನ ಜೂಲಿಯಸ್ ಸೀಜರ್ ದುರಂತ ನಾಟಕದಿಂದ ಆರಂಭಿಸುತ್ತೇನೆ. ಸೀಜರ್ ಜಗತ್ತನ್ನೇ ಗೆಲ್ಲುವ ತಾಕತ್ತಿದ್ದ ಯುದ್ಧ ನಿಪುಣ. ರೋಮ್ ಸಾಮ್ರಾಜ್ಯದ ಸೈನ್ಯದ ಮುಖ್ಯಸ್ಥ, ಸೇನಾಧಿಕಾರಿ, ರೋಮ್ ದೇಶವನ್ನು ಶ್ರೀಮಂತಗೊಳಿಸಿದವನು.

ಇವನ ಮಹತ್ವಾಕಾಂಕ್ಷೆಗೆ ಅವನ ಸುತ್ತಲಿನ ಗೆಳೆಯರೇ ಭೀತಿಗೊಳಗಾಗುತ್ತಾರೆ. ಸೀಜರ್‌ನನ್ನು ಮುಗಿಸಲು ತವಕಿಸುತ್ತಾರೆ. ಆದರೆ ಯಾರಿಗೂ ಮುಟ್ಟಲು ಎದೆಗಾರಿಕೆ ಇರಲಿಲ್ಲ. ಕೊನೆಗವರು ಹುಡುಕುವುದು ಸೀಜರ್‌ನ ಪರಮಾಪ್ತ ನಂಬಿಕಸ್ಥ ಬ್ರೂಟಸ್‌ನನ್ನು.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ

ಬ್ರೂಟಸ್ ಅಪ್ರತಿಮ ದೇಶಭಕ್ತ ಎಂದೂ ಕೂಡ ಹೆಸರು ಪಡೆದವನು. ಬ್ರೂಟಸ್, ಸೀಜರ್‌ನ ಹೃದಯಕ್ಕೆ ಚೂರಿ ಹಾಕುತ್ತಾನೆ. ದೇಶಭಕ್ತ ಎಂದು ಬ್ರಾಂಡ್ ಆದವರು ಏನುಬೇಕಾದರೂ ಮಾಡಿ ದಕ್ಕಿಸಿಕೊಳ್ಳಬಹುದೆಂದು ಕಾಣುತ್ತದೆ! ಆ ಸೀಜರ್‌ನ ಹೆಣದ ಮುಂದೆ ಮಾರ್ಕ್ ಆಂಟ್ಯೋನಿ ‘The most unkindest cut of all’ ಎಂದು ಉದ್ಗಾರ ಮಾಡುತ್ತಾನೆ.

ವ್ಯಾಕರಣದ ಪ್ರಕಾರ, The most ಮತ್ತು Unkindest – ಈ ಎರಡೂ ಅತಿಶಯೋಕ್ತಿಗಳು ಒಂದೇ ವಾಕ್ಯದಲ್ಲಿ ಬರಬಾರದು. ಆದರೆ ಶೇಕ್ಸ್‌ಪಿಯರ್‌ ನಂಬಿಕಸ್ಥನೇ ಕೊಲೆ ಮಾಡುವ ಈ ಘಾತುಕ ಕೃತ್ಯವನ್ನು ಹೇಗಿದೆಯೋ ಹಾಗೆಯೇ ಕಟ್ಟಿಕೊಡಲು ವ್ಯಾಕರಣವನ್ನೇ ಮುರಿದು ಕಟ್ಟುತ್ತಾನೆ. ಈ ದುರಂತ ನಾಟಕವನ್ನು ಇಲ್ಲಿಗೇ ಬಿಡೋಣ. ಯಥಾವತ್ತಾಗಿ ಇಂದಿಗೆ ಇಲ್ಲಿಗೆ ಅಳವಡಿಸಿಕೊಳ್ಳಲೂ ಆಗದು. ಆದರೆ ನಂಬಿಕಸ್ಥನೇ ಕೊಲೆ ಮಾಡಿದ್ದಕ್ಕೆ ಅಭಿವ್ಯಕ್ತಿಗೊಂಡ ‘The most …. all’ ಎಂಬ ಮಾತು? ಇಂದು ಇದು ಭಾರತದಲ್ಲಿ ಜರುಗುತ್ತಿಲ್ಲವೇ? ಹೌದು ಎಂದೆನ್ನಿಸಿಬಿಡುತ್ತದೆ.

ಈಗ ಕರ್ನಾಟಕ ರಾಜ್ಯ ಸರ್ಕಾರ ಜೂನ್ 2020 ರಂದು ಭೂಸುಧಾರಣೆ ಕಾಯ್ದೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಕೂಡ ರೈತರ ಏಳ್ಗೆಗಾಗಿ ಎನ್ನುತ್ತಲೇ ಅವರ ಬದುಕನ್ನೇ ಎತ್ತಂಗಡಿಯಾಗಿಸುತ್ತದೆ. ಇದರ ಮೂಲ ಹುಡುಕಿದರೆ ಇದರ ಕಾರಸ್ಥಾನ ತಮಗೆಲ್ಲಾ ಗೊತ್ತಿರಬಹುದು. ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರ ಸರ್ಕಾರದ ಪ್ರಗತಿಪರವಾದ 2013 ರ ಭೂಸ್ವಾಧೀನ ಕಾಯ್ದೆಗೆ 2015 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸುಗ್ರೀವಾಜ್ಞೆ ತಂದು ಭೂಸುಧಾರಣೆಯ ಬುಡವನ್ನೇ ಕತ್ತರಿಸಿ ಧ್ವಂಸ ಮಾಡಲು ಹವಣಿಸಿತ್ತು.

ಇದರೂ ಓದ: ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ಬ್ರಿಟಿಷ್ ಕಾಲದ 1894 ರ ಕಾಯ್ದೆಯಲ್ಲಿ ಭೂಮಿಯ ಮಾಲೀಕರಿಗೆ ಆಕ್ಷೇಪ ಎತ್ತಲು ಅವಕಾಶವಾದರೂ ಇತ್ತು. ಆದರೆ ಆ ಬಿಜೆಪಿ ಸುಗ್ರೀವಾಜ್ಞೆ ಅದನ್ನೂ ಕಿತ್ತುಕೊಂಡಿತ್ತು. ಇದನ್ನು ಎಂ.ಲಕ್ಷ್ಮಣ ಅವರು 8 ಪುಟಗಳ ಒಂದು ಫೋಲ್ಡರ್‌‌ನಲ್ಲಿ ಬಿಜೆಪಿಯ ಅಮಾನುಷ ಸುಗ್ರೀವಾಜ್ಞೆಯ ವಿವರಗಳನ್ನು ಬಿಚ್ಚಿಡುತ್ತಾರೆ. ಆ ಸುಗ್ರೀವಾಜ್ಞೆಯ ವಿರುದ್ಧ ಆಗ ಭುಗಿಲೆದ್ದ ಪ್ರತಿಭಟನೆಗಳು ಬಿಜೆಪಿ ಸುಗ್ರೀವಾಜ್ಞೆಯನ್ನು ತಡೆಗಟ್ಟುತ್ತವೆ. ಆಗ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ಆ ಸುಗ್ರೀವಾಜ್ಞೆಯನ್ನೇನೋ ಹಿಂತೆಗೆದುಕೊಳ್ಳುತ್ತದೆ. ನೆನಪಿರಲಿ, ಅದನ್ನು ರದ್ದು ಮಾಡಿಲ್ಲ! ಬಹುಶಃ ಹೊಂಚು ಹಾಕುತ್ತಿದೆ.

ಇದರ ವಾಸನೆ ಹಿಡಿದು ನೋಡುವುದಾದರೆ, ಟೆಸ್ಟಿಂಗ್ ಡೋಸ್ ಎಂಬಂತೆ ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಈ ತಿದ್ದುಪಡಿ ಸುಗ್ರೀವಾಜ್ಞೆ ತಂದಿರಬಹುದು ಅನ್ನಿಸುತ್ತದೆ. ರೈತಾಪಿ ಹಿತ ಕಾಪಾಡುವ ದೇವರಾಜ್ ಅರಸು ಅವರ 1974 ರ ಕಾಯ್ದೆಗಳನ್ನೆಲ್ಲಾ ನಿರ್ದಯವಾಗಿ ಈ ಸುಗ್ರೀವಾಜ್ಞೆ ಕತ್ತರಿಸಿ ಹಾಕಿದೆ.

ಈ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಮನಮುಟ್ಟುವಂತೆ ಮಾತಾಡಿದ್ದಾರೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ಗಂಭೀರವಾದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಹಾಗೆ ಶಿವಸುಂದರ್ ಚಿಕಿತ್ಸಕ ನೋಟ ಬೀರಿದ್ದಾರೆ. ಹೆಚ್ಚು ವಿವರಗಳಿಗೆ ನಾನು ಹೋಗುವುದಿಲ್ಲ. ಎಷ್ಟೂಂತ, ಯಾವು ಯಾವುದು ಅಂತ ಹೇಳುವುದು?

ಇದನ್ನೂ ಓದಿ: ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

‘ಕೊರೋನಾ ಎಂಬ ದೇವರ ಆಟದಿಂದ ರಾಜ್ಯಗಳ ಬಾಬ್ತು ನೀಡಲು ಆಗುತ್ತಿಲ್ಲ’ ಎನ್ನುವ ಅರ್ಥಸಚಿವರನ್ನು ಭಾರತ ಪಡೆದಿದೆ! ಭಾರತದ ಒಕ್ಕೂಟ ವ್ಯವಸ್ಥೆಯ ಬುಡವನ್ನೇ ಕಡಿದು ಹಾಕಿ, ರಾಜ್ಯಗಳ ಸ್ಥಾನವನ್ನು ದೈನೇಸಿ ಸ್ಥಾನಕ್ಕೆ ತಳ್ಳುವ ಜಿಎಸ್‌ಟಿ ತಂದು ದೆವ್ವದ ಆಟ ಆಡಿದವರು ಯಾರು? ಜನರಿಗೆ ಕನಸು ಕಾಣಿಸಿ ನೋಟ್‌ಬ್ಯಾನ್ ತಂದು ಭಾರತದ ಬದುಕನ್ನ ದುಃಸ್ವಪ್ನ ಮಾಡಿದ ಭೂತದ ಆಟ ಆಡಿದವರು ಯಾರು? ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

ಯಾಕೆಂದರೆ ಕೊರೋನಾ ಭೀಕರ ವಾತಾವರಣದಲ್ಲಿ ಜನ ಸಮುದಾಯ ಧ್ವನಿ ತೆಗೆಯಲು ಕಷ್ಟಕರವಾದ ಸನ್ನಿವೇಶವನ್ನೇ ದುರ್ಬಳಕೆ ಮಾಡಿಕೊಂಡು, ಖಾಸಗಿ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಸರ್ವಸ್ವವನ್ನೂ ಧಾರೆ ಎರೆಯುವ ಕಾಯ್ದೆಗಳನ್ನು ಜಾರಿಗೆ ತರುತ್ತಿರುವುದನ್ನು ನೋಡುತ್ತಿದ್ದರೆ ಇನ್ನೇನು ಹೇಳಬೇಕು? ‘The most unkindest cut of all’ ಎಂದೇ ಅನ್ನಿಸುತ್ತದೆ.

ಇಂತಹ ಧಾರುಣ ಪರಿಸ್ಥಿತಿಯಲ್ಲೂ, ಎಷ್ಟೆಂದರೆ, ಬಾಲಾಕೋಟ್ ವಾಯುದಾಳಿಯ ಸಂದರ್ಭದಲ್ಲಿ “…ಮೋಡಗಳಿವೆ, ಮಳೆ ಬರ‍್ತಾ ಇದೆ ಅಂದರೆ ನಾವು ರಾಡಾರ್‌ನಿಂದ ಬಚಾವ್ ಆಗಬಹುದು. ದಾಳಿ ಮಾಡಿ” ಎಂದು ದೇಶದ ಚುಕ್ಕಾಣಿ ಹಿಡಿದ ವ್ಯಕ್ತಿ ಸ್ಪ್ಯಾನಿಷ್ ಲೇಖಕ ಸರ್ವಂಟೀಸ್‌ನ ಕಾದಂಬರಿಯ ನಾಯಕ ಡಾನ್‌ಕ್ವಿಕ್ಯಾಟ್‌ನ ತದ್ರೂಪಿಯಂತೆ ವರ್ತಿಸುತ್ತಿದ್ದರೂ ಇದನ್ನೆಲ್ಲಾ ನೋಡಿಯೂ ಭ್ರಮಾಲೋಕದಲ್ಲಿ ಬದುಕುತ್ತಿರುವುದೇನೋ ಎಂಬಂತಿರುವ ಭಾರತಕ್ಕೆ, ಇಂದು ಸೆಪ್ಟೆಂಬರ್ 5, 2020 ಸುಮಾರು 500 ರಷ್ಟು ಮಹಿಳಾ ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂದು ಒಕ್ಕೊರಲಿನಿಂದ ಕೂಗಿ ಹೇಳುತ್ತಿವೆ.

ಅವರು ಮಹಿಳೆಯರ ಸಮಸ್ಯೆಗಳನ್ನು ಮಾತ್ರ ಎತ್ತುತ್ತಿಲ್ಲ; ರೈತ, ದಲಿತ, ಕಾರ್ಮಿಕ, ದಿನಗೂಲಿ, ವಲಸೆ ಕಾರ್ಮಿಕರು, ಪೌರ ಕಾರ್ಮಿಕರು, ಪ್ರಕೃತಿ-ಪರಿಸರ, ಪೌರತ್ವದ ಪ್ರಶ್ನೆ, ರಾಜಕೀಯ ಕೈದು, ಮಾಹಿತಿ ಹಕ್ಕು ಕಾಯ್ದೆ… ಇತ್ಯಾದಿ ಹೀಗೆ ಎಲ್ಲವನ್ನೂ ಕೂಡಿಸಿ ಹೇಳುತ್ತಾ “ನಮ್ಮ ಸಂವಿಧಾನ ಮತ್ತು ಪ್ರಜಾತಂತ್ರವನ್ನು ರಕ್ಷಿಸಿಕೊಳ್ಳಲು ನಾವು ಒಂದುಗೂಡುತ್ತಿದ್ದೇವೆ” ಎಂದು ಕೂಗಿ ಹೇಳುತ್ತಿದ್ದಾರೆ. ಒಂಟಿ ಸಂಘಟನೆಗಳಾದ ನಾವೂ ಕೂಡ ಒಕ್ಕೂಟವಾಗಬೇಕಾಗಿದೆ. ಎಲ್ಲರೂ ಸಮುದಾಯದೊಳಗೆ ಕರಗಿ ಹೋಗಬೇಕಾಗಿದೆ.

ಸಮುದಾಯದೊಳಗಿಂದ ಹೊಸ ಮಾತು, ಹೊಸ ನುಡಿಗಟ್ಟು, ಹೊಸ ನಡೆ ಹುಟ್ಟಬೇಕಾಗಿದೆ. ಅದು ಇದೀಗ ಚಿಗುರೊಡೆಯುತ್ತಿದೆ ಎಂದೆನಿಸುತ್ತಿದೆ.

ಕೃಪೆ: ನಮ್ಮ ಬನವಾಸಿ


ಇದನ್ನೂ ಓದಿ: ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...